Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾತೀಯತೆ ತೊಡೆದುಹಾಕಲು ಪ್ರಧಾನಿ ನೀಡಿರುವ...

ಜಾತೀಯತೆ ತೊಡೆದುಹಾಕಲು ಪ್ರಧಾನಿ ನೀಡಿರುವ ಕರೆ ಮೀಸಲಾತಿ ವಿರೋಧಿಸಲು ನೀಡಿದ ಪ್ರಚೋದನೆಯಂತಿದೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ25 Oct 2023 11:40 PM IST
share
ಜಾತೀಯತೆ ತೊಡೆದುಹಾಕಲು ಪ್ರಧಾನಿ ನೀಡಿರುವ ಕರೆ ಮೀಸಲಾತಿ ವಿರೋಧಿಸಲು ನೀಡಿದ ಪ್ರಚೋದನೆಯಂತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ಈ ಸಂಬಂಧ ಎಕ್ಸ್ ನಲ್ಲಿ (ಟ್ವೀಟ್) ಪೋಸ್ಟ್ ಹಾಕಿರುವ ಅವರು, ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ವಿಜಯದಶಮಿ ಪ್ರಯುಕ್ತ ದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದು ತಿಳಿಸಿದ್ದಾರೆ.

ಜಾತೀಯತೆಯ ಜೊತೆ ಪ್ರಾದೇಶಿಕತೆಯನ್ನು ಕೂಡಾ ಪ್ರಧಾನಿ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಪಕ್ಷ ಹಾಗೂ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನಮಂತ್ರಿಯವರಿಂದಲೆ ಬಂದಿರುವುದರಿಂದ ಅವರೆ ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದು ನಮ್ಮ ನಡುವೆ ಇರುವುದನ್ನು ಒಪ್ಪಿಕೊಳ್ಳಬೇಕಲ್ಲವೇ? ಜಾತಿ ಕುರುಡಿನಿಂದ ಜಾತೀಯತೆಯ ನಿರ್ಮೂಲನೆ ಅಸಾಧ್ಯ ಎನ್ನುವುದನ್ನು ನರೇಂದ್ರ ಮೋದಿ ಅವರು ಅರಿತಿದ್ದಾರೆ ಎಂದು ಭಾವಿಸುವೆ ಎಂದು ಅವರು ತಿಳಿಸಿದ್ದಾರೆ.

ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಪ್ರಧಾನಿ ಮೋದಿಯವರು ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X