Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಕ್ಕೆ ವಿಶೇಷ ಅನುದಾನ ಬಾರದಂತೆ...

ರಾಜ್ಯಕ್ಕೆ ವಿಶೇಷ ಅನುದಾನ ಬಾರದಂತೆ ನಿರ್ಮಲಾ ಸೀತಾರಾಮನ್ ತಡೆ: ಸಿಎಂ ಸಿದ್ದರಾಮಯ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ6 July 2023 7:00 PM IST
share
ರಾಜ್ಯಕ್ಕೆ ವಿಶೇಷ ಅನುದಾನ ಬಾರದಂತೆ ನಿರ್ಮಲಾ ಸೀತಾರಾಮನ್ ತಡೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು, ಜು. 6: ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಬರಬೇಕಾದ 5,495 ಕೋಟಿ ರೂ.ಅನುದಾನವನ್ನು ತಪ್ಪಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.

ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಕೇಂದ್ರದಲ್ಲಿ ಹಣಕಾಸು ಸಚಿವರಾಗಿದ್ದಾರೆ. ಆದರೆ ರಾಜ್ಯಕ್ಕೆ ವಿಶೇಷ ಅನುದಾನವನ್ನು ತಡೆ ಹಿಡಿದ್ದಾರೆ. ಹೀಗಾಗಿ ರಾಜ್ಯಕ್ಕೆ ಬರಬೇಕಾಗಿದ್ದ 5,495ಕೋಟಿ ರೂ.ಅನುದಾನ ಕಡಿತಗೊಂಡಿದೆ. ಈ ಅನುದಾನವನ್ನು ಪಡೆಯುವಂತೆ ನಾನು ಅಂದಿನ ಬಿಜೆಪಿ ಸರಕಾರಕ್ಕೆ ತಿಳಿಸಿದ್ದೇನೆ. ಆದರೆ ಪತ್ರ ಬರೆಯುತ್ತೇವೆ ಎಂದು ಹೇಳಿ ವಿಷಯವನ್ನು ತಳ್ಳಿ ಹಾಕಿತು’ ಎಂದು ಹೇಳಿದರು.

‘15ನೆ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ 5,495ಕೋಟಿ ರೂ.ವಿಶೇಷ ಅನುದಾನವನ್ನು ನೀಡಬೇಕು ಎಂದು ಉಲ್ಲೇಖಿಸಿತ್ತು. ಆದರೆ ಕೇಂದ್ರ ಸಚಿವೆ ಅಂತಿಮ ವರದಿಯನ್ನು ಸಲ್ಲಿಸುವಾಗ ಈ ಅನುದಾನವನ್ನು ತಡೆಹಿಡಿದಿದ್ದಾರೆ. ರಾಜ್ಯ ಈ ವಿಶೇಷ ಅನುನದಾನವನ್ನು ನೀಡಿದರೆ ಎಲ್ಲ ರಾಜ್ಯಗಳು ಅನುದಾನಕ್ಕೆ ಬೇಡಿಕೆ ಇಡುತ್ತವೆ ಎಂದು ತಿಳಿಸಿದ್ದಾರೆಂದು ಆರೋಪಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಬರುವ ಪಾಲನ್ನು ಪಡೆಯಲು ರಾಜಕಾರಣ ಬದಿಗಿಟ್ಟು ಪಕ್ಷಾತೀತವಾಗಿ ನಾವೆಲ್ಲಾ ಹೋರಾಟ ಮಾಡಬೇಕು. ನಮ್ಮೊಂದಿಗೆ ನೀವು ಕೈಜೋಡಿಸಬೇಕು. ರಾಜ್ಯಕ್ಕಿರುವ ಪಾಲನ್ನು ಪಡೆಯಲು ಹೋರಾಟ ಮಾಡುವ ಜತೆಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ, ವಿರೋಧ ಪಕ್ಷದ ಸದಸ್ಯರನ್ನು ಮನವಿ ಮಾಡಿದರು.

14ನೆ ಹಣಕಾಸು ಆಯೋಗದಲ್ಲಿ ತೆರಿಗೆ ಪಾಲನ್ನು ಶೇ. 4.71ರಷ್ಟು ನೀಡಲಾಗಿತ್ತು. 15ನೆ ಹಣಕಾಸು ಆಯೋಗದಲ್ಲಿ ಶೇ.3.65ರಷ್ಟು ನೀಡಿದ್ದರು. ಹೀಗಾಗಿ ಶೇ.1.06ರಷ್ಟು ಅನುದಾನ ಬರುವುದಕ್ಕೆ ಕೇಂದ್ರ ಸರಕಾರ ತಡೆ ಹಾಕಿತು. ಎರಡನ್ನು ಹೋಲಿಕೆ ಮಾಡಿದರೆ ರಾಜ್ಯಕ್ಕೆ ಅನ್ಯಾಯವಾಗಿದೆ. 16ನೆ ಹಣಕಾಸು ಆಯೋಗದ ರಚನೆ ಸಂಬಂಧ ರಾಜ್ಯ ಸರಕಾರದಿಂದ ಅಗತ್ಯ ಸಲಹೆ ಕೇಳಿದ್ದಾರೆ. 16ನೆ ಹಣಕಾಸು ಆಯೋಗದ ಮುಂದೆ ಸಮರ್ಥವಾಗಿ ವಾದ ಮಂಡಿಸಿ ರಾಜ್ಯಕ್ಕೆ ಬರಬೇಕಾಗಿರುವ ಪಾಲು ಪಡೆಯಲಾಗುವುದು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X