Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಾಗಲಕೋಟೆಯ ತೋಟಗಾರಿಕೆ ವಿವಿ ಲೆಟರ್...

ಬಾಗಲಕೋಟೆಯ ತೋಟಗಾರಿಕೆ ವಿವಿ ಲೆಟರ್ ಹೆಡ್‍ನಲ್ಲಿ ಸತ್ಯನಾರಾಯಣ ಪೂಜೆ, ನವಗ್ರಹ ಹೋಮಕ್ಕೆ ಆಹ್ವಾನಿಸಿದ ಕುಲಪತಿ!

ವಾರ್ತಾಭಾರತಿವಾರ್ತಾಭಾರತಿ11 Aug 2026 11:24 PM IST
share
ಬಾಗಲಕೋಟೆಯ ತೋಟಗಾರಿಕೆ ವಿವಿ ಲೆಟರ್ ಹೆಡ್‍ನಲ್ಲಿ ಸತ್ಯನಾರಾಯಣ ಪೂಜೆ, ನವಗ್ರಹ ಹೋಮಕ್ಕೆ ಆಹ್ವಾನಿಸಿದ ಕುಲಪತಿ!
►ʼವಿದ್ಯಾರ್ಥಿಗಳ ವೈಜ್ಞಾನಿಕ ಮನೋಭಾವಕ್ಕೆ ಇದು ದೊಡ್ಡ ಹೊಡೆತʼ : ಸಾಹಿತಿಗಳು - ಶಿಕ್ಷಣ ತಜ್ಞರ ಆಕ್ಷೇಪ ►ಕ್ರಮಕ್ಕೆ ಕೋರಿ ಸಿಎಂಗೆ ಬಹಿರಂಗ ಪತ್ರ

ಬೆಂಗಳೂರು: ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿಗಳು ವಿವಿಯ ಅಧಿಕೃತ ಲೆಟರ್ ಹೆಡ್‍ ಬಳಸಿ ಧಾರ್ಮಿಕ ಆಚರಣೆಗೆ ಎಲ್ಲಾ ಸಿಬ್ಬಂದಿ-ವಿದ್ಯಾರ್ಥಿಗಳಿಗೆ ಕಡ್ಡಾಯದಂತಹ ಆಮಂತ್ರಣದ ಹೊರಡಿಸಿರುವುದು ಸಾಹಿತಿ ಹಾಗೂ ಶಿಕ್ಷಣ ತಜ್ಞರ ವಲಯದಲ್ಲಿ ತೀವ್ರ ಆಕ್ಷೇಪಣೆ ಎಡೆಮಾಡಿದ್ದು, ಸೂಕ್ತ ಕ್ರಮಕ್ಕೆ ಕೋರಿ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರವನ್ನು ಬರೆಯಲಾಗಿದೆ.

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ್ ಅವರು ಆಗಸ್ಟ್ 7ರಂದು ಹೊರಡಿಸಿರುವ ಆಮಂತ್ರಣ ಪತ್ರದಲ್ಲಿ ‘ಕುಲಪತಿಗಳ ವಸತಿಗೃಹದಲ್ಲಿ ನಡೆಯಲಿರುವ ಶ್ರೀ ಸತ್ಯನಾರಾಯಣ ಪೂಜೆ, ನವಗ್ರಹ ಶಾಂತಿ ಹೋಮ ಮತ್ತು ಶ್ರೀ ಮಹಾಗಣಪತಿ ಪೂಜಾ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಮುಖ್ಯ ಆವರಣದ ಎಲ್ಲ ಅಧಿಕಾರಿಗಳು, ಬೋಧಕ-ಭೋದಕೇತರ-ಕಾರ್ಮಿಕ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ’ ಎಂದು ನಮೂದಿಸಲಾಗಿದೆ.

ವೈಯಕ್ತಿಕ ನಂಬಿಕೆ ಮತ್ತು ಸಾರ್ವಜನಿಕ ಸಂಸ್ಥೆಯ ಕಾರ್ಯನಿರ್ವಹಣೆ ಬೇರೆ ಬೇರೆ ವಿಷಯಗಳು. ಸತ್ಯನಾರಾಯಣ ಪೂಜೆ, ನವಗ್ರಹ ಹೋಮ ಇವೆಲ್ಲ ವ್ಯಕ್ತಿಯ ವೈಯಕ್ತಿಕ ನಂಬಿಕೆಯಾಗಿದ್ದರೆ ಅದಕ್ಕೆ ಯಾರ ಆಕ್ಷೇಪವೂ ಇಲ್ಲ. ಆದರೆ, ಅದೇ ನಂಬಿಕೆಯನ್ನು ವಿಶ್ವವಿದ್ಯಾಲಯದ ಅಧಿಕೃತ ಲೆಟರ್ ಹೆಡ್, ಕುಲಪತಿಗಳ ಅಧಿಕೃತ ಸಹಿ, ಕುಲಪತಿ ನಾಮೆ ಬಳಕೆ ಮಾಡಿ ಎಲ್ಲಾ ಸಿಬ್ಬಂದಿ-ವಿದ್ಯಾರ್ಥಿಗಳಿಗೆ ಕಡ್ಡಾಯದಂತಹ ಆಮಂತ್ರಣದ ಮೂಲಕ ಸಾರ್ವಜನಿಕಗೊಳಿಸುವುದು ಖಂಡನೀಯ ಎಂದು ಸಾಹಿತಿಗಳು ಬಹಿರಂಗ ಪತ್ರದಲ್ಲಿ ಆಕ್ಷೇಪಿಸಿದ್ದಾರೆ.

ಭಾರತವು ಜಾತ್ಯಾತೀತ, ವಿಜ್ಞಾನ ಮನೋಭಾವದ ಪ್ರಜಾಸತ್ತಾತ್ಮಕ ರಾಷ್ಟ್ರ. ವಿಶ್ವವಿದ್ಯಾಲಯ ಎಂಬುದು ಜಾತಿ, ಧರ್ಮ, ನಂಬಿಕೆ ಮೀರಿದ ಜ್ಞಾನದ ಕೇಂದ್ರ. ಅಂತಹ ಸಂಸ್ಥೆಯ ಮುಖ್ಯಸ್ಥರು ತಮ್ಮ ಹುದ್ದೆಯ ಅಧಿಕಾರ ಬಳಸಿ ಒಂದು ನಿರ್ದಿಷ್ಟ ಧಾರ್ಮಿಕ ಆಚರಣೆಯನ್ನು ಸಂಸ್ಥೆಯ ಮೇಲೆ ಹೇರುವುದು ಸಂವಿಧಾನದ ಆಶಯ ಮತ್ತು ಸೇವಾ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಸಾಹಿತಿಗಳು ಬಹಿರಂಗ ಪತ್ರದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

ಆಹ್ವಾನ ಪತ್ರಿಕೆಯಲ್ಲಿ ʼಆತ್ಮೀಯವಾಗಿ ಆಹ್ವಾನಿಸುತ್ತಾ’ ಎಂದು ಬರೆಯಲಾಗಿದ್ದರೂ, ಕುಲಪತಿಗಳಿಂದ ಬಂದ ಆಮಂತ್ರಣವನ್ನು ತಿರಸ್ಕರಿಸುವ ಧೈರ್ಯ ಅಧೀನ ನೌಕರರು, ವಿದ್ಯಾರ್ಥಿಗಳಿಗೆ ಇರುವುದಿಲ್ಲ. ಇದು ಪರೋಕ್ಷವಾಗಿ ಹೇರಿಕೆಯ ಒತ್ತಡವಾಗಿದೆ ಎಂದು ಸಾಹಿತಿಗಳು ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ.

ಸರಕಾರಿ ಸಂಸ್ಥೆಯಗಿರುವ ತೋಟಗಾರಿಕೆಯಂತಹ ವೈಜ್ಞಾನಿಕ ವಿಷಯವನ್ನು ಕಲಿಸುವ ವಿಶ್ವವಿದ್ಯಾಲಯದ ಕುಲಪತಿಗಳೇ ‘ನವಗ್ರಹ ಶಾಂತಿ ಹೋಮ’ದಂತಹ ಆಚರಣೆಯನ್ನು ಅಧಿಕೃತವಾಗಿ ನಡೆಸಿದರೆ, ವಿವಿಯ ವೈಜ್ಞಾನಿಕ ಮೌಲ್ಯ ಮತ್ತು ವಿದ್ಯಾರ್ಥಿಗಳಲ್ಲಿ ಮೂಡಬೇಕಾದ ವೈಜ್ಞಾನಿಕ ಮನೋಭಾವಕ್ಕೆ ಇದು ದೊಡ್ಡ ಹೊಡೆತವಾಗುತ್ತದೆ. ಸರಕಾರದ ಒಂದು ಸಂಸ್ಥೆಯೇ ಮುಂದೆ ನಿಂತು ಮೌಢ್ಯ ಬಿತ್ತಿ ಬೆಳೆಸಲು ಪೋಷಣೆ ಮಾಡಿದಂತಾಗುತ್ತದೆ ಎಂದು ಸಾಹಿತಿಗಳು ಬಹಿರಂಗ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಈ ರೀತಿಯ ನಡಾವಳಿಗಳು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ‘ಸಾಮಾನ್ಯ’ ಆಗುತ್ತಿರುವುದು ಆತಂಕಕಾರಿ. ಸರಕಾರವೇ ನೇಮಿಸಿದ ಕುಲಪತಿಗಳು ಧಾರ್ಮಿಕ ಆಚರಣೆಗಳ ಪೂಜಾರಿಯಂತೆ ಕಾರ್ಯ ನಿರ್ವಹಿಸುತ್ತಿರುವುದು ವಿಷಾದಕರ ಮತ್ತು ಖಂಡನೀಯ. ಕೂಡಲೇ ರಾಜ್ಯ ಸರಕಾರ ಕುಲಪತಿಗಳನ್ನು ಅಮಾನತ್ತುಗೊಳಿಸಿ, ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಯಾವುದೇ ಧಾರ್ಮಿಕ ಆಚರಣೆಯನ್ನು ಸಂಸ್ಥೆಯ ಹೆಸರಿನಲ್ಲಿ, ಸರಕಾರಿ ಕಟ್ಟಡದಲ್ಲಿ ನಡೆಸಬಾರದು ಎಂದು ಸ್ಪಷ್ಟ ಆದೇಶ ನೀಡಬೇಕು ಎಂದು ಬಹಿರಂಗ ಪತ್ರದಲ್ಲಿ ಸಾಹಿತಿಗಳು ತಿಳಿಸಿದ್ದಾರೆ.

ಸಾಹಿತಿಗಳಾದ ಕುಂ.ವೀರಭದ್ರಪ್ಪ, ಮೂಡ್ನಾಕೂಡು ಚಿನ್ನಸ್ವಾಮಿ, ಬಸವರಾಜ ಸೂಳಿಭಾವಿ, ಡಾ.ಎಚ್.ಎಸ್.ಅನುಪಮಾ, ಕೆ.ಪಿ.ಸುರೇಶ, ನಟರಾಜ ಎಸ್. ಬೂದಾಳು ಹಾಗೂ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ., ದಲಿತ ಹೋರಾಟಗಾರ ಅನಿಲ ಹೊಸಮನಿ ಸೇರಿದಂತೆ ಹಲವರು ಮುಖ್ಯಮಂತ್ರಿಗಳ ಬಹಿರಂಗ ಪತ್ರಕ್ಕೆ ಬೆಂಬಲ ಸೂಚಿಸಿದ್ದಾರೆ.

Tags

BagalkotUniversity of Horticultural Sciences
share
ವಾರ್ತಾಭಾರತಿ
ವಾರ್ತಾಭಾರತಿ
Next Story
X