Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದತ್ತಾಂಶ ಹುಡುಕಾಟದ ಸಮಗ್ರ ವೇದಿಕೆ...

ದತ್ತಾಂಶ ಹುಡುಕಾಟದ ಸಮಗ್ರ ವೇದಿಕೆ ‘ತಥ್ಯಕೋಶ’ ಅನಾವರಣಗೊಳಿಸಿದ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ12 Aug 2026 10:56 PM IST
share
ದತ್ತಾಂಶ ಹುಡುಕಾಟದ ಸಮಗ್ರ ವೇದಿಕೆ ‘ತಥ್ಯಕೋಶ’ ಅನಾವರಣಗೊಳಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ವಿವಿಧ ಮೂಲಗಳಲ್ಲಿ ಚದುರಿಹೋಗಿರುವ ಸಾರ್ವಜನಿಕ ದತ್ತಾಂಶವನ್ನು ಸುಲಭವಾಗಿ ಹುಡುಕಲು, ಮೌಲ್ಯಮಾಪನ ಮಾಡಲು ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಹೊಸ ಡಿಜಿಟಲ್ ಸಾರ್ವಜನಿಕ ಸಂಪನ್ಮೂಲವಾದ ‘ತಥ್ಯಕೋಶ’ ಜಾಲತಾಣವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬುಧವಾರ ಇಲ್ಲಿನ ವಿಕಾಸಸೌಧದಲ್ಲಿ ‘ತಥ್ಯಕೋಶ’ವನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ದತ್ತಾಂಶ ಪಡೆಯಲು ಅಂತರ್ಜಾಲದ ವಿವಿಧ ತಾಣಗಳಲ್ಲಿ ಅಲೆದಾಡುವ ಬದಲಿಗೆ, ‘ತಥ್ಯಕೋಶ’ವು ಒಂದೇ ವೇದಿಕೆಯಲ್ಲಿ ದತ್ತಾಂಶವನ್ನು ಸಮಗ್ರವಾಗಿ ಒದಗಿಸಲಿದೆ. ಸಾರ್ವಜನಿಕ ದತ್ತಾಂಶವನ್ನು ಸುಲಭವಾಗಿ ಪತ್ತೆಹಚ್ಚಿ, ಪರಿಶೀಲಿಸಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಈ ವೇದಿಕೆ ನೆರವಾಗಲಿದೆ ಎಂದರು.

‘ತಥ್ಯಕೋಶ’ವು ದೇಶದ 458 ವಿವಿಧ ದತ್ತಾಂಶ ಮೂಲಗಳಿಂದ 15 ಲಕ್ಷಕ್ಕೂ ಅಧಿಕ ಡೇಟಾಸೆಟ್‍ಗಳನ್ನು ಒಂದೇ ವೇದಿಕೆಯಲ್ಲಿ ಹುಡುಕಲು ಅನುವು ಮಾಡಿಕೊಡುತ್ತದೆ. ಪ್ರಸ್ತುತ ಸಾರ್ವಜನಿಕ ಉಪಯುಕ್ತ ದತ್ತಾಂಶಕ್ಕಾಗಿ ಸರಕಾರದ ವಿವಿಧ ಅಂತರ್ಜಾಲ ತಾಣಗಳು, ಸಂಶೋಧನಾ ಸಂಸ್ಥೆಗಳು ಹಾಗೂ ಇತರ ಡೇಟಾ ಸಂಗ್ರಹಣಾ ವೇದಿಕೆಗಳನ್ನು ಪ್ರತ್ಯೇಕವಾಗಿ ಹುಡುಕಬೇಕಾಗುತ್ತದೆ. ಈ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ‘ತಥ್ಯಕೋಶ’ವನ್ನು ರೂಪಿಸಲಾಗಿದೆ ಎಂದು ಅವರು ವಿವರಿಸಿದರು.

ಸಂಶೋಧಕರು, ನವೋದ್ಯಮಿಗಳು, ದತ್ತಾಂಶ ವಿಜ್ಞಾನಿಗಳು ಹಾಗೂ ನೀತಿ ನಿರೂಪಕರು ದೇಶದ ವಿವಿಧ ಮೂಲಗಳಿಂದ ಲಭ್ಯವಿರುವ ಸಾರ್ವಜನಿಕ ದತ್ತಾಂಶವನ್ನು ಒಂದೇ ಸ್ಥಳದಲ್ಲಿ ಹುಡುಕಿ, ಪರಿಶೀಲಿಸಿ ಮತ್ತು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಬಳಸಿಕೊಳ್ಳಲು ಈ ವೇದಿಕೆ ನೆರವಾಗಲಿದೆ ಎಂದು ಅವರು ಹೇಳಿದರು.

‘ತಥ್ಯಕೋಶ’ವು ದೇಶದ ದತ್ತಾಂಶ ವ್ಯವಸ್ಥೆಯಲ್ಲಿರುವ ಪ್ರಮುಖ ಸವಾಲೊಂದನ್ನು ಪರಿಹರಿಸುವ ಉದ್ದೇಶ ಹೊಂದಿದೆ. ದೇಶದಲ್ಲಿ ದತ್ತಾಂಶದ ಕೊರತೆ ಇಲ್ಲ. ಆದರೆ ದತ್ತಾಂಶ ಎಲ್ಲಿದೆ, ಅದು ಸಂಬಂಧಿತವಾಗಿದೆಯೇ, ವಿಶ್ವಾಸಾರ್ಹವಾಗಿದೆಯೇ ಮತ್ತು ಬಳಕೆಗೆ ಲಭ್ಯವಿದೆಯೇ ಎಂಬುದನ್ನು ಗುರುತಿಸುವುದೇ ಪ್ರಮುಖ ಸವಾಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರದ ನಿರ್ದೇಶಕ ಅಶೋಕ್ ಕಾಮತ್ ಮಾತನಾಡಿ, ಸಂಶೋಧಕರು, ನೀತಿ ನಿರೂಪಕರು ಮತ್ತು ನವೋದ್ಯಮಿಗಳು ಅಗತ್ಯವಿರುವ ದತ್ತಾಂಶವನ್ನು ಹೊಸದಾಗಿ ಹುಡುಕಲು ಸಮಯ ಹಾಗೂ ಸಂಪನ್ಮೂಲ ವ್ಯಯಿಸುವ ಮೊದಲು, ಈಗಾಗಲೇ ಲಭ್ಯವಿರುವ ದತ್ತಾಂಶವನ್ನು ಸುಲಭವಾಗಿ ಪತ್ತೆಹಚ್ಚುವ ವ್ಯವಸ್ಥೆ ಅಗತ್ಯವಿದೆ. ಈ ಉದ್ದೇಶವನ್ನು ‘ತಥ್ಯಕೋಶ’ ಪೂರೈಸಲಿದೆ ಎಂದು ಹೇಳಿದರು.

ಇದೇ ವೇಳೆ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸಂಸ್ಥೆಯ(ಕೆಐಟಿಎಸ್) ವ್ಯವಸ್ಥಾಪಕ ನಿರ್ದೇಶಕ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಐಐಟಿಎಸಿಬಿ ಅಧ್ಯಕ್ಷ ಪ್ರೊ. ಅಶೋಕ್ ಮಿಶ್ರಾ ಹಾಗೂ ಅಕ್ಸೆಲ್ ಟೆಕ್ನಾಲಜಿ ಫೋರಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮನ್ ದಾಶ್ ಉಪಸ್ಥಿತರಿದ್ದರು.

16 ಪ್ರಮುಖ ಕ್ಷೇತ್ರಗಳ ದತ್ತಾಂಶ: ‘ತಥ್ಯಕೋಶ’ದಲ್ಲಿ ದತ್ತಾಂಶವನ್ನು ಕ್ಷೇತ್ರ, ಭೌಗೋಳಿಕ ವ್ಯಾಪ್ತಿ, ಕಾಲಾವಧಿ, ಸ್ವರೂಪ ಮತ್ತು ಲಭ್ಯತೆ ವಿಧಾನ ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ವರ್ಗೀಕರಿಸಲಾಗಿದೆ. ಆರೋಗ್ಯ, ಕೃಷಿ, ಶಿಕ್ಷಣ, ಮೂಲಸೌಕರ್ಯ, ಪರಿಸರ, ಆರ್ಥಿಕತೆ ಮತ್ತು ಆಡಳಿತ ಸೇರಿದಂತೆ ಒಟ್ಟು 16 ಪ್ರಮುಖ ಕ್ಷೇತ್ರಗಳ ದತ್ತಾಂಶವನ್ನು ವೇದಿಕೆ ಒಳಗೊಂಡಿದೆ. ಭಾರತಕ್ಕೆ ಸಂಬಂಧಿಸಿದ ದತ್ತಾಂಶ ಹೊಂದಿರುವ 346 ಭಾರತೀಯ ಮೂಲಗಳು ಹಾಗೂ 37 ಅಂತರರಾಷ್ಟ್ರೀಯ ದತ್ತಾಂಶ ಭಂಡಾರಗಳಿಂದ ಮಾಹಿತಿಯನ್ನು ಇದು ಸಂಗ್ರಹಿಸುತ್ತದೆ.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X