Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೀರು ಹರಿಯಲು ಅಡ್ಡಿಯಾಗದಂತೆ ರಾಜಕಾಲುವೆ...

ನೀರು ಹರಿಯಲು ಅಡ್ಡಿಯಾಗದಂತೆ ರಾಜಕಾಲುವೆ ಮೇಲೆ ಸೇತುವೆ ನಿರ್ಮಿಸಿದರೆ ಒತ್ತುವರಿಯಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ11 Dec 2023 8:19 PM IST
share
ನೀರು ಹರಿಯಲು ಅಡ್ಡಿಯಾಗದಂತೆ ರಾಜಕಾಲುವೆ ಮೇಲೆ ಸೇತುವೆ ನಿರ್ಮಿಸಿದರೆ ಒತ್ತುವರಿಯಲ್ಲ: ಹೈಕೋರ್ಟ್

ಬೆಂಗಳೂರು: ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯುವುದಕ್ಕೆ ಅಡ್ಡಿಯಿಲ್ಲದಂತೆ ಕಾಲುವೆ ಮೇಲೆ ಸೇತುವೆ ನಿರ್ಮಾಣ ಮಾಡುವುದು ಒತ್ತುವರಿ ಮಾಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮೆಸೆಸ್ ಜನಾರ್ಧನ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ರಾಜಕಾಲುವೆಯ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ಸೇತುವೆ ನಿರ್ಮಾಣ ಮಾಡಿ, ರಾಜಕಾಲುವೆ ಒಳಭಾಗದಲ್ಲಿ ಯಾವುದೇ ರೀತಿಯ ನಿರ್ಮಾಣ ಮಾಡದೆ, ನೀರು ಸರಾಗವಾಗಿ ಹರಿಯುವುದಕ್ಕೆ ಅಡ್ಡಿಯಾಗದಂತಿದ್ದರೆ, ಅದು ಒತ್ತುವರಿ ಮಾಡಿದಂತೆ ಆಗುವುದಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣವೇನು?: ಅರ್ಜಿದಾರರ ಕಂಪೆನಿಗೆ ಬೆಂಗಳೂರು ನಗರ ಜಿಲ್ಲಾ ಆನೇಕಲ್ ತಾಲೂಕು, ಅತ್ತಿಬೆಲೆ ಹೋಬಳಿಯ ಎಂ.ಮೇಡಹಳ್ಳಿ ಗ್ರಾಮದಲ್ಲಿ ಜನಾಧಾರ ಶುಭ್ ಹೆಸರಿನಲ್ಲಿ 1,128 ವಸತಿ ಸಮುಚ್ಚಯ ನೀಡುವುದಕ್ಕಾಗಿ 2013ರ ಜನವರಿಯಲ್ಲಿ ಅನುಮತಿ ಸಿಕ್ಕಿತ್ತು.

2013ರ ಜೂನ್ 5 ರಂದು ಆನೇಕಲ್ ಯೋಜನಾ ಪ್ರಾಧಿಕಾರ ನೀಡಿದ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದುಕೊಂಡಿತ್ತು. ಅಲ್ಲದೆ, ಖರೀದಿದಾರರಿಗೆ ವಸತಿ ಸಮುಚ್ಚಯಗಳನ್ನು ಮಾರಾಟ ಮಾಡಲಾಗಿದ್ದು, ಎಲ್ಲ ರೀತಿಯ ಅನುಮತಿಗಳನ್ನು ಪಡೆದುಕೊಂಡಿದ್ದರು.

ಆದರೆ, ಪಿ.ಎಂ. ಕೃಷ್ಣಪ್ಪ ಎಂಬುವರು ನೀಡಿದ ದೂರಿನ ಅನ್ವಯ 2016ರ ಆಗಸ್ಟ್ 19ರಂದು ಆನೇಕಲ್ ಯೋಜನಾ ಪ್ರಾಧಿಕಾರ ತಹಶೀಲ್ದಾರ್ ಗೆ ಅರ್ಜಿದಾರರ ವಸತಿ ಸಮುಚ್ಚಯದಲ್ಲಿ ರಾಜಕಾಲುವೆ ಸೇತುವೆ ನಿರ್ಮಾಣ ಮಾಡುವ ಮೂಲಕ ಒತ್ತುವರಿ ಮಾಡಲಾಗಿದೆ ಎಂಬುದಾಗಿ ತಿಳಿಸಲಾಗಿತ್ತು. ಪರಿಣಾಮ ತಹಶೀಲ್ದಾರ್ ಅವರು ವಸತಿ ಸಮುಚ್ಚಯದ ಮುಂದೆ ಒತ್ತುವರಿ ಮಾಡಲಾಗಿದೆ ಎಂಬುದಾಗಿ ಫಲಕ ಅಳವಡಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಭೂ ದಾಖಲೆಗಳ ಇಲಾಖೆ ಹೆಚ್ಚುವರಿ ನಿರ್ದೇಶಕರ ಮೂಲಕ ಸರ್ವೇ ಕಾರ್ಯ ನಡೆಸಲಾಗಿದೆ. ಅದರಂತೆ ಗ್ರಾಮದ ನಕ್ಷೆಯಲ್ಲಿ ಇರುವಂತೆ ರಾಜಕಾಲುವೆ ಮೇಲೆ ಯಾವುದೇ ಕಟ್ಟಡ ನಿರ್ಮಾಣ ಮಾಡಿಲ್ಲ ಎಂಬುದಾಗಿ ತಿಳಿಸಲಾಗಿದೆ. ಜೊತೆಗೆ, ವಸತಿ ಸಮುಚ್ಚಯವು ರಾಜಕಾಲುವೆ ಎರಡೂ ಬದಿಗಳಲ್ಲಿದ್ದು, ಅಲ್ಲಿಯ ನಿವಾಸಿಗಳು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಿಬರುವುದಕ್ಕಾಗಿ ಮೂರು ಕಡೆಗಳಲ್ಲಿ ಸೇತುವೆ ನಿರ್ಮಾಣ ಮಾಡಲಾಗಿದೆ.

ಆದರೆ, ನೀರು ಸರಾಗವಾಗಿ ಹರಿದುಹೋಗಲು ಕಾಂಕ್ರೀಟ್ ಪೈಪ್ ಅಳವಡಿಸಲಾಗಿದ್ದು, ನೀರು ಹರಿಯುವುದಕ್ಕೆ ಯಾವುದೇ ಅಡ್ಡಿಯುಂಟಾಗುವುದಿಲ್ಲ ಎಂದು ಅರ್ಜಿದಾರರು ನ್ಯಾಯಪೀಠಕ್ಕೆ ವಿವರಿಸಿದ್ದರು.

ಸರಕಾರದ ಪರ ವಕೀಲರು, ರಾಜಕಾಲುವೆ ಮೇಲೆ ಯಾವುದೇ ಸೇತುವೆ ನಿರ್ಮಾಣ ಮಾಡಿಲ್ಲ. ಆದರೆ, ವಸತಿ ಸಮುಚ್ಚಯದಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಜನ ಹೋಗಿ ಬರಲು ಸೇತುವೆ ನಿರ್ಮಾಣ ಮಾಡಿದ್ದಾರೆ. ಇದರಿಂದ ನೀರು ಸರಾಗವಾಗಿ ಹರಿಯಲು ಯಾವುದೇ ಅಡ್ಡಿಯಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X