Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ-ಡಿಸಿಎಂ ʼಬ್ರೇಕ್‌ಫಾಸ್ಟ್ ಮೀಟಿಂಗ್ʼ...

ಸಿಎಂ-ಡಿಸಿಎಂ ʼಬ್ರೇಕ್‌ಫಾಸ್ಟ್ ಮೀಟಿಂಗ್ʼ | ಎರಡು ಬಣಗಳ ‘ಕದನ ವಿರಾಮ’ ಸಭೆ : ಆರ್‌.ಅಶೋಕ್‌ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ29 Nov 2025 4:00 PM IST
share
ಸಿಎಂ-ಡಿಸಿಎಂ ʼಬ್ರೇಕ್‌ಫಾಸ್ಟ್ ಮೀಟಿಂಗ್ʼ | ಎರಡು ಬಣಗಳ ‘ಕದನ ವಿರಾಮ’ ಸಭೆ : ಆರ್‌.ಅಶೋಕ್‌ ವ್ಯಂಗ್ಯ

ಬೆಂಗಳೂರು : ʼಅಧಿಕಾರ ಹಂಚಿಕೆ ಚರ್ಚೆʼ ಮಧ್ಯೆ ಹೈಕಮಾಂಡ್ ಸೂಚನೆಯಂತೆ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮಂತ್ರಿ ಡಿ.ಕೆ.ಶಿವಕುಮಾರ್ ಮುಖಿಮಾಖಿಯಾಗಿ, ಮಾತುಕತೆ ನಡೆಸಿದರು. ಈ ಸಂಬಂಧ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್‌.ಅಶೋಕ್‌, ಇದು "ಬ್ರೇಕ್‌ಫಾಸ್ಟ್ ಮೀಟಿಂಗ್" ಅಲ್ಲ, ಎರಡು ಬಣಗಳ ನಡುವಿನ "ಕದನ ವಿರಾಮ" ಸಭೆ ಎಂದು ವ್ಯಂಗ್ಯವಾಡಿದ್ದಾರೆ.

ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಡುವಿನ ಬಹುನಿರೀಕ್ಷಿತ 'ಬೆಳಗಿನ ಉಪಾಹಾರ ಶೃಂಗಸಭೆ' ಅಂತೂ ಇಂತೂ ಜರುಗಿದೆ. ಅಸಲಿಗೆ ಇದನ್ನು "ಬ್ರೇಕ್‌ಫಾಸ್ಟ್ ಮೀಟಿಂಗ್" ಎಂದು ಕರೆಯುವುದು ಒಂದು ಔದಾರ್ಯವೇ ಸರಿ. ನಿಜ ಹೇಳಬೇಕು ಅಂದರೆ ಇದು ದಿನಬೆಳಗಾದರೆ ಒಬ್ಬರ ಮೇಲೊಬ್ಬರು ಹೊಂಚು ಹಾಕುವ, ಕತ್ತಿ ಮಸಿಯುವ ಎರಡು ಯುದ್ಧ ನಿರತ ಬಣಗಳ ಕಮಾಂಡರ್‌ಗಳ ನಡುವಿನ "ಕದನ ವಿರಾಮ" ಸಭೆಯಂತೆ ಕಾಣಿಸಿತು ಎಂದು ಲೇವಡಿ ಮಾಡಿದ್ದಾರೆ.

ಎಲ್ಲಕ್ಕಿಂತ ಮಿಗಿಲಾದ ಅತ್ಯಂತ ಹಾಸ್ಯಾಸ್ಪದ ಸಂಗತಿ ಏನೆಂದರೆ - ಇಬ್ಬರೂ ನಾಯಕರು ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿರುವ ಎಲ್ಲಾ ಗೊಂದಲಗಳಿಗೆ ಮಾಧ್ಯಮಗಳನ್ನೇ ದೂಷಿಸುತ್ತಿರುವುದು. ಇಷ್ಟಕ್ಕೂ ಈ ಗೊಂದಲ ಸೃಷ್ಟಿಸಿದ್ದು ಯಾರು? ಮಾಧ್ಯಮಗಳೋ, ತಾವುಗಳೋ? ಎಂದು ಅವರು ಪ್ರಶ್ನಿಸಿದ್ದಾರೆ.

ನವೆಂಬರ್‌ನಲ್ಲಿ ‘ಕ್ರಾಂತಿ’ ಎಂದು ಕರೆ ನೀಡಿ, ಹೇಳಿಕೆಗಳ ಮೇಲೆ ಹೇಳಿಕೆ ಕೊಟ್ಟು, ಪಕ್ಷದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿದ್ದು ಪತ್ರಕರ್ತರಾ? "ಕೊಟ್ಟ ಮಾತು ಉಳಿಸಿಕೊಳ್ಳವವನು ನಿಜವಾದ ನಾಯಕ," "ಐದಾರು ಜನರ ಮಧ್ಯೆ ನಡೆದಿರುವ 'ವ್ಯಾಪಾರ'", "ಐದು ವರ್ಷ ನಾನೇ ಸಿಎಂ" ಎಂದೆಲ್ಲಾ ಬಹಿರಂಗ ಹೇಳಿಕೆಗಳ ಮೂಲಕ ಬಿಕ್ಕಟ್ಟು ಸೃಷ್ಟಿಸಿದ್ದು ಪತ್ರಕರ್ತರಾ? ಶಕ್ತಿ ಪ್ರದರ್ಶನಕ್ಕೆಂದು ಶಾಸಕರ ಗುಂಪುಗಳನ್ನು ಕಟ್ಟಿಕೊಂಡು ತಂಡ ತಂಡವಾಗಿ ದೆಹಲಿಗೆ ಹೋಗಿ, ಗುಪ್ತ ಸಭೆಗಳನ್ನು ನಡೆಸಿದ್ದು ಪತ್ರಕರ್ತರಾ? ಇವತ್ತು ರಾಜ್ಯದಲ್ಲಿ ಸೃಷ್ಟಿ ಆಗಿರುವ ಈ ಎಲ್ಲಾ ಗೊಂದಲಗಳಿಗೆ ಕಾರಣವೇನು ಗೊತ್ತೇ? ತಮ್ಮಿಬ್ಬರ ಒಣಪ್ರತಿಷ್ಠೆ, ಅಧಿಕಾರದ ಲಾಲಸೆ ಮತ್ತು ಶಾಸಕರ ಗುಂಪುಗಾರಿಕೆಯೇ ಕಾರಣವೇ ಹೊರತು, ನಿಮ್ಮ ನಾಟಕಗಳನ್ನು ವರದಿ ಮಾಡಿ ಸತ್ಯವನ್ನು ಬಿತ್ತರಿಸಿದ ಮಾಧ್ಯಮಗಳಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

ಈ ತೋರಿಕೆಯ "ಏಕತೆಯ ಪ್ರದರ್ಶನ"ದ ಹಿಂದೆ ಎಲ್ಲರಿಗೂ ಸ್ಪಷ್ಟವಾಗಿ ಕಾಣುತ್ತಿರುವುದು ಬಿಡಿಸಲಾಗದ ಕಗ್ಗಂಟು ಮತ್ತು ಸಂಪೂರ್ಣವಾಗಿ ಒಡೆದ ಕನ್ನಡಿಯ ಚೂರುಗಳೇ ಹೊರತು, ಯಾವುದೇ ಪ್ರಾಮಾಣಿಕ ಮೈತ್ರಿಯಲ್ಲ. ಇದು ಕೇವಲ ಒಂದು ಕ್ಷಣಿಕ 'ಆಪ್ಟಿಕ್ಸ್' ಅಷ್ಟೇ ಎನ್ನುವುದು ಮಾತ್ರ ಗ್ಯಾರಂಟಿ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X