Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. "ಪ್ರಧಾನಿ ಮೋದಿ ಮೇಲಿನ ನಂಬಿಕೆ...

"ಪ್ರಧಾನಿ ಮೋದಿ ಮೇಲಿನ ನಂಬಿಕೆ ತೋರಿಸುವಲ್ಲಿನ ಈ ಯುವತಿಯ ಧೈರ್ಯ ಗಮನಾರ್ಹ": ಚೈತ್ರಾ ಕುಂದಾಪುರ ಕುರಿತ ನಿರ್ಮಲಾ ಸೀತಾರಾಮನ್ ಟ್ವೀಟ್ ವೈರಲ್

ವಾರ್ತಾಭಾರತಿವಾರ್ತಾಭಾರತಿ15 Sept 2023 12:38 PM IST
share
ಪ್ರಧಾನಿ ಮೋದಿ ಮೇಲಿನ ನಂಬಿಕೆ ತೋರಿಸುವಲ್ಲಿನ ಈ ಯುವತಿಯ ಧೈರ್ಯ ಗಮನಾರ್ಹ: ಚೈತ್ರಾ ಕುಂದಾಪುರ ಕುರಿತ ನಿರ್ಮಲಾ ಸೀತಾರಾಮನ್ ಟ್ವೀಟ್ ವೈರಲ್

ಉಡುಪಿ: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಕುಂದಾಪುರದ ಚೈತ್ರಾ ಕುರಿತು ಬಿಜೆಪಿಯ ಹಿರಿಯ ನಾಯಕಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಹಿಂದೆ ಮಾಡಿದ್ದ ಟ್ವೀಟ್ ಈಗ ವೈರಲ್ ಆಗಿದೆ.

2018ರಲ್ಲಿ ಉಡುಪಿ ನಗರದಲ್ಲಿ ಕಾಂಗ್ರೆಸ್, ಎಡಪಕ್ಷಗಳು ಹಮ್ಮಿಕೊಂಡಿದ್ದ ಭಾರತ್ ಬಂದ್ ಕಾರ್ಯಕ್ರಮವನ್ನು ವಿರೋಧಿಸಿದ್ದ ಚೈತ್ರ, ಕಾಂಗ್ರೆಸ್ ಕಾರ್ಯಕರ್ತರ ಜೊತೆ ಜಗಳಕ್ಕಿಳಿದಿದ್ದಳು. ಅಂಗಡಿ, ಮುಂಗಟ್ಟು ಬಂದ್ ಮಾಡುವ ವೇಳೆ ರಸ್ತೆಗಿಳಿದು ಕಾಂಗ್ರೆಸ್ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡು ಮೋದಿ ಪರ ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ಮಾಡಿದ ಹೋರಾಟದ ವೀಡಿಯೋ ಬಿಜೆಪಿ ವರಿಷ್ಠರ ಗಮನಕ್ಕೂ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿತ್ತು.

ಈ ಘಟನೆ ಕುರಿತ ವೀಡಿಯೋ‌ ಒಂದನ್ನು ರೀಟ್ವೀಟ್ ಮಾಡಿ ಚೈತ್ರಾ ಕುಂದಾಪುರಳನ್ನು 'ಡೇರಿಂಗ್ ಗರ್ಲ್' ಎಂದಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ "ಪ್ರಧಾನಿ ಮೋದಿ ಮೇಲಿನ ನಂಬಿಕೆ ತೋರಿಸುವಲ್ಲಿನ ಈ ಯುವತಿಯ ಧೈರ್ಯ ಗಮನಾರ್ಹ" ಎಂದು ಹೇಳಿದ್ದರು.

ಇದರಿಂದ ಚೈತ್ರಾಗೆ ಭಾರೀ ಜನಪ್ರಿಯತೆ ಸಿಕ್ಕಿದ್ದಲ್ಲದೇ ಆಕೆಯ ಮುಂದಿನ ಕಾರ್ಯ ಚಟುವಟಿಕೆಗಳಿಗೆ ಬಲ ನೀಡಿತ್ತು. ನಂತರ ಚೈತ್ರಾ ರಾಜ್ಯಾದ್ಯಂತ ಪ್ರಚೋದನಾಕಾರಿ ಭಾಷಣಗಳ ಮೂಲಕ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದಳು.

ನಿರ್ಮಲಾ ಸೀತರಾಮನ್ ಟ್ವೀಟ್ ಮೂಲಕ ತನ್ನ ಜನಪ್ರಿಯತೆ ಹೆಚ್ಚಿಸಿದ್ದ ಚೈತ್ರಾ, ಇಂದಿಗೂ ತನಗೆ ಬಿಜೆಪಿ ಹಿರಿಯ ನಾಯಕರ ಜೊತೆಗೆ ಬಾಂಧವ್ಯ ಇರುವುದಾಗಿ ಬಿಂಬಿಸಿಕೊಂಡು ಗೋವಿಂದ ಪೂಜಾರಿಗೆ ಕೋಟ್ಯಾಂತರ ರೂ. ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಇದೀಗ ಚೈತ್ರಾ ಕುಂದಾಪುರ ಕುರಿತ ನಿರ್ಮಲಾ ಸೀತಾರಾಮನ್ ಟ್ವೀಟ್ ಸಾಮಾಜಿಕ ಜಾಲತಾಣಗಳಾದ್ಯಂತ ವೈರಲ್ ಆಗುತ್ತಿದ್ದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X