Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಧಾನಿ ಮೋದಿ 12 ವರ್ಷಗಳಲ್ಲಿನ 12...

ಪ್ರಧಾನಿ ಮೋದಿ 12 ವರ್ಷಗಳಲ್ಲಿನ 12 ಸಾಧನೆಗಳನ್ನು ಹೇಳಲಿ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ10 Jun 2026 6:38 PM IST
share
ಪ್ರಧಾನಿ ಮೋದಿ 12 ವರ್ಷಗಳಲ್ಲಿನ 12 ಸಾಧನೆಗಳನ್ನು ಹೇಳಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ‘ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಆಡಳಿತದ ಅವಧಿಯ ದಾಖಲೆಯನ್ನು ಪ್ರಧಾನಿ ಮೋದಿ ಮುರಿದಿದ್ದಾರೆ ಎಂದು ಬಿಜೆಪಿ ಮುಖಂಡರು, ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆದರೆ, ಮೋದಿ ಆಡಳಿತದ 12 ವರ್ಷಗಳಲ್ಲಿ ಅವರ 12 ಸಾಧನೆಗಳನ್ನು ಹೇಳಲಿ’ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸ್ಮಾರ್ಟ್ ಸಿಟಿ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ, ಮೇಕ್ ಇನ್ ಇಂಡಿಯಾ, ಆಯುಷ್ಮಾನ್ ಭಾರತ್, ಉಜ್ವಲ ಯೋಜನೆ, ಜಲ ಜೀವನ್ ಮಿಷನ್ ಸೇರಿದಂತೆ ಮೋದಿಯವರ ಎಲ್ಲ ಯೋಜನೆಗಳು ಕೇವಲ ಘೋಷಣೆಗೆ ಸೀಮಿತವಾಗಿವೆ’ ಎಂದು ಟೀಕಿಸಿದರು.

ದೇಶದ ಆರ್ಥಿಕ ಸ್ಥಿತಿ ಹೇಗಿದೆ?, ರೂಪಾಯಿ ಮೌಲ್ಯ ಎಷ್ಟು ಮೊತ್ತದ ಕುಸಿತ ಆಗಿದೆ. ಅಡುಗೆ ಅನಿಲ, ವಾಣಿಜ್ಯ ಸಿಲಿಂಡರ್‍ನ ಬೆಲೆ ಎಷ್ಟು ಹೆಚ್ಚಳವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಎಲ್ಲಿಗೆ ಹೋಗಿ ಮುಟ್ಟಿದೆ ಎಂಬುದನ್ನು ಹೇಳಬೇಕು. ಅದು ಬಿಟ್ಟು ಯಾವ ಪುರುಷಾರ್ಥಕ್ಕೆ ನೆಹರೂ ಅವರೊಂದಿಗೆ ಮೋದಿಯನ್ನು ಹೋಲಿಕೆ ಮಾಡಬೇಕು ಎಂದು ಅವರು ವಾಗ್ದಾಳಿ ನಡೆಸಿದರು.

ನೆಹರೂ ಅವರು ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ಸಂದರ್ಭದಲ್ಲಿ ದೇಶದ ಪರಿಸ್ಥಿತಿ ಎಲ್ಲಿತ್ತು. ಅವರ ಈ ದೇಶದಲ್ಲಿ ಎಷ್ಟು ಅಣೆಕಟ್ಟೆಗಳನ್ನು ನಿರ್ಮಿಸಿದರು. ಶೈಕ್ಷಣಿಕ ಉನ್ನತಿ ಮತ್ತು ಕೈಗಾರಿಕೆ ಅಭಿವೃದ್ಧಿ ದೃಷ್ಟಿಯಿಂದ ಎಷ್ಟು ಸಾರ್ವಜನಿಕ ಸಂಸ್ಥೆಗಳನ್ನು ಸ್ಥಾಪಿಸಿದರು ಎಂಬುದು ಮುಖ್ಯ. ಆದರೆ, ಮೋದಿ ಅಧಿಕಾರಕ್ಕೆ ಬಂದ ಬಳಿಕ ಯಾವ ಅಣೆಕಟ್ಟನ್ನು ನಿರ್ಮಿಸಿದರು. ಮೋದಿ 12 ವರ್ಷದ ಆಡಳಿತದಲ್ಲಿ ಬರೀ ವೈಫಲ್ಯಗಳೇ ಹೆಚ್ಚಿವೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ನೋಂದಣಿಗೆ ಭಯ ಏಕೆ?: ರಾಷ್ಟ್ರೀಯ ಸ್ವಯಂ ಸೇವಕರ ಸಂಘ(ಆರೆಸೆಸ್ಸ್)ದವರು ತಮ್ಮ ಸಂಘಟನೆ ನೋಂದಣಿ ಮಾಡಿಕೊಳ್ಳಲು ಏಕೆ ಭಯ ಪಡುತ್ತಿದ್ದಾರೆ. ‘ಯಾವುದೇ ಸರಕಾರಿ ಸಂಸ್ಥೆಗೆ ಉತ್ತರ ಕೊಡುವಂತಿಲ್ಲ, ನಮಗೆ ಯಾವುದೇ ಸಂವಿಧಾನ, ಕಾನೂನು ಅನ್ವಯವಾಗುವುದಿಲ್ಲ’ ಎಂದು ಬಿಜೆಪಿ ಮುಖಂಡರು ಹೇಳಲಿ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಪ್ರತಿನಿತ್ಯ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಕೂಡ ನೋಂದಣಿ ಮಾಡಿಕೊಳ್ಳುತ್ತಾರೆ. ದೇವಸ್ಥಾನದ ದೇಣಿಗೆಯ ಲೆಕ್ಕವನ್ನೂ ಕೊಡಲಾಗುತ್ತದೆ. ಆರೆಸ್ಸೆಸ್‌ ನವರು ಆದಾಯ ತೆರಿಗೆ ಇಲಾಖೆ (ಐಟಿ)ಗೆ ಲೆಕ್ಕ ಕೊಡಬಾರದೇ?. ಪರಿಷತ್ ಸದಸ್ಯ ಸಿ.ಟಿ.ರವಿಗೆ ತಮ್ಮ ಇತಿಹಾಸ ಗೊತ್ತಿಲ್ಲ. ಮೊದಲು ಅವರು ತಮ್ಮ ಇತಿಹಾಸವನ್ನು ಅರಿತುಕೊಳ್ಳಲಿ ಎಂದು ಪ್ರಿಯಾಂಕ್ ಖರ್ಗೆ ಸಲಹೆ ನೀಡಿದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X