Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಿಎಸ್‌ಐ ನೇಮಕಾತಿ ಹಗರಣ;...

ಪಿಎಸ್‌ಐ ನೇಮಕಾತಿ ಹಗರಣ; ಆರ್‌.ಡಿ.ಪಾಟೀಲ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ9 March 2026 7:55 PM IST
share
ಪಿಎಸ್‌ಐ ನೇಮಕಾತಿ ಹಗರಣ; ಆರ್‌.ಡಿ.ಪಾಟೀಲ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಪಿಎಸ್‌ಐ ನೇಮಕಾತಿಯೂ ಸೇರಿ ಹಲವು ನೇಮಕಾತಿ ಹಗರಣಗಳ ಕಿಂಗ್‌ಪಿನ್ ಎನ್ನಲಾದ ಆರ್‌.ಡಿ. ಪಾಟೀಲ್‌‌ ಅಲಿಯಾಸ್ ರುದ್ರಗೌಡ ಪಾಟೀಲ್‌ಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ.

ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೊಕಾ) ಅಡಿ 2023ರಲ್ಲಿ ಬಂಧನಕ್ಕೊಳಗಾಗಿ ಸದ್ಯ ಮೈಸೂರು ಕಾರಾಗೃಹದಲ್ಲಿರುವ ರುದ್ರಗೌಡ ಪಾಟೀಲ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಲಬುರಗಿಯಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ರಾಜೇಶ್‌ ರೈ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಅರ್ಜಿದಾರರು ಮೇಲ್ನೋಟಕ್ಕೆ ಹಲವು ನೇಮಕಾತಿ ಅಕ್ರಮಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಅವರಿಗೆ ಅಪರಾಧವೆಸಗುವುದೇ ಅಭ್ಯಾಸವಾಗಿದ್ದು (ಹ್ಯಾಬಿಚುಯಲ್‌ ಅಫೆಂಡರ್‌), ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಆದೇಶಿಸಿದೆ.

ಹೈಕೋರ್ಟ್ ಆದೇಶವೇನು?

ನೇಮಕಾತಿ ಪರೀಕ್ಷೆಗಳನ್ನು ತಿರುಚುವ, ಅಕ್ರಮವೆಸಗುವ ಕ್ರಿಮಿನಲ್‌ ಪಿತೂರಿಗಳಲ್ಲಿ ಪಾಟೀಲ್‌ ಪಾತ್ರವನ್ನು ತೋರಿಸುವ ಪ್ರಾಥಮಿಕ ಸಾಕ್ಷ್ಯವನ್ನು ಪ್ರಾಸಿಕ್ಯೂಷನ್‌ ಸಲ್ಲಿಸಿದೆ. ತನಿಖಾಧಿಕಾರಿಗಳು ಪಾಟೀಲ್‌ ಖರೀದಿಸಿದ ಮೊಬೈಲ್‌ ಫೋನ್‌ಗಳು ಮತ್ತು ಸಿಮ್‌ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದು, ವಂಚನೆಯಲ್ಲಿ ಅವರ ಪಾತ್ರ ತೋರಿಸುವ ಕರೆ ವಿವರ ದಾಖಲೆಗಳನ್ನು ಸಲ್ಲಿಸಿದ್ದಾರೆ. ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಪರೀಕ್ಷೆಗಳ ಸಂಬಂಧ 8 ಪ್ರಕರಣಗಳು ಹಾಗೂ 2021ರ ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ಸೇರಿ ಪರೀಕ್ಷಾ ದುಷ್ಕೃತ್ಯಕ್ಕಾಗಿ ಅರ್ಜಿದಾರರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದು, ಅವರಿಗೆ ಜಾಮೀನು ಮಂಜೂರು ಮಾಡಲಾಗದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ವಾದ-ಪ್ರತಿವಾದ:

ವಿಚಾರಣೆ ವೇಳೆ ವಾದ ಮಂಡಿಸಿದ್ದ ಪಾಟೀಲ್ ಪರ ವಕೀಲರು, ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಎಲ್ಲ ಆರೋಪಿಗಳೂ ಜಾಮೀನು ಪಡೆದು ಹೊರಬಂದಿದ್ದಾರೆ. ಪಾಟೀಲ್‌ ಈಗಾಗಲೇ ಎರಡು ವರ್ಷಕ್ಕೂ ಅಧಿಕ ಸಮಯದಿಂದ ಸೆರೆವಾಸದಲ್ಲಿದ್ದಾರೆ. ಅವರನ್ನು ನ್ಯಾಯಾಂಗ ಬಂಧನದಲ್ಲಿ ಮುಂದುವರಿಸುವ ಅವಕಶ್ಯಕತೆ ಇಲ್ಲ. ಆದ್ದರಿಂದ, ಅವರಿಗೆ ಜಾಮೀನು ನೀಡಬೇಕು ಎಂದು ಕೋರಿದ್ದರು.

ಜಾಮೀನು ಅರ್ಜಿಯನ್ನು ಬಲವಾಗಿ ಆಕ್ಷೇಪಿಸಿದ್ದ ಪ್ರಾಸಿಕ್ಯೂಷನ್ ಪರ ವಕೀಲ ಎಂ. ಸುದರ್ಶನ್‌, ಆರೋಪಿಯು ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ 25ಕ್ಕೂ ಅಧಿಕ ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಪ್ರಮುಖವಾಗಿ 2021ರಲ್ಲಿ ನಡೆದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣವೂ ಸೇರಿದೆ. ಆದ್ದರಿಂದ, ಅವರಿಗೆ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರಲ್ಲದೆ, ಕಳೆದ ವರ್ಷ 3 ವಾರಗಳ ಮಧ್ಯಂತರ ಜಾಮೀನು ಪಡೆದ ಸಂದರ್ಭದಲ್ಲಿ ಕಲಬುರಗಿಯಲ್ಲಿ ಜೈಲು ಅಧಿಕಾರಿಗಳೊಂದಿಗೆ ಪಾಟೀಲ್ ಜಗಳವಾಡಿದ್ದರು. ಇದರಿಂದ, ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಪ್ರಕರಣವೇನು?

ಹಣಕಾಸು ಗುಪ್ತಚರ ಘಟಕದ ಪೊಲೀಸ್‌ ವರಿಷ್ಠಾಧಿಕಾರಿ ರಾಘವೇಂದ್ರ ಕೆ. ಹೆಗ್ಡೆ ನೇತೃತ್ವದ ಅಪರಾಧ ತನಿಖಾ ವಿಭಾಗದ (ಸಿಐಡಿ) ವಿಶೇಷ ತಂಡ ಪಾಟೀಲ್‌ ಅವರನ್ನು 2023ರ ನವೆಂಬರ್‌ನಲ್ಲಿ ಬಂಧಿಸಿತ್ತು. ಅವರ ವಿರುದ್ಧ ಕೊಕಾ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸದ್ಯ ಪಾಟೀಲ್ ಮೈಸೂರು ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಎಫ್‌ಡಿಎ ಮತ್ತು ಎಸ್‌ಡಿಎ ನೇಮಕ ಪರೀಕ್ಷೆಗಳಲ್ಲಿ ನಡೆದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಸಿಐಡಿ ಪಾಟೀಲ್‌ ಅವರನ್ನು ಬಂಧಿಸಿದೆ.

ಪ್ರಕರಣದ ಆರೋಪಪಟ್ಟಿಯ ಪ್ರಕಾರ, ಕಲಬುರಗಿಯ ಕ್ಲಾಸ್‌ ಒನ್‌ ಸಿವಿಲ್‌ ಗುತ್ತಿಗೆದಾರ ಪಾಟೀಲ್‌, ಅಭ್ಯರ್ಥಿಗಳಿಗೆ ಪರೀಕ್ಷೆಗಳಲ್ಲಿ ನಕಲು ಮಾಡಲು ಸಹಾಯ ಮಾಡಲು ಬ್ಲೂಟೂತ್‌ ಸಾಧನಗಳು ಮತ್ತು ವಾಕಿ-ಟಾಕಿಗಳಂತಹ ಎಲೆಕ್ಟ್ರಾನಿಕ್‌ ಸಾಧನಗಳನ್ನು ಪೂರೈಸಿದ್ದಾರೆ. ಆರೋಪಿ ಪಾಟೀಲ್ ಹಲವು ನೇಮಕಾತಿ ಪರೀಕ್ಷೆಗಳಲ್ಲಿ ಇದೇ ರೀತಿಯ ವಂಚನೆ ಎಸಗಿದ್ದಾರೆಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

Tags

PSI recruitment scamHigh CourtRD Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X