Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವರ, ಶಾಸಕರ ಕಚೇರಿಗಳಲ್ಲಿ ರಾಜಕೀಯ...

ಸಚಿವರ, ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ: ಬಿಜೆಪಿ ನಿಯೋಗದಿಂದ ಚುನಾವಣಾ ಆಯುಕ್ತರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ31 March 2024 2:23 PM IST
share
ಸಚಿವರ, ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ: ಬಿಜೆಪಿ ನಿಯೋಗದಿಂದ ಚುನಾವಣಾ ಆಯುಕ್ತರಿಗೆ ದೂರು

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವರ ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ ಮುಂದುವರೆದಿರುವ ಕುರಿತು ಬಿಜೆಪಿ ನಿಯೋಗವು ಇಂದು ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿಯೆಂದು ಭಾವಿಸಿರುವಂತೆ ಕಾಣುತ್ತಿದೆ. ದಿನಾಂಕ 30 ಮಾರ್ಚ್ ರಂದು ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧ ಕಚೇರಿಯಲ್ಲಿ ನಜ್ಮಾ ನಜೀರ್ ಚಿಕ್ಕನೇರಳೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯ ಜವಾಬ್ದಾರಿಯುತ ಸಚಿವರು ಅವರಿಗೆ ಸರ್ಕಾರಿ ಕಚೇರಿಯನ್ನು ಪಕ್ಷದ ಚಟುವಟಿಕೆ ಬಳಕೆ ಮಾಡಬಾರದು ಎಂಬುದು ತಿಳಿದಿದೆ, ಹಾಗಿದ್ದರು ನೀತಿ ಸಂಹಿತೆಯನ್ನು ಧಿಕ್ಕರಿಸಿ ರಾಜಕೀಯ ಕಾರ್ಯಕ್ರಮವನ್ನು ನಡೆಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ರವರ ಮೂಗಿನಡಿಯಲ್ಲಿಯೇ ಇದು ನಡೆದರೂ ಯಾವುದೇ ಕ್ರಮ ಜರುಗಿಸಲು ತೋರಿರುವ ಅವರ ನಿಷ್ಕ್ರಿಯತೆಯ ಆತಂಕಕಾರಿಯಾಗಿದೆ ಎಂದು ಮನವಿ ತಿಳಿಸಿದೆ.

ಲೋಕಸಭಾ ಚುನಾವಣೆಗಳು ಘೋಷಣೆಯಾಗಿ ಈಗಾಗಲೇ ನಾಮಪತ್ರ ಸಲ್ಲಿಕೆಯು ಆರಂಭವಾಗಿದೆ. ಆದರೆ ಚುನಾವಣಾ ನೀತಿ ಸಂಹಿತೆಯ ಕಟ್ಟುನಿಟ್ಟನ ಜಾರಿಯಾಗುವುದರಲ್ಲಿ ಸರಕಾರದ ಅಧಿಕಾರಿಗಳಿಂದ ಕೊರತೆ ಎದ್ದು ಕಾಣುತ್ತಿದೆ. ಹಲವಾರು ಆಡಳಿತ ಪಕ್ಷದ ಶಾಸಕರ ಕಚೇರಿಗಳಲ್ಲಿ ಪಕ್ಷದ ಚಟುವಟಿಕೆಗಳು ಇನ್ನೂ ಮುಂದುವರೆದಿದೆ ಎಂದು ತಿಳಿಸಲಾಗಿದೆ.

ಸಚಿವರು ವಿಕಾಸಸೌಧದಿಂದ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದ್ದಾರೆ. ಇದಕ್ಕೆ ಉದಾಹರಣೆಯು ಮಾರ್ಚ್ 25 ರಂದು ಕಂದಾಯ ಸಚಿವ ಕೃಷ್ಣಭೈರೆಗೌಡ ಅವರು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರಕಾರದ ವಿರುದ್ದ ಟೀಕೆ ಮಾಡಿದ್ದಾರೆ. ಚುನಾವಣಾ ಆಯೋಗವು ಕೂಡಲೇ ವಿಧಾನಸೌಧ ಸಚಿವರ ಕಚೇರಿಗಳನ್ನು ಕೂಡಲೇ ಮುಚ್ಚಿಸಬೇಕು. ಸರ್ಕಾರಿ ಕಟ್ಟಡಗಳಲ್ಲಿ ಸಚಿವರಿಗೆ ಮತ್ತು ಶಾಸಕರಿಗೆ ಯಾವುದೇ ರಾಜಕೀಯ ಚಟುವಟಿಕೆ ನಡೆಸದಂತೆ ನಿರ್ಬಂಧ ಹೇರಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಲು ಕೋರುವುದಾಗಿ ಮನವಿ ತಿಳಿಸಿದೆ.

ನಿಯಮವನ್ನು ಮೀರಿ ಅವಕಾಶ ಮಾಡಿಕೊಡುತ್ತಿರುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಯಿತು. ಶಾಸಕ ಸುರೇಶ್ ಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರರಾದ ಪ್ರಕಾಶ್ ಶೇಷರಾಘವಾಚಾರ್, ಎಚ್.ಎನ್. ಚಂದ್ರಶೇಖರ್, ಬೆಂಗಳೂರು ದಕ್ಷಿಣ ಜಿಲ್ಲಾ ವಕ್ತಾರ ಟಿ.ಎಸ್. ಸಂಕೀರ್ತ್ ಅವರು ಉಪಸ್ಥಿತರಿದ್ದರು.

Tags

MLAsComplaintBJPElectionCommissionerPolitical activityministers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X