Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕಾಲ್ತುಳಿತ ಪ್ರಕರಣ’ ವಿಶೇಷ ಅಧಿವೇಶನ...

‘ಕಾಲ್ತುಳಿತ ಪ್ರಕರಣ’ ವಿಶೇಷ ಅಧಿವೇಶನ ಕರೆಯಿರಿ : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ8 Jun 2025 6:14 PM IST
share
‘ಕಾಲ್ತುಳಿತ ಪ್ರಕರಣ’ ವಿಶೇಷ ಅಧಿವೇಶನ ಕರೆಯಿರಿ : ಆರ್.ಅಶೋಕ್

ಬೆಂಗಳೂರು : ‘ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಈ ವಿಷಯದ ಕುರಿತು ಚರ್ಚೆಗೆ ರಾಜ್ಯ ಸರಕಾರ ಈ ಕೂಡಲೆ ವಿಧಾನ ಮಂಡಲ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಇಂದಿಲ್ಲಿ ಆಗ್ರಹಿಸಿದ್ದಾರೆ.

ರವಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮಾಡಿದ ತಪ್ಪುಗಳ ಬಗ್ಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಮೂರು ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಯಾವ ತನಿಖೆ ನಿಜ ಎಂದು ಗೊತ್ತಾಗುತ್ತಿಲ ಎಂದು ಆಕ್ಷೇಪಿಸಿದರು.

ರಾಜ್ಯ ಸರಕಾರ ಪಾಪರ್ ಆಗಿಲ್ಲ ಎಂದಾದರೆ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಿ. ನಾವೆಲ್ಲರೂ ಒಂದು ತಿಂಗಳ ಸಂಬಳವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಿದ್ದೇವೆ ಎಂದ ಅವರು, ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ. ಪ್ರತಿ ರಾಜ್ಯಗಳ ತಂಡ ಕಪ್ ಗೆದ್ದಾಗಲೂ ಈ ರೀತಿಯ ಘಟನೆ ನಡೆದಿಲ್ಲ. ಯಾವುದೇ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಹೋಗಿ ಪ್ರಚಾರ ಪಡೆದಿಲ್ಲ ಎಂದು ಟೀಕಿಸಿದರು.

ಕಾಲ್ತುಳಿತದ ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಸರಕಾರ ಉಲ್ಲಂಘಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ತಿಕ್ಕಾಟ ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ. ಅವರ ಕುಟುಂಬದವರಿಗೆ ಸಾಂತ್ವನ ಹೇಳಬೇಕಿದ್ದವರು ಕಪ್‍ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಅನಂತರವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಟುಕರು ಎಂದು ದೂರಿದರು.

ಕಾನೂನನ್ನು ಪೊಲೀಸ್ ಅಧಿಕಾರಿಗಳು ಜಾರಿ ಮಾಡುತ್ತಾರೆ. ಜೂ.4ರಂದು ವಿಧಾನಸೌಧದ ಪೊಲೀಸರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಹಾಗೂ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಇದನ್ನು ನಿಷೇಧಿಸಬೇಕು ಎಂದೂ ಹೇಳಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಅವರು ಆಕ್ರೋಶ ಹೊರಹಾಕಿದರು.

ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ. ಡ್ರೋನ್‍ಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರಕಾರ ಹರಿದು ಬಿಸಾಡಿದೆ ಎಂದು ಟೀಕಿಸಿದರು.

ಸರಕಾರವೇ ಇಷ್ಟೆಲ್ಲ ಕಾನೂನು ಉಲ್ಲಂಘನೆ ಮಾಡಿದ್ದರೂ, ಕೊನೆಗೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಸ್ತೆಯಲ್ಲಿ ನಿಂತು ಟ್ರಾಫಿಕ್ ನಿಯಂತ್ರಿಸುತ್ತಿದ್ದ ಪೊಲೀಸರ ವಿರುದ್ಧ ಕ್ರಮ ವಹಿಸಲಾಗಿದೆ. ಠಾಣೆ ಪೊಲೀಸರನ್ನು ಅಮಾನತು ಮಾಡಿದ್ದಾರೆ ಎಂದು ಅವರು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X