Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿ.ನಾಗೇಂದ್ರ ಸಚಿವರಾಗಿರುವವರೆಗೂ...

ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಸಲು ಬಿಡಲ್ಲ: ಆರ್‌.ಅಶೋಕ್‌

ವಾರ್ತಾಭಾರತಿವಾರ್ತಾಭಾರತಿ11 Aug 2026 4:56 PM IST
share
ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಸಲು ಬಿಡಲ್ಲ: ಆರ್‌.ಅಶೋಕ್‌
"ಸ್ವಚ್ಛ ಬೆಂಗಳೂರು ಹೆಸರಲ್ಲಿ ಜನರಿಂದ ಲೂಟಿ ಮಾಡುತ್ತಿರುವ ಸರಕಾರ"

ಬೆಂಗಳೂರು : ಬಿ.ನಾಗೇಂದ್ರ ಸಚಿವರಾಗಿರುವವರೆಗೂ ಅಧಿವೇಶನ ನಡೆಯಲು ಅವಕಾಶ ನೀಡುವುದಿಲ್ಲ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡಲೇ ಪಡೆಯಲೇಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ಎಲ್ಲದಕ್ಕೂ ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಜನರ ತೆರಿಗೆ ಹಣದಲ್ಲಿ ಸಚಿವರಿಗೆ ಕಾರು, ಮನೆ ಎಲ್ಲವನ್ನೂ ನೀಡುತ್ತಾರೆ. ಇದು ಚಕ್ರಾಧಿಪತ್ಯ ಅಲ್ಲ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನಕ್ಕೆ ಗೌರವ ನೀಡುವುದಾದರೆ ಸಚಿವರಿಗೆ, ಮುಖ್ಯಮಂತ್ರಿಗೆ ಯಾವ ಅಧಿಕಾರ ಇದೆ ಎಂದು ತಿಳಿದುಕೊಳ್ಳಬೇಕು. ಮುಖ್ಯಮಂತ್ರಿಯೇ ಉತ್ತರ ಕೊಡುವುದಾದರೆ ಎಲ್ಲ ಸಚಿವರನ್ನು ಅಧಿವೇಶನದಿಂದ ಹೊರಕ್ಕೆ ಹಾಕಬೇಕು. ಇದು ಸಿಎಂ ಡಿ.ಕೆ.ಶಿವಕುಮಾರ್‌ ಅವರ ಗೂಂಡಾಗಿರಿ ಸರಕಾರ. ಅಧಿವೇಶನ ನಡೆಸುವ ಹೊಣೆ ಇದ್ದಲ್ಲಿ ಮೊದಲು ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು. ಈ ಅಧಿವೇಶನದಲ್ಲಿ ಬಿಡದಿ ಟೌನ್‌ಶಿಪ್‌, ಕೆಪಿಎಸ್‌ಸಿ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ಮಾಡಬೇಕಿದೆ. ಆದರೆ ಚರ್ಚೆಯಾಗಬೇಕೆಂದರೆ ಮೊದಲು ರಾಜೀನಾಮೆ ಪಡೆಯಬೇಕು ಎಂದರು.

ಬಿಜೆಪಿ ವತಿಯಿಂದ ಎಲ್ಲ ಜಿಲ್ಲಾಕೇಂದ್ರಗಳಿಂದ ಹೋರಾಟ ಆರಂಭಿಸಲಾಗುತ್ತಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತರು ಹೋರಾಟ ನಡೆಸುತ್ತಾರೆ. ವಿಧಾನಸಭೆ ಅಧಿವೇಶನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡಲಾಗುವುದು. ಕಳೆದ ಬಾರಿ ಸಚಿವ ಬಿ.ನಾಗೇಂದ್ರ ಅವರನ್ನು ಕಿತ್ತುಹಾಕಿದ್ದು ಏಕೆ ಹಾಗೂ ಈಗ ಮರಳಿ ಸಚಿವರಾಗಿದ್ದು ಏಕೆ ಎಂದು ಸ್ಪಷ್ಟನೆ ನೀಡಬೇಕು. ನಾಗೇಂದ್ರ ಅವರು ಪ್ರತಿ ದಿನ ಕೋರ್ಟ್‌ನಲ್ಲೇ ಇರಬೇಕಾಗುತ್ತದೆ. ಅವರಿನ್ನೂ ಆರೋಪಿಯಾಗೇ ಇದ್ದಾರೆ. ಸಿಬಿಐನಲ್ಲಿ ಮೂರು ಪ್ರಕರಣಗಳು ಇನ್ನೂ ನಡೆಯುತ್ತಿದೆ. ಲೋಕಾಯುಕ್ತದಲ್ಲಿ ಐದು ಪ್ರಕರಣ ದಾಖಲಾಗಿದೆ. ಎಸ್‌ಐಟಿಯಲ್ಲಿ ಒಂದು ಪ್ರಕರಣ ಇದೆ. ಕಾರವಾರದಲ್ಲಿ ಸಿಐಡಿ ಪ್ರಕರಣವಿದೆ. ಚೆನ್ನೈನಲ್ಲೂ ಪ್ರಕರಣ ನಡೆಯುತ್ತಿದೆ. ಒಟ್ಟು 31 ಪ್ರಕರಣಗಳು ವಿಚಾರಣೆಯಲ್ಲಿದೆ. ಹೀಗಿರುವಾಗ ಅವರು ವಿಧಾನಸೌಧಕ್ಕೆ ಯಾವಾಗ ಬರುತ್ತಾರೆ? ಇಲಾಖೆಯ ಕೆಲಸ ಯಾವಾಗ ಮಾಡುತ್ತಾರೆ? ಎಂದು ಪ್ರಶ್ನಿಸಿದರು.

ವಿಧಾನಪರಿಷತ್‌ ಸಭಾಪತಿಯ ವಿರುದ್ಧ ಅವಿಶ್ವಾಸ ಮಂಡಿಸುವ ಬದಲು ಅವರ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿ ರಾಜೀನಾಮೆ ಪಡೆಯಲಾಗಿದೆ. ಸಿಎಂ ಡಿ.ಕೆ.ಶಿವಕುಮಾರ್‌ ಸಭಾಪತಿ ಹುದ್ದೆಯನ್ನು ಒದ್ದು ಕಿತ್ತುಕೊಂಡಿದ್ದಾರೆ. ಸಿಎಂ ಅಧಿಕಾರವನ್ನು ಕೂಡ ಒದ್ದು ಕಿತ್ತುಕೊಂಡಿದ್ದಾರೆ ಎಂದರು.

ಹೊಸ ಲೂಟಿ

ಸ್ವಚ್ಛ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್‌ ಹೊಸ ಲೂಟಿ ಶುರು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಹಿಂದೆಯೇ ಸ್ವಚ್ಛ ಭಾರತ್‌ ಕಾರ್ಯಕ್ರಮ ಆರಂಭಿಸಿದ್ದರು. ರೀಲ್ಸ್‌ ಮಾಡಿಕೊಂಡಿರುವ ಸಚಿವ ಕೃಷ್ಣ ಭೈರೇಗೌಡ ಸ್ವಚ್ಛ ಮಾಡಲು ತೆರಿಗೆ ಹಾಕುತ್ತಿದ್ದಾರೆ. ಈಗಾಗಲೇ ಇರುವ ತೆರಿಗೆಯಲ್ಲೇ ಕಸದ ನಿರ್ವಹಣೆಯೂ ಸೇರಿರುತ್ತದೆ. ಖಾಲಿ ನಿವೇಶನದಲ್ಲಿ ಕಸ ಇದ್ದರೆ ವಿವಿಧ ರೀತಿಯ ತೆರಿಗೆ ದರಗಳನ್ನು ನಿಗದಿಪಡಿಸಲಾಗಿದೆ. ಬೆಂಗಳೂರಲ್ಲಿ ಅಭಿವೃದ್ಧಿ ಮಾಡದೆ ಜನರಿಂದ ತೆರಿಗೆ ಮಾತ್ರ ವಸೂಲಿ ಮಾಡಲಾಗುತ್ತಿದೆ ಎಂದರು.

ರಸ್ತೆ ಬದಿ ನಿಂತಿರುವ ಕಾರುಗಳನ್ನು ಖಾಲಿ ಮಾಡಿಸುತ್ತೇನೆ ಎಂದಿದ್ದರು. ಈ ರೀತಿ ಒಂದು ಲಕ್ಷಕ್ಕೂ ಅಧಿಕ ಕಾರ್‌ಗಳಿವೆ. ಅದನ್ನು ಏನು ಮಾಡಿದ್ದಾರೆ ಎಂದು ತಿಳಿದಿಲ್ಲ. ಪಾದಚಾರಿ ಮಾರ್ಗ ತೆರವು ಬೆಳಗ್ಗೆ ಮಾಡಿದರೆ, ಸಂಜೆ ಮತ್ತೆ ಅಲ್ಲಿ ಬೀದಿ ಬದಿ ವ್ಯಾಪಾರಿಗಳು ಬಂದಿರುತ್ತಾರೆ. ಈಗ ಕಸದಿಂದ ಸ್ವಾತಂತ್ರ್ಯ ಎಂದು ಹೇಳಿ ತೆರಿಗೆ ಹಾಕುತ್ತಿದ್ದಾರೆ. ಕಸವಿಲ್ಲದ ಒಂದು ರಸ್ತೆಯೂ ನಗರದಲ್ಲಿಲ್ಲ. ಐದು ತಿಂಗಳಿಂದ 20 ಲಕ್ಷ ಫಲಾನುಭವಿಗಳಿಗೆ ಪಿಂಚಣಿಗಳನ್ನು ನೀಡಿಲ್ಲ. ಈ ರೀತಿ ಹಣವೇ ಇಲ್ಲದ ಸ್ಥಿತಿ ಇರುವಾಗ ಜನರಿಂದಲೇ ಹಣ ಲೂಟಿ ಮಾಡುತ್ತಿದ್ದಾರೆ ಎಂದರು.

ನಗರದ ರಸ್ತೆಗಳಲ್ಲಿ ಇನ್ನೂ ಗುಂಡಿಗಳಿವೆ. 7 ಕಿ.ಮೀ. ಉದ್ದದ ರಸ್ತೆಯಲ್ಲಿ 300 ಗುಂಡಿಗಳಿವೆ. ಇದನ್ನು ದುರಸ್ತಿ ಮಾಡಿ ಜನರಿಗೆ ಅನುಕೂಲ ಮಾಡಿಕೊಡಲಿ. ಮನೆ ತೆರಿಗೆ ಸಂಗ್ರಹಿಸಿದ ನಂತರ ಬೇರೆ ಯಾವುದೇ ತೆರಿಗೆ ಹಾಕಬಾರದು. ಇತ್ತೀಚೆಗೆ ಫ್ಲ್ಯಾಟ್‌ಗಳಿಗೆ 40 ರೂ. ಇದ್ದ ಕಸದ ಶುಲ್ಕವನ್ನು 400 ರೂ. ಗೆ ಏರಿಸಿದ್ದಾರೆ. ಈಗ ಹೊಸ ಟೆಂಡರ್‌ ಕೂಡ ಮಾಡಿದ್ದಾರೆ. ಇದು ಸರ್ಕಾರವೇ ಮಾಡುತ್ತಿರುವ ದರೋಡೆಯಾಗಿದೆ. ಜಿಬಿಎ ಚುನಾವಣೆ ಬಂದರೆ ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ಎಂಬ ತೀರ್ಪನ್ನು ಜನರು ನೀಡುತ್ತಾರೆ ಎಂದರು.

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X