Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೆಡಗೇವಾರ್ ಸ್ಮಾರಕಕ್ಕೆ ನನ್ನನ್ನು...

ಹೆಡಗೇವಾರ್ ಸ್ಮಾರಕಕ್ಕೆ ನನ್ನನ್ನು ಪ್ರವೇಶಿಸಲು ಬಿಟ್ಟಿರುವ ಸಿಸಿಟಿವಿ ಫೂಟೇಜ್ ಬಿಡುಗಡೆ ಮಾಡಿ: ಬಿಜೆಪಿ ನಾಯಕರಿಗೆ ಗೂಳಿಹಟ್ಟಿ ಸವಾಲು

ವಾರ್ತಾಭಾರತಿವಾರ್ತಾಭಾರತಿ9 Dec 2023 10:15 AM IST
share
ಹೆಡಗೇವಾರ್ ಸ್ಮಾರಕಕ್ಕೆ ನನ್ನನ್ನು ಪ್ರವೇಶಿಸಲು ಬಿಟ್ಟಿರುವ ಸಿಸಿಟಿವಿ ಫೂಟೇಜ್ ಬಿಡುಗಡೆ ಮಾಡಿ: ಬಿಜೆಪಿ ನಾಯಕರಿಗೆ ಗೂಳಿಹಟ್ಟಿ ಸವಾಲು

ಬೆಂಗಳೂರು, ಡಿ.9: ಜಾತಿ ಕಾರಣಕ್ಕೆ ನಾಗ್ಪುರದ ಆರೆಸ್ಸೆಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದ ಒಳಗೆ ತನಗೆ ಪ್ರವೇಶ ನಿರಾಕರಿಸಲಾಗಿತ್ತು ಎಂದು ಆರೋಪಿಸಿ ಸುದ್ದಿಯಾಗಿದ್ದ ಬಿಜೆಪಿಯ ಮಾಜಿ ಸಚಿವ, ಶಾಸಕ ಗೂಳಿಹಟ್ಟಿ ಶೇಖರ್ ಅವರದ್ದೆನ್ನಲಾದ ಮತ್ತೊಂದು ಆಡಿಯೋ ಹೇಳಿಕೆ ಇದೀಗ ವೈರಲ್ ಆಗಿದ್ದು, ಹೆಡಗೇವಾರ್ ಸ್ಮಾರಕದ ಒಳಗೆ ನನ್ನನ್ನು ಪ್ರವೇಶಿಸಲು ಅವಕಾಶ ನೀಡಿದ್ದರೆ ಅದರ ಸಿಸಿಟಿವಿ ಫೂಟೇಜ್ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದ್ದಾರೆ.

ಹೆಡಗೇವಾರ್ ಸ್ಮಾರಕದ ಒಳಗೆ ಪ್ರವೇಶ ನಿರಾಕರಣೆ ವಿಚಾರವಾಗಿ ತನ್ನನ್ನು ಟೀಕಿಸಿದ್ದ ಬಿಜೆಪಿ ನಾಯಕರನ್ನು ಗೂಳಿಹಟ್ಟಿ ಶೇಖರ್ ಅವರದ್ದೆನ್ನಲಾದ ಎರಡನೇ ಆಡಿಯೋದಲ್ಲಿ ತೀವ್ರ ತರಾಟೆಗೈಯಲಾಗಿದೆ. ಈ ಆಡಿಯೋ ವನ್ನು ಗೂಳಿಹಟ್ಟಿ ಶೇಖರ್ ವಾಟ್ಸ್ ಆ್ಯಪ್ ಸ್ಟೇಟಸ್ ಹಾಕಿದ್ದರೆನ್ನಲಾಗಿದೆ

"ನಾನು ಒಡ್ಡ, ನಾನು ಕುಡಿಯುತ್ತೇನೆ. ಹಾಗಂತ ಸುಳ್ಳು ಹೇಳುವುದಿಲ್ಲ. ನನ್ನ ಹೇಳಿಕೆ ಸುಳ್ಳು ಅಥವಾ ಸತ್ಯ ಎಂಬುದನ್ನು ಸಾಬೀತುಪಡಿಸಲು, ಹೆಡಗೇವಾರ್ ಸ್ಮಾರಕದಲ್ಲಿರುವ ಸಿಸಿಟಿವಿ ವೀಡಿಯೋ ತರಿಸಿ ಬಿಡುಗಡೆ ಮಾಡಿ. ನನ್ನನ್ನು ಒಳಗಡೆ ಬಿಡದಿರುವ ಸಿಸಿಟಿವಿ ವೀಡಿಯೋ ತೋರಿಸಿ. ಸುಳ್ಳು ಹೇಳಿದರೆ ನಿಮ್ಮ ಮನೆಗಳಲ್ಲಿ ಜೀತ ಮಾಡುತ್ತೇನೆ, ಕಸ ಗುಡಿಸುತ್ತಾ ಇರುತ್ತೇನೆ, ನೀವು ಹೇಳಿದ ಯಾವುದೇ ಕೆಲಸ ಮಾಡಲು ಸಿದ್ಧ'' ಎಂದು ತನ್ನ ಆರೋಪವನ್ನು ಟೀಕಿಸಿದ್ದ ವಿಪಕ್ಷ ನಾಯಕ್ ಆರ್.ಅಶೋಕ್, ಸುರೇಶ್ ಕುಮಾರ್, ಮಾಜಿ ಶಾಸಕ ಕುಡಚಿ ರಾಜೀವ್ ಅವರಿಗೆ ಸವಾಲೆಸೆಯಲಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ 4 ತಿಂಗಳ ಮೊದಲು ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್, ಆ ನಂತರ ಸಂಘದ ಅನೇಕ ಪ್ರಮುಖರನ್ನು ಭೇಟಿಯಾದರೂ ಎಲ್ಲಿಯೂ ತಮಗಾದ ಈ ಅವಮಾನದ ಬಗ್ಗೆ ಹೇಳಿರಲಿಲ್ಲ. ಹತ್ತು ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯಕರ ಎಂದು ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಹೇಳಿಕೆಗೂ ಆಡಿಯೋದಲ್ಲಿ ಪ್ರತಿಕ್ರಿಯೆ ಇದ್ದು, "ಆರೆಸ್ಸೆಸ್ ಕಚೇರಿಗೆ ಒಳಗೆ ಬಿಟ್ಟುಕೊಳ್ಳದ ವಿಚಾರವನ್ನು ಎಂಟು ತಿಂಗಳ ಮೊದಲೇ ತಾನು ಬಹಿರಂಗಪಡಿಸಿದ್ದರೆ ಕಳೆದ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಇನ್ನೊಂದಿಷ್ಟು ಕ್ಷೇತ್ರಗಳನ್ನು ಕಳೆದುಕೊಳ್ಳುತ್ತಾ ಇತ್ತು" ಎಂದು ಆಡಿಯೋದಲ್ಲಿ ಹೇಳಲಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ 4 ತಿಂಗಳ ಮುಂಚೆ ನಾಗ್ಪುರದ ಆರೆಸ್ಸೆಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದಲ್ಲಿ ಜಾತಿ ಕೇಳಿ ಅದೇ ಕಾರಣಕ್ಕೆ ನನಗೆ ಒಳಗಡೆ ಬಿಡಲಿಲ್ಲ ಎಂದು ದೂರಿದ್ದರು. ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆಡಿಯೋ ಬಿಡುಗಡೆ ಯಾಗುತ್ತಿದ್ದಂತೆ, ಆರೆಸ್ಸೆಸ್ ಕಚೇರಿ ಬಗ್ಗೆ ಆಡಿಯೊ ಹೇಳಿಕೆಯಲ್ಲಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಆರೆಸ್ಸೆಸ್ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ತಿಳಿಸಿದ್ದರು. ಅದರ ಬೆನ್ನಲ್ಲೇ, ಬಿಜೆಪಿ ನಾಯಕರು ಆ ರೀತಿ ನಡೆದೇ ಇಲ್ಲ. ಸೋಲಿನ ಕಾರಣದಿಂದ ಗೂಳಿಹಟ್ಟಿ ಶೇಖರ್ ಹತಾಶೆಯಿಂದ ಮಾತಾಡ್ತಿದ್ದಾರೆ ಎಂದು ಸಮಜಾಯಿಷಿ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X