Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್...

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಸಾಕ್ಷ್ಯ ನಾಶ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಗೃಹ ಸಚಿವರ ಪ್ರತಿಕ್ರಿಯಿಸಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ31 May 2024 2:58 PM IST
share
ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಸಾಕ್ಷ್ಯ ನಾಶ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಗೃಹ ಸಚಿವರ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು: ಪ್ರಜ್ವಲ್ ಮೊಬೈಲ್ ಕಳೆದಿದೆ, ಸಾಕ್ಷ್ಯ ನಾಶ ಮಾಡಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಎಸ್ಐಟಿಯವರು ಆ ಮಾತನ್ನು ಹೇಳಿದರೆ ಒಪ್ಪಿಕೊಳ್ಳುತ್ತೇನೆ. ಬೇರೆಬೇರೆ ಮೂಲಗಳಿಂದ ಬರುವ ಮಾಹಿತಿಯನ್ನು ಒಪ್ಪಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪ್ರಜ್ವಲ್ ರೇವಣ್ಣ ಬಂಧನದ ನಂತರ ಪ್ರಕರಣದ ಕುರಿತು ಅಧಿಕಾರಿಗಳ ಜೊತೆ ಯಾವುದೇ ರೀತಿಯ ಚರ್ಚೆ ಮಾಡಿಲ್ಲ. ಆದರೆ ಅಧಿಕಾರಿಗಳು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಎಸ್ಐಟಿ ನೋಡಿಕೊಳ್ಳುತ್ತದೆ ಎಂದರು.

ಪ್ರಜ್ವಲ್ ಬಂಧನ ಪ್ರಕ್ರಿಯೆ ವಿಳಂಬದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್ ಬಂಧನವಾಗಲು ತಡವಾಗಿದ್ದರಿಂದ ಸಾಕಷ್ಟು ಸಂತ್ರಸ್ತೆಯರು ದೂರು ಕೊಡಲು ಮುಂದೆ ಬಂದಿರಲಿಲ್ಲ. ಈಗ ಪ್ರಜ್ವಲ್ ಬಂಧನವಾಗಿದೆ. ಪ್ರಜ್ವಲ್ ನಮ್ಮ ದೇಶದಲ್ಲಿ ಅಥವಾ ಯಾವದಾದರು ರಾಜ್ಯದಲ್ಲಿದ್ದರು, ಸಹ ನಮ್ಮ ತಂಡವನ್ನು ಕಳುಹಿಸಿ ಕರೆದುಕೊಂಡು ಬರಬಹುದಿತ್ತು. ಹೊರ ದೇಶದಲ್ಲಿದ್ದ ಕಾರಣಕ್ಕಾಗಿ, ಬಂಧಿಸಲು ಅದಕ್ಕೆ ಆದಂತಹ ಪ್ರಕ್ರಿಯೆಗಳಿವೆ. ಇಲ್ಲಿಂದ ನಾಲ್ಕು ಜನ ಇನ್ಸ್ ಪೆಕ್ಟರ್ ಗಳನ್ನು ಅಥವಾ ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಎತ್ತಾಕಿಕೊಂಡು ಬನ್ನಿ ಅಂತ ಹೇಳೋಕೆ ಆಗಲ್ಲ. ನಮ್ಮ ದೇಶಕ್ಕೂ ಬೇರೆ ದೇಶಕ್ಕೂ ರಾಜತಾಂತ್ರಿಕ ಒಪ್ಪಂದಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಅದನ್ನೆಲ್ಲ ಪಾಲಿಸಬೇಕಾಗುತ್ತದೆ. ಸಿಬಿಐ ಮೂಲಕ ಇಂಟರ್ಪೋಲ್ನವರಿಗೆ ನೋಟಿಸ್ ಕಳುಹಿಸಿ, ಅಲ್ಲಿಂದ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆಯನ್ನು ಮಾಡಲಾಗಿತ್ತು ಎಂದು ತಿಳಿಸಿದರು.

ಸಂತ್ರಸ್ತೆಯರಲ್ಲಿ ಏನಾದರು ಮನವಿ ಮಾಡುತ್ತೀರ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರಿಗೆ ತೊಂದರೆ ಆಗಿದೆ ಅವರು ಪೊಲೀಸರ ಮುಂದೆ ಬಂದು ದೂರು ಕೊಡಬಹುದು. ಎಸ್ಐಟಿ ಮುಂದೆ ಹೇಳಬಹುದು ಎಂದು ಮೊದಲೇ ತಿಳಿಸಲಾಗಿದೆ. ಅಂತವರಿಗೆ ಎಲ್ಲ ರೀತಿಯ ರಕ್ಷಣೆ ಕೊಡುತ್ತೇವೆ ಎಂಬುದನ್ನು ಹೇಳಿದ್ದೇವೆ. ಸಂತ್ರಸ್ತೆಯರಿಗಾಗಿ ತೆರಯಲಾದ ಸಹಾಯವಾಣಿ ವಿಚಾರದ ಕುರಿತು ಹೆಚ್ಚು ತಿಳಿದುಕೊಳ್ಳಲು ಹೋಗಿಲ್ಲ. ಕೆಲವು ವಿಚಾರವನ್ನು ಎಸ್ಐಟಿಯವರು ಗೌಪ್ಯವಾಗಿ ಇಟ್ಟುಕೊಳ್ಳುತ್ತಾರೆ. ಅಂತಹ ವಿಚಾರಗಳ ಬಗ್ಗೆ ಹೆಚ್ಚಿಗೆ ತಿಳಿದುಕೊಳ್ಳಲು ಹೋಗಲ್ಲ ಎಂದು ಹೇಳಿದರು.

ಎಸ್ಐಟಿ ತಂಡ ಕೈಗೊಂಡಿದ್ದ ಕಾನೂನು ಪ್ರಕ್ರಿಯೆಗಳ ಕುರಿತು ತಿಳಿದಕೊಂಡಿದ್ದ ಪ್ರಜ್ವಲ್ 31ರಂದು ಬರುವುದಾಗಿ ಹೇಳಿದ್ದರು. ಫಲಿತಾಂಶ ಬೇರೆ ರೀತಿಯಲ್ಲಿ ಬಂದರೆ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದಾಗುತ್ತದೆ. ಇದನ್ನೆಲ್ಲ ಅರ್ಥ ಮಾಡಿಕೊಂಡು ಶರಣಾಗುತ್ತೇನೆ ಅಂತ ಹೇಳಿದ್ದರು ಅನ್ನಿಸುತ್ತದೆ ಎಂದು ಅಭಿಪ್ರಾಯಪಟ್ಟರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X