Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರದ ವೈಫಲ್ಯ ಖಂಡಿಸಿ ಸೆ.1ರಿಂದ 10ರ...

ಸರಕಾರದ ವೈಫಲ್ಯ ಖಂಡಿಸಿ ಸೆ.1ರಿಂದ 10ರ ವರೆಗೆ ಪಾದಯಾತ್ರೆ: ಬಿ.ವೈ. ವಿಜಯೇಂದ್ರ

ರಾಯಚೂರಿನಿಂದ ಆರಂಭ, ಬಳ್ಳಾರಿಯಲ್ಲಿ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ25 Aug 2026 7:18 PM IST
share
ಸರಕಾರದ ವೈಫಲ್ಯ ಖಂಡಿಸಿ ಸೆ.1ರಿಂದ 10ರ ವರೆಗೆ ಪಾದಯಾತ್ರೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸಲು ಬಿಜೆಪಿ ವತಿಯಿಂದ ಸೆ.1ರಿಂದ 10ರ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಯಚೂರಿನಿಂದ ಆರಂಭವಾಗಲಿರುವ ಪಾದಯಾತ್ರೆ ಬಳ್ಳಾರಿಯಲ್ಲಿ ಅಂತ್ಯಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮಂಗಳವಾರ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯ ನಿರ್ಲಕ್ಷ್ಯ, ರೈತರ ಸಂಕಷ್ಟ, ಉದ್ಯೋಗಾವಕಾಶ ಸೃಷ್ಟಿಯಲ್ಲಿನ ವೈಫಲ್ಯ, ಮೀಸಲಾತಿ ಜಾರಿ, ಉತ್ತರ ಕರ್ನಾಟಕದ ಸಮಸ್ಯೆ, ಹೊಸ ನೇಮಕಾತಿ ಬಗ್ಗೆ ಸಿಎಂ ನಿರ್ಲಕ್ಷ್ಯ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ರಾಜ್ಯದ ಜನರಿಗೆ ತಿಳಿಸಿ ಸರಕಾರದ ಬಂಡವಾಳ ಬಯಲು ಮಾಡಲು ಪಾದಯಾತ್ರೆ ನಡೆಸಲಾಗುವುದು ಎಂದರು.

ಕಾಂಗ್ರೆಸ್ ಸರಕಾರ ಭ್ರಷ್ಟಚಾರದಲ್ಲೇ ಮುಳುಗಿದೆ. ಇವರ ಬಣ್ಣವನ್ನು ಬೀದಿಗೆಳೆಯಲು ಬಿಜೆಪಿ ತೀರ್ಮಾನಿಸಿದೆ. ಸೆ.1ರಂದು ರಾಯಚೂರಿನಿಂದ ಪಾದಯಾತ್ರೆ ಆರಂಭವಾಗಲಿದೆ. ಬಳ್ಳಾರಿಯಲ್ಲಿ ಸಮಾರೋಪ ನಡೆಯಲಿದೆ. ಸುಮಾರು 200ಕಿ.ಮೀ ಪಾದಯಾತ್ರೆ ಸಾಗಲಿದೆ. ಉದ್ಘಾಟನೆ ಮತ್ತು ಸರೋಪಕ್ಕೆ ಕೇಂದ್ರ ಸಚಿವರು ಆಗಮಿಸಲಿದ್ದಾರೆ ಎಂದರು.

ಜೆಡಿಎಸ್ ಬೆಂಬಲ:

ಇದು ಬಿಜೆಪಿ ಪಾದಯಾತ್ರೆ. ಇದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡಲಿದ್ದಾರೆ ಎಂದ ಅವರು, ಸತ್ಯವನ್ನು ಎದುರಿಸಲಾಗ ಸರಕಾರ ಅಧಿವೇಶನ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ಅಲ್ಲದೆ, ಜನರ ಸಮಸ್ಯೆಗಳನ್ನು ಚರ್ಚೆ ಮಾಡಲು ಬಿಡದೆ ಅನ್ಯಾಯ ಮಾಡಿದೆ. ಕಲಾಪದ ಅವಧಿಯನ್ನು ಕಡಿತ ಮಾಡಿ ಸರಕಾರ ಪಲಾಯನ ಮಾಡಿದೆ ಎಂದು ದೂರಿದರು.

ಅಧಿವೇಶನ ಆರಂಭಕ್ಕೂ ಮುನ್ನವೇ ಪತ್ರಿಕಾಗೋಷ್ಠಿ ಮಾಡಿ ವಾಲ್ಮೀಕಿ ನಿಗಮ ಹಗರಣದ ಆರೋಪಿ, ನಾಗೇಂದ್ರರನ್ನು ಸಂಪುಟದಿಂದ ಕೈಬಿಡಿ. ಅಧಿವೇಶನದಲ್ಲಿ ಜನರ ಸಮಸ್ಯೆ ಚರ್ಚೆಗೆ ಅವಕಾಶ ನೀಡಿ ಎಂದು ಹೇಳಿದ್ದೆವು. ಆದರೆ ಹಾಗೆ ಮಾಡದೆ ಸರಕಾರ ಅಧಿವೇಶನ ಮೊಟಕು ಮಾಡಿ ಓಡಿ ಹೋಗಿದೆ ಎಂದು ಅವರು ಟೀಕಿಸಿದರು.

ಸಮಯ ವ್ಯರ್ಥ:

ಅಧಿವೇಶನದಲ್ಲಿ ರಾಜ್ಯದ ಸಮಸ್ಯೆಗಳಿಗೆ ಅವಕಾಶ ನೀಡದೆ ಸರಕಾರ ಸಮಯ ವ್ಯರ್ಥ ಮಾಡಿದೆ. ಇತ್ತೀಚೆಗೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ. ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ವೇತನ ನೀಡುತ್ತಿಲ್ಲ. ಕಲ್ಯಾಣ ಯೋಜನೆ ನೀಡುತ್ತಿಲ್ಲ. ಈ ಎಲ್ಲವೂಗಳ ಕುರಿತ ಚರ್ಚೆಗೆ ಸರಕಾರ ಅವಕಾಶ ನೀಡಲಿಲ್ಲ ಎಂದು ದೂರಿದರು.

ಈ ವೇಳೆ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಜನಾರ್ಧನ ರೆಡ್ಡಿ, ರಾಜುಗೌಡ, ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪರಿಷತ್ ಸದಸ್ಯ ಸಿ.ಟಿ. ರವಿ, ಶಾಸಕರಾದ ಪ್ರಭುಚೌಹಾಣ್, ಡಾ.ಶೈಲೇಂದ್ರ ಬೆಲ್ದಾಳೆ, ಮಾನಪ್ಪ ಡಿ.ವಜ್ಜಲ್, ಡಾ.ಎಸ್. ಶಿವರಾಜ್ ಪಾಟೀಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags

BJP PadayatraB.Y. Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X