Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ...

ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅನುಮೋದನೆ

ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ : ಕಾನೂನು ಸಚಿವ ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ28 Oct 2024 4:09 PM IST
share
ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ‘ಒಳ ಮೀಸಲಾತಿ’ ಕಲ್ಪಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ನೀಡಿರುವ ತೀರ್ಪನ್ನು ಯಾವ ರೀತಿ ಜಾರಿ ಮಾಡಬಹುದು ಎಂಬುದರ ಕುರಿತು ವರದಿ ನೀಡಲು ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಆಯೋಗಕ್ಕೆ ಸೂಕ್ತವಾದ ಮಾರ್ಗಸೂಚಿಗಳನ್ನು ನೀಡಲಾಗುವುದು. ಮೂರು ತಿಂಗಳಲ್ಲಿ ನಂಬಲರ್ಹ ದಾಖಲೆಗಳು ಮತ್ತು ದತ್ತಾಂಶವನ್ನು ಸಂಗ್ರಹಿಸಿ, ಸರಕಾರಕ್ಕೆ ವರದಿ ನೀಡುವಂತೆ ಆಯೋಗಕ್ಕೆ ಸೂಚನೆ ನೀಡಲಾಗುವುದು ಎಂದು ಹೇಳಿದರು.

ಆಯೋಗವು ತನ್ನ ವರದಿ ನೀಡುವವರೆಗೂ ಮುಂದಿನ ನೇಮಕಾತಿ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ. ಸಚಿವ ಸಂಪುಟದ ತೀರ್ಮಾನದ ಬಳಿಕ ಯಾವುದಾದರೂ ನೇಮಕಾತಿಗೆ ಅಧಿಸೂಚನೆ ಹೊರಡಿಸಿದಲ್ಲಿ, ಆಯೋಗದ ವರದಿಯನ್ನು ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್.ಕೆ. ಪಾಟೀಲ್ ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ಸದಾಶಿವ ಆಯೋಗದ ವರದಿಯನ್ನು 2022ರಲ್ಲಿ ಬಿಜೆಪಿ ಸರಕಾರ ತಿರಸ್ಕಾರ ಮಾಡಿದೆ. ಒಳ ಮೀಸಲಾತಿಯನ್ನು ಸಾಂವಿಧಾನಿಕ ಹಾಗೂ ಕಾನೂನು ರೀತಿಯಲ್ಲಿ ನೀಡಬೇಕು ಎಂದು ನಮ್ಮ ಸರಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿತ್ತು. ಈಗ ಸುಪ್ರೀಂಕೋರ್ಟ್ ರಾಜ್ಯ ಸರಕಾರಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ನೀಡಿದೆ ಎಂದು ಹೇಳಿದರು.

ನಮ್ಮ ಪಕ್ಷ ಚುನಾವಣಾ ಪೂರ್ವ ಚಿತ್ರದುರ್ಗದಲ್ಲಿ ನಡೆಸಿದ ಸಮಾವೇಶದಲ್ಲಿ ಒಳ ಮೀಸಲಾತಿ ಜಾರಿ ಮಾಡುವುದಾಗಿ ಘೋಷಣೆ ಮಾಡಿತ್ತು. ಅಲ್ಲದೇ, ಚುನಾವಣಾ ಪ್ರಣಾಳಿಕೆಯಲ್ಲೂ ಭರವಸೆ ನೀಡಿತ್ತು. ನಾವು ಒಳ ಮೀಸಲಾತಿ ಕಲ್ಪಿಸಲು ಬದ್ಧರಾಗಿದ್ದೇವೆ. ದಲಿತ ಪಂಗಡಗಳ ಎಡ, ಬಲ, ಭೋವಿ, ಲಂಬಾಣಿಗಳ ಸಮೂಹಗಳು ಈ ಸಂಬಂಧ ಚರ್ಚೆ ಮಾಡಿವೆ. ಅವರೆಲ್ಲರೂ ಒಳ ಮೀಸಲಾತಿ ಪರವಾಗಿ ಇದ್ದಾರೆ. ನಂಬಲರ್ಹವಾದ ಮಾಹಿತಿ ಪಡೆದುಕೊಂಡು ಒಳ ಮೀಸಲಾತಿ ಜಾರಿ ಮಾಡುವಂತೆ ಹೇಳಿದ್ದಾರೆ ಎಂದು ಮಹದೇವಪ್ಪ ತಿಳಿಸಿದರು.

ನಂಬಲರ್ಹವಾದ ಮಾಹಿತಿಯೂ ಜನಗಣತಿಯಲ್ಲಿ ಮಾತ್ರ ಸಿಗುತ್ತದೆ. ಆದುದರಿಂದ, ಈ ಸಂಬಂಧ ಆಯೋಗಕ್ಕೆ ಜವಾಬ್ದಾರಿ ನೀಡಿ, ಸುಪ್ರೀಂಕೋರ್ಟ್ ತೀರ್ಮಾನದ ಹಿನ್ನೆಲೆಯಲ್ಲಿ ಯಾವ ರೀತಿ ಇದನ್ನು ಮಾಡಬಹುದು ಎಂದು ವರದಿ ನೀಡುವಂತೆ ಸೂಚಿಸಲಾಗುವುದು. ಈಗಾಗಲೆ ತೆಲಂಗಾಣ ರಾಜ್ಯದಲ್ಲಿಯೂ ಆಯೋಗ ರಚನೆ ಮಾಡಲಾಗಿದೆ. ಕುಂಟು ನೆಪ ಹೇಳುವ ತೀರ್ಮಾನ ನಾವು ಮಾಡಿಲ್ಲ. ಎಲ್ಲ ಶಾಸಕರು, ಸಚಿವರು ಚರ್ಚೆ ಮಾಡಿ, ಒಗ್ಗಟ್ಟಾಗಿದ್ದೇವೆ. ಆಯೋಗಕ್ಕೆ ನೀಡುವ ಮಾರ್ಗಸೂಚಿಗಳನ್ನು ನೋಡಿದ ಬಳಿಕ ಎಲ್ಲರಿಗೂ ಗೊಂದಲ ಬಗೆಹರಿಯಲಿದೆ ಎಂದು ಅವರು ಹೇಳಿದರು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, 30 ವರ್ಷದ ಹೋರಾಟಕ್ಕೆ ಇವತ್ತು ಫಲ ಸಿಕ್ಕಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿವಾಸದಲ್ಲಿ ನಾವೆಲ್ಲ ಶಾಸಕರು, ಸಚಿವರು ಸೇರಿ ಚರ್ಚಿಸಿ ಪರಸ್ಪರ ವಿಶ್ವಾಸದಿಂದ ಒಗ್ಗಟ್ಟಾಗಿ ಮುಂದೆ ಹೋಗುವ ತೀರ್ಮಾನ ಮಾಡಿದ್ದೇವೆ. ಸರಕಾರ ಒಳ ಮೀಸಲಾತಿ ಕಲ್ಪಿಸಲು ಮಾಡಿರುವ ತೀರ್ಮಾನಕ್ಕೆ ಅಂಭಿನಂದನೆ ಸಲ್ಲಿಸುತ್ತೇನೆ. ನಮ್ಮ ಒಳ ಪಂಗಡಗಳು ಎಲ್ಲ ಸೇರಿ ಆಯೋಗ ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಾಯ ಮಾಡುತ್ತೇವೆ. ಸಂಘ ಸಂಸ್ಥೆಗಳು ತೀಕ್ಷ್ಣವಾದ ಟೀಕೆಗಳನ್ನು ಮಾಡುವುದು ಬಿಟ್ಟು, ವಾಸ್ತವ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್.ಆಂಜನೇಯ, ವಿಧಾನಪರಿಷತ್ ಸದಸ್ಯ ಸುಧಾಮ ದಾಸ್, ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಉಪಸ್ಥಿತರಿದ್ದರು.

ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆಯಲು ಪ್ರತ್ಯೇಕ ಪೊಲೀಸ್ ಠಾಣೆ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನು ವಿಶೇಷ ಪೊಲೀಸ್ ಠಾಣೆಗಳೆಂದು ಘೋಷಿಸಲು ಹಾಗೂ ಈ ಠಾಣೆಗಳ ನಿರ್ವಹಣೆಗಾಗಿ ಅಗತ್ಯವಿರುವ 450 ವಿವಿಧ ಹುದ್ದೆಗಳಿಗೆ ಸಚಿವ ಸಂಪುಟ ಮಂಜೂರಾತಿ ನೀಡಿದೆ. ಹೆಚ್ಚುವರಿ ಸಿಬ್ಬಂದಿಗಳಿಗೆ 37.79 ಕೋಟಿ ರೂ.ಗಳ ಆವರ್ತಕ ವೆಚ್ಚವಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಲಾ ಶೇ.50ರಷ್ಟು ಭರಿಸಲಿವೆ. ಈ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಒದಗಿಸಲಾಗುವುದು. ಪರಿಶಿಷ್ಠರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ತುಂಬಾ ಕಡಿಮೆಯಿರುವುದರಿಂದ ಪ್ರತ್ಯೇಕವಾಗಿ ಇಂತಹ ಪ್ರಕರಣಗಳನ್ನು ನಿರ್ವಹಿಸಲು ಸಹಕಾರಿಯಾಗುತ್ತದೆ.

-ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X