Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಶುರಾಮ ಪ್ರತಿಮೆ ಮರುಸ್ಥಾಪನೆಗೆ ಕೋರಿ...

ಪರಶುರಾಮ ಪ್ರತಿಮೆ ಮರುಸ್ಥಾಪನೆಗೆ ಕೋರಿ ಪಿಐಎಲ್: ಅರ್ಜಿದಾರರಿಗೆ 5 ಲಕ್ಷ ರೂ. ಠೇವಣಿ ಇರಿಸಲು ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 Aug 2025 9:25 PM IST
share
ಪರಶುರಾಮ ಪ್ರತಿಮೆ ಮರುಸ್ಥಾಪನೆಗೆ ಕೋರಿ ಪಿಐಎಲ್: ಅರ್ಜಿದಾರರಿಗೆ 5 ಲಕ್ಷ ರೂ. ಠೇವಣಿ ಇರಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್‌ನಲ್ಲಿರುವ ಪರಶುರಾಮ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವ್ಯಕ್ತಿಯೊಬ್ಬರಿಗೆ 5 ಲಕ್ಷ ರೂ. ಠೇವಣಿ ಇರಿಸುವಂತೆ ಹೈಕೋರ್ಟ್ ಸೂಚಿಸಿದೆ‌.

ಪರಶುರಾಮ ಪ್ರತಿಮೆಯನ್ನು ಮರು ನಿರ್ಮಿಸಲು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ನಿರ್ದೇಶಿಸುವಂತೆ ಕೋರಿ ಉಡುಪಿಯ ಉದಯ ಶೆಟ್ಟಿ ಮುನಿಯಾಳ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರತಿಮೆ ನಿರ್ಮಾಣಕ್ಕೆ ಅರ್ಜಿದಾರರು ತಮ್ಮ ವೈಯಕ್ತಿಕ ಕಾಣಿಕೆಯಾಗಿ 5 ಲಕ್ಷ ರೂ. ಗಳನ್ನು ನೀಡಬೇಕು. ಈ ಮೊತ್ತವನ್ನು 2 ವಾರಗಳಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಬಳಿ ಠೇವಣಿ ಇಡಬೇಕು ಎಂದು ಸೂಚಿಸಿ, ಅರ್ಜಿ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಹಿಂದೂ ನಂಬಿಕೆಯ ಪ್ರಕಾರ ಪರಶುರಾಮನನ್ನು ತುಳುನಾಡು ಹಾಗೂ ಕರಾವಳಿ ಪ್ರದೇಶದ ಸೃಷ್ಟಿಕರ್ತ ಎಂದು ಭಾವಿಸಲಾಗಿದೆ. ಭಗವಾನ್ ಪರಶುರಾಮನ ಬಗ್ಗೆ ಕರಾವಳಿ ಕರ್ನಾಟಕದ ಲಕ್ಷಾಂತರ ಹಿಂದುಗಳಿಗೆ ಅಪಾರ ಭಕ್ತಿ ಇದೆ. ಪ್ರತಿಮೆ ನಿರ್ಮಾಣ ಆಗದಿದ್ದರೆ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲಿದೆ. ಆದ್ದರಿಂದ, ಪರಶುರಾಮ ಪ್ರತಿಮೆಯನ್ನು ಮರುನಿರ್ಮಿಸಲು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶಿಸಬೇಕು ಎಂದು ಕೋರಿದರು.

ವಾದ ಆಲಿಸಿದ ನ್ಯಾಯಪೀಠ, ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ವಾದಿಸುತ್ತಿದ್ದೀರಿ. ಪ್ರತಿಮೆ ನಿರ್ಮಾಣಕ್ಕೆ ನಿಮ್ಮ ವೈಯಕ್ತಿಕ ಕಾಣಿಕೆ ಏನು ಎಂದು ಪ್ರಶ್ನಿಸಿತಲ್ಲದೆ, ನೀವು 5 ಲಕ್ಷ ರೂ. ಠೇವಣಿ ಇಡುವಿರೇ ಎಂದು ಪ್ರಶ್ನಿಸಿತು. ಅರ್ಜಿದಾರರು ವಕೀಲರು ಅದಕ್ಕೆ ಸಮ್ಮತಿ ಸೂಚಿಸಿದರು.

ಆಗ ನ್ಯಾಯಪೀಠ, ನಿಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತೇವೆ. ನಿಮ್ಮ ಹೇಳಿಕೆಗೆ ಬದ್ಧರಾಗಿರಬೇಕು ಎಂದು ತಿಳಿಸಿತಲ್ಲದೆ, ಮುಂದಿನ 2 ವಾರಗಳಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಬಳಿ 5 ಲಕ್ಷ ರೂ. ಠೇವಣಿ ಇಡಬೇಕು ಎಂದು ಸೂಚಿಸಿ, ವಿಚಾರಣೆ ಮುಂದೂಡಿತು.

ಅರ್ಜಿಯಲ್ಲೇನಿದೆ?

ಕಾರ್ಕಳದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಅನ್ನು 2023ರ ಜನವರಿ 27ರಂದು ಉದ್ಘಾಟಿಸಲಾಗಿದ್ದು, ಅಲ್ಲಿ 33 ಅಡಿ ಎತ್ತರದ ಪರಶುರಾಮನ ಕಂಚಿನ ಪ್ರತಿಮೆಯನ್ನೂ ಲೋಕಾರ್ಪಣೆಗೊಳಿಸಲಾಗಿತ್ತು. ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾಧಿಕಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಾರ್ವಜನಿಕ ಹಣ ವಿನಿಯೋಗಿಸಿ ಪ್ರತಿಮೆ ನಿರ್ಮಿಸಲಾಗಿತ್ತು. ಆದರೆ, ಪ್ರತಿಮೆಯನ್ನು ಒಪ್ಪಂದದಂತೆ ಕಂಚಿನಿಂದ ನಿರ್ಮಿಸುವ ಬದಲಿಗೆ ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಸಾರ್ವಜನಿಕ ಸುರಕ್ಷತೆಗೆ ಅಪಾಯ ಎದುರಾಗುವ ಹಿನ್ನೆಲೆಯಲ್ಲಿ 2023ರ ಅಕ್ಟೋಬರ್ 12ರಂದು ಪ್ರತಿಮೆಯ ಮೇಲ್ಭಾಗವನ್ನು ತೆರವುಗೊಳಿಸಿ, ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇದರಿಂದ, ಥೀಮ್ ಪಾರ್ಕ್ ಅಪೂರ್ಣಗೊಂಡಂತಾಗಿದ್ದು, ಭಕ್ತಾದಿಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪ್ರತಿಮೆ ‌ತಯಾರಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ್ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದುಕೋರಿ ಕೃಷ್ಣ ನಾಯ್ಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 2024ರ ಅಕ್ಟೋಬರ್ 21ರಂದು ವಜಾಗೊಳಿಸಿತ್ತು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, 1,231 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇದರ ನಡುವೆ, ಪ್ರತಿಮೆಯ ಮರುನಿರ್ಮಾಣ ಹಾಗೂ ಮರುಸ್ಥಾಪನೆಗೆ ಪ್ರವಾಸೋದ್ಯಮ ಇಲಾಖೆಯಾಗಲಿ, ಜಿಲ್ಲಾಡಳಿತವಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಿಂದು ಶಾಸ್ತ್ರಗಳು ಮತ್ತು ಸ್ಮೃತಿಗಳ ಪ್ರಕಾರ ಅಪೂರ್ಣವಾದ ಅಥವಾ ಕೆಡವಲಾದ ಪ್ರತಿಮೆಯನ್ನು ಪೂಜಿಸಬಾರದು. ಪ್ರತಿಮೆಯನ್ನು ಅಪವಿತ್ರಗೊಳಿಸುವುದರಿಂದ ಆ ಭಾಗದ ಆಡಳಿತಗಾರರು ಹಾಗೂ ಜನರಿಗೆ ದುರದೃಷ್ಟ ತರುತ್ತದೆ ಎಂಬ ನಂಬಿಕೆ ಇದೆ. ಪರಶುರಾಮ ಪ್ರತಿಮೆ ಮರುಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ, ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X