Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಈಡಿಗ ಸಮುದಾಯಕ್ಕೆ ಮತ್ತೊಂದು ಸಚಿವ...

ಈಡಿಗ ಸಮುದಾಯಕ್ಕೆ ಮತ್ತೊಂದು ಸಚಿವ ಸ್ಥಾನ, ನಿಗಮಕ್ಕೆ 500 ಕೋಟಿ ರೂ. ಅನುದಾನ ನೀಡುವಂತೆ ಒತ್ತಾಯ

ಈಡಿಗ, ಬಿಲ್ಲವ, ನಾಮಧಾರಿ ಸೇರಿ 25 ಪಂಗಡಗಳ ಜಾಗೃತ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ10 Dec 2023 8:35 PM IST
share
ಈಡಿಗ ಸಮುದಾಯಕ್ಕೆ ಮತ್ತೊಂದು ಸಚಿವ ಸ್ಥಾನ, ನಿಗಮಕ್ಕೆ 500 ಕೋಟಿ ರೂ. ಅನುದಾನ ನೀಡುವಂತೆ ಒತ್ತಾಯ

ಬೆಂಗಳೂರು: ಆರ್ಯ ಈಡಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.ಅನುದಾನ ಬಿಡುಗಡೆ ಮಾಡುವಂತೆ ಹಾಗೂ ತಮ್ಮ ಸಮುದಾಯಕ್ಕೆ ಮತ್ತೊಂದು ಸಚಿವ ಸ್ಥಾನ ನೀಡುವಂತೆ ಆರ್ಯ ಈಡಿಗ ಸಮುದಾಯದ ಮುಖಂಡರು ಸರಕಾರವನ್ನು ಆಗ್ರಹಿಸಿದ್ದಾರೆ.

ರವಿವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಆರ್ಯ ಈಡಿಗರ ಸಂಘ ಅಮೃತ ಮಹೋತ್ಸವ ಹಾಗೂ ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 25 ಪಂಗಡಗಳ ಬೃಹತ್ ಜಾಗೃತ ಸಮಾವೇಶದಲ್ಲಿ ಮಾತನಾಡಿದ ಆರ್ಯ ಈಡಿಗ ಸಮುದಾಯದ ಪ್ರಮುಖ ನಾಯಕರು, ಶಾಸಕರು ನಾರಾಯಣ ಗುರುಗಳ ಹೆಸರಿನಲ್ಲಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠಗಳು ಸ್ಥಾಪನೆಯಾಗಬೇಕು. ಅಲ್ಲದೇ, 50 ಲಕ್ಷ ಜನಸಂಖ್ಯೆ ಇರುವ ಈ ಸಮಾಜಕ್ಕೆ ಒಂದು ನಿಗಮ ಮಾಡುವ ಮೂಲಕ 500 ಕೋಟಿ ರೂಪಾಯಿ ಹಣ ಒದಗಿಸಬೇಕು. ಜೊತೆಗೆ, ಈಡಿಗ ಸಮುದಾಯದಿಂದ ಯಾರಾದರೂ ಮತ್ತೊಬ್ಬರಿಗೆ ಮಂತ್ರಿ ಸ್ಥಾನ ನೀಡಿ ಎಂದು ಸರಕಾರವನ್ನು ಒತ್ತಾಯಿಸಿದರು.

ಸಮಾವೇಶದಲ್ಲಿ ಭಾಗವಹಿಸಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಈ ಸಮಾಜ ಹಿಂದುಳಿದಿದೆ. ನಮ್ಮದೇ ಆದ ಸರಕಾರ ಬಂದಿದೆ. ನಮ್ಮದೇ ಮುಖ್ಯಮಂತ್ರಿಗಳಿದ್ದಾರೆ. ಈ ಸರಕಾರ ನಮ್ಮ ಪರವಾಗಿದೆ. ನಮ್ಮ ಸಮಾಜವನ್ನು ಎತ್ತರಕ್ಕೆ ಕೊಂಡೊಯ್ಯಬೇಕು. ನಾವು ಬಂಗಾರಪ್ಪನವರ ಗರಡಿಯಲ್ಲಿ ಕಲಿತವರು. ಈ ಸಮಾಜದ ಪರವಾಗಿ, ನಿಮ್ಮ ಪರವಾಗಿ ದನಿಯಾಗಿ ಇರುತ್ತೇವೆ ಎಂದು ತಿಳಿಸಿದರು.

ಮಾಜಿ ಸಚಿವ ಎಚ್.ಹಾಲಪ್ಪ ಮಾತನಾಡಿ, ಹಕ್ಕೋತ್ತಾಯ ಮಾಡಲು ಅಧಿಕಾರದಲ್ಲಿ ಇರುವವರನ್ನು ಕರೆದಿದ್ದೇವೆ. ನಮ್ಮ ಹಕ್ಕು. ನಮ್ಮ ಸಮಾಜದಲ್ಲಿ ಮೂಲಭೂತ ಸಮಸ್ಯೆಗಳಿವೆ. ಡಿ.ಕೆ.ಶಿವಕುಮಾರ್ ಅವರನ್ನು ಟ್ರಬಲ್ ಶೂಟರ್ ಎನ್ನುತ್ತಾರೆ. ನಮ್ಮ ಸಮಸ್ಯೆಗಳನ್ನು ಹೋಗಲಾಡಿಸಬೇಕು ಎಂದರು.

ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಮಾತನಾಡಿ, ಕಾಂತರಾಜ ಆಯೋಗದ ವರದಿಯನ್ನು ಬಹಿರಂಗಪಡಿಸಬೇಕು. ಆಗ ಹಿಂದುಳಿದ ಸಮುದಾಯದ ಸಮಸ್ಯೆಗಳಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗುತ್ತದೆ. ಯಾವ ಪಕ್ಷ ನಮಗೆ ಸ್ಪಂದಿಸುತ್ತದೆಯೋ ಅದಕ್ಕೆ ಸಮುದಾಯ ಚಿರ ಋಣಿಯಾಗಿರಬೇಕಾಗುತ್ತದೆ. ಬಿ.ಕೆ.ಹರಿಪ್ರಸಾದ್ ಅವರು ಈ ಕಾರ್ಯಕ್ರಮಕ್ಕೆ ಬರಬೇಕಿತ್ತು. ಅವರಲ್ಲಿ ಏನು ವ್ಯತ್ಯಾಸವಿದೆಯೋ ಗೊತ್ತಿಲ್ಲ. ಸಮಾಜದಲ್ಲಿ ಈ ರೀತಿಯ ಒಡಕು ಬರಬಾರದು ಎಂದರು.

ಮಾಜಿ ಸಂಸದ ವಿನಯ್ ಕುಮಾರ್ ಸೊರಕೆ ಮಾತನಾಡಿ, ದೇವಾಲಯಕ್ಕೆ ಪ್ರವೇಶ ಇಲ್ಲದೆ ಇರುವಾಗ ಬ್ರಹ್ಮಶ್ರೀ ನಾರಾಯಣ ಗುರುಗಳು ದೇವಸ್ಥಾನವನ್ನು ನಿರ್ಮಿಸಿ, ಇಡೀ ಸಮಾಜಕ್ಕೆ ಬೆಳಕು ಕೊಡುವ ಕೆಲಸವನ್ನು ಮಾಡಿದರು. ಈಡಿಗರು ಮತ್ತು ಬಿಲ್ಲವರು ಅಣ್ಣತಮ್ಮಂದಿರಾಗಿದ್ದೇವೆ. ನಾವೆಲ್ಲ ಒಂದಾಗಿ ಸಾಗುತ್ತಿದ್ದೇವೆ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ನಾರಾಯಣ ಗುರುಗಳ ಹಾದಿಯಲ್ಲಿ ಹೊರಟವರು ಸಿದ್ದರಾಮಯ್ಯನವರು. ಈ ಹಿಂದೆ ಸಿಎಂ ಆಗಿದ್ದಾಗಲೂ ಪ್ರಾಣಾಳಿಕೆಯಲ್ಲಿ ಘೋಷಣೆ ಮಾಡಿದ್ದನ್ನು ಜಾರಿಗೆ ತಂದಿದ್ದರು ಎಂದು ಶ್ಲಾಘಿಸಿದರು.

ನಟ ಶಿವರಾಜ್‍ಕುಮಾರ್ ಮಾತನಾಡಿ, ನನ್ನ ಪತ್ನಿ ರಾಜಕಾರಣದಲ್ಲಿದ್ದಾರೆ, ಅವರ ಆಯ್ಕೆಯನ್ನು ಬೆಂಬಲಿಸುವುದು ನಮ್ಮ ಕರ್ತವ್ಯ. ಅವರ ಇಚ್ಛೆಗೆ ಬದ್ಧನಾಗಿದ್ದೇನೆ. ನನ್ನ ಸಹಕಾರ ಅವರಿಗೆ ಇದ್ದೇ ಇರುತ್ತದೆ ಎಂದರು.

ಸಮಾವೇಶದಲ್ಲಿ ಆರ್ಯ ಈಡಿಗ ಸಮಾಜದ ವಿಖ್ಯಾತಾನಂದ ಸ್ವಾಮೀಜಿ, ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ರೇಣುಕಾನಂದ ಸ್ವಾಮೀಜಿ, ಯೋಗೇಂದ್ರ ಅವಧೂತರು, ಅರುಣಾನಂದ ಸ್ವಾಮೀಜಿ, ಸತ್ಯಾನಂದ ತೀರ್ಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಮಧು ಬಂಗಾರಪ್ಪ, ಚಿತ್ರನಟ ಶಿವರಾಜ್‍ಕುಮಾರ್, ಶ್ರೀಮುರಳಿ, ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಎಂ. ತಿಪ್ಪೇಗೌಡ, ಶಾಸಕರುಗಳಾದ ಭೀಮಣ್ಣ ನಾಯಕ, ಎಚ್.ಆರ್.ಗವಿಯಪ್ಪ, ಉಮಾನಾಥ್ ಕೋಟ್ಯನ್ ಹಾಗೂ ಕುಮಾರ ಬಂಗಾರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X