Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುಳ್ಳು ಮಾಹಿತಿ ನಿಯಂತ್ರಣ ಮಸೂದೆ...

ಸುಳ್ಳು ಮಾಹಿತಿ ನಿಯಂತ್ರಣ ಮಸೂದೆ ಮಂಡನೆಗೆ ಸಿದ್ಧತೆ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ8 Nov 2025 11:35 PM IST
share
ಸುಳ್ಳು ಮಾಹಿತಿ ನಿಯಂತ್ರಣ ಮಸೂದೆ ಮಂಡನೆಗೆ ಸಿದ್ಧತೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಸ್ತಾವಿತ ಸುಳ್ಳು ಮಾಹಿತಿ ನಿಯಂತ್ರಣ ಮಸೂದೆಯು ಸುಳ್ಳು ಸುದ್ದಿಗಳನ್ನು ಹರಡುವ ವ್ಯಕ್ತಿಗಳು ಮತ್ತು ಅಂತಹ ತಪ್ಪು ಮಾಹಿತಿ, ಅಪಪ್ರಚಾರ ದುರುದ್ದೇಶಪೂರಿತ ಮಾಹಿತಿ ಹಾಗೂ ನಕಲಿ ಸುದ್ದಿಗಳನ್ನು ವರ್ಧಿಸುವ ವೇದಿಕೆಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ನಗರದ ಖಾಸಗಿ ಹೊಟೇಲ್‍ನಲ್ಲಿ ಆಯೋಜಿಸಿದ್ದ ‘ಸತ್ಯ, ವಿಶ್ವಾಸ ಮತ್ತು ತಂತ್ರಜ್ಞಾನ’ ಕುರಿತ ನೀತಿ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸುಳ್ಳು ಮಾಹಿತಿಯು ಉದ್ದೇಶಪೂರ್ವಕ ಮತ್ತು ತೀವ್ರವಾಗಿ ಸಮಾಜಕ್ಕೆ ಹಾನಿಯುಂಟು ಮಾಡುವ ಕಾರಣ, ಇದು ಅತ್ಯಂತ ಅಪಾಯಕಾರಿ ಎಂದು ಹೇಳಿದರು.

ಈ ಬೆದರಿಕೆಯು ತಂತ್ರಜ್ಞಾನದಿಂದ, ವಿಶೇಷವಾಗಿ ಈಗ ಸುಲಭವಾಗಿ ಲಭ್ಯವಿರುವ ಮತ್ತು ಕೈಗೆಟುಕುವ ಎಐ ಪರಿಕರಗಳ ಆವಿಷ್ಕಾರದಿಂದಾಗಿ ಹೆಚ್ಚಿದೆ. ಯಾರಾದರೂ ಈಗ ಡೀಪ್‍ಫೇಕ್ ವೀಡಿಯೊಗಳು, ಧ್ವನಿ ಕ್ಲೋನಿಂಗ್ ಮತ್ತು ಸಂಪೂರ್ಣವಾಗಿ ಅಧಿಕೃತವೆಂದು ತೋರುವ ದಾಖಲೆಗಳನ್ನು ಸೃಷ್ಟಿಸಬಹುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

‘ಒಂದು ಸಿಂಗಲ್ ಕ್ಲಿಕ್’ ಗೊಂದಲಕ್ಕೆ ಕಾರಣವಾಗಬಹುದು. ಆದುದರಿಂದ, ನಾವು ತಪ್ಪು ಮಾಹಿತಿ, ಅಪಪ್ರಚಾರ, ದುರುದ್ದೇಶಪೂರಿತ ಮಾಹಿತಿ ಮತ್ತು ನಕಲಿ ಸುದ್ದಿಗಳನ್ನು ನಿಯಂತ್ರಿಸಲು ಕಾನೂನುಗಳನ್ನು ತರಲು ಬಯಸುತ್ತೇವೆ. ಅಲ್ಲದೆ, ತಮ್ಮದೆ ಸಾರ್ವಜನಿಕ ನೀತಿಗಳನ್ನು ಉಲ್ಲಂಘಿಸುವ ಮೂಲಕ ಇಂತಹ ಅಪಪ್ರಚಾರವನ್ನು ವರ್ಧಿಸುವ ವೇದಿಕೆಗಳನ್ನು ನಿಯಂತ್ರಿಸಲೂ ನಾವು ಬಯಸುತ್ತೇವೆ ಎಂದು ಅವರು ತಿಳಿಸಿದರು.

ಅಂತಹ ಮಾಹಿತಿಯನ್ನು ತಮ್ಮ ವೇದಿಕೆಯಲ್ಲಿ ಪ್ರಸಾರ ಮಾಡಲು ಅವಕಾಶ ನೀಡುವ ಮೂಲಕ, ಅವುಗಳು ಕೂಡ ಪರೋಕ್ಷವಾಗಿ ಜವಾಬ್ದಾರವಾಗಿರುತ್ತವೆ. ಎಲ್ಲವನ್ನೂ ವೇದಿಕೆಗಳು ಮೇಲ್ವಿಚಾರಣೆ ಮಾಡುವುದು ಸುಲಭವಲ್ಲ, ಆದರೆ ನಾವು ಈ ವೇದಿಕೆಗಳು ಮತ್ತು ದೇಶದ ಕಾನೂನುಗಳನ್ನು ಒಂದೆ ಚೌಕಟ್ಟಿನಡಿಯಲ್ಲಿ ತರಲು ಪ್ರಯತ್ನಿಸುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಮಸೂದೆಯನ್ನು ಡಿಸೆಂಬರ್‍ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಭರವಸೆ ಇದೆ. ರಾಜ್ಯ ಸರಕಾರವು ಸುಳ್ಳು ಸುದ್ದಿ ಹರಡುವವರ ಹೆಸರನ್ನು ಬಹಿರಂಗಪಡಿಸಿ ಅವರನ್ನು ನಾಚಿಕೆಪಡಿಸುವ ಗುರಿಯನ್ನು ಹೊಂದಿದೆ, ಆದರೆ ವಾಕ್ ಸ್ವಾತಂತ್ರ್ಯ, ಸೃಜನಶೀಲತೆ, ವಿಡಂಬನೆ ಮತ್ತು ಅಭಿಪ್ರಾಯಗಳನ್ನು ಮೊಟಕುಗೊಳಿಸುವ ಉದ್ದೇಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪೂವಯ್ಯ ಅಂಡ್ ಕಂ ಪಾಲುದಾರರಾದ ಮನು ಕುಲಕರ್ಣಿ ಮಾತನಾಡಿ, ಮೊದಲನೆಯದಾಗಿ, ಹಾನಿಕಾರಕ ಮತ್ತು ಗೊಂದಲಕ್ಕೆ ಕಾರಣವಾದ ಮಾಹಿತಿಯ ಮೇಲೆ ನಿಜವಾಗಿಯೂ ಮೊಕದ್ದಮೆ ಹೂಡುವುದಿಲ್ಲ, ಅದನ್ನು ಎಂದಿಗೂ ಕಾನೂನಿನ ಅಡಿಗೆ ತರುವುದಿಲ್ಲ. ಹಾಗಾಗಿ, ಹೊಸ ಕಾನೂನುಗಳನ್ನು ಮಾಡುವುದು, ಹೊಸ ಸಂಸ್ಥೆಗಳನ್ನು ಸೃಷ್ಟಿಸುವುದು ಸಮಸ್ಯೆಯನ್ನು ಪರಿಹರಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಎನ್‍ಎಲ್‍ಎಸ್‍ಐಯು ಉಪಾಧ್ಯಕ್ಷ ಸುಧೀರ್ ಕೃಷ್ಣಸ್ವಾಮಿ ಅವರು, ಕ್ರಿಮಿನಲ್-ಕಾನೂನು-ಕೇಂದ್ರಿತ ಶಾಸನದಿಂದ ದೂರವಿರಬೇಕು ಮತ್ತು ವ್ಯಕ್ತಿ ಹಾಗೂ ವೇದಿಕೆಗಳೆರಡರ ಮಟ್ಟದಲ್ಲಿ ಹೊಣೆಗಾರಿಕೆಯನ್ನು ಪರಿಚಯಿಸಬೇಕು ಎಂದು ಹೇಳಿದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X