Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ಮುಖಂಡ ರೇಣುಕಾಚಾರ್ಯ ಭೇಟಿ ಬಗ್ಗೆ...

ಬಿಜೆಪಿ ಮುಖಂಡ ರೇಣುಕಾಚಾರ್ಯ ಭೇಟಿ ಬಗ್ಗೆ ಸಚಿವ ಮಲ್ಲಿಕಾರ್ಜುನ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ27 Aug 2023 10:03 PM IST
share
ಬಿಜೆಪಿ ಮುಖಂಡ ರೇಣುಕಾಚಾರ್ಯ ಭೇಟಿ ಬಗ್ಗೆ ಸಚಿವ ಮಲ್ಲಿಕಾರ್ಜುನ ಹೇಳಿದ್ದೇನು?

ದಾವಣಗೆರೆ: ಮಾಜಿ ಸಚಿವ, ಬಿಜೆಪಿ ಮುಖಂಡ ರೇಣುಕಾಚಾರ್ಯ ಸಹಜ ಭೇಟಿಯಷ್ಟೇ. ಇದರಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ , ಕಂದಾಯ ಸಚಿವರ ಜೊತೆಗೆ ತಮ್ಮ ತಂದೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರನ್ನೂ ರೇಣುಕಾಚಾರ್ಯರವರು ಭೇಟಿ ಮಾಡಿದ್ದರಂತೆ. ಇದೊಂದು ಸಹಜ ಭೇಟಿಯಷ್ಟೇ. ನನ್ನ ಬಳಿಯೂ ಬಂದು, ವಿಶ್ ಮಾಡಿ ಹೋಗಿದ್ದಾರೆ. ಪಕ್ಷದ ವಿಚಾರ ಏನೂ ಮಾತನಾಡಿಲ್ಲ, ಏನನ್ನೂ ಹೇಳಿಲ್ಲ. ನಮ್ಮ ಭೇಟಿಗೆ ಬಂದಿದ್ದರೂ ಟೀ ಕುಡಿಸಿ, ಕಳಿಸುವುದು ನನ್ನ ಕೆಲಸ. ಬೇರೆ ಏನೂ ವಿಚಾರ ಹೇಳಿಲ್ಲ. ಯಾವುದೇ ಗೌಪ್ಯತೆ ಇಲ್ಲ ಎಂದು ಅ ಸ್ಪಷ್ಪಪಡಿಸಿದರು.

ರೇಣುಕಾಚಾರ್ಯರವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಒಲವು ತೋರಿಸಿಲ್ಲ. ನಾನೂ ಪಕ್ಷ ಸೇರ್ಪಡೆ ವಿಚಾರ ಮಾತನಾಡಿಲ್ಲ. ಬಿಜೆಪಿಯಲ್ಲಿ ಯಡಿಯೂರಪ್ಪ ಇದ್ದಾಗ ಹಾಗಿತ್ತು, ಹೀಗಿತ್ತು ಎಂದಷ್ಟೇ ರೇಣುಕಾಚಾರ್ಯ ಹೇಳಿದ್ದರು. ಈಗ ಪಕ್ಷದಲ್ಲಿ ತಮಗೆಲ್ಲಾ ತುಂಬಾ ಅನ್ಯಾಯ ಮಾಡಿದ್ದನ್ನು ಪ್ರಸ್ತಾಪಿಸಿದರಷ್ಟೇ. ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂಬುದಾಗಿಯೂ ಹೇಳಿದರು ಎಂದು ಸಚಿವರು ತಿಳಿಸಿದರು.

ಪಕ್ಷಕ್ಕೆ ಬರುವವರಿಗೆ ದಿನದ 24 ಗಂಟೆಯೂ ಕಾಂಗ್ರೆಸ್ ಬಾಗಿಲು ತೆರೆದಿರುತ್ತದೆ. ರೇಣುಕಾಚಾರ್ಯ ಸೇರಿದಂತೆ ಯಾರನ್ನೂ ನಾನು ಕರೆದಿಲ್ಲ. ಕಾಂಗ್ರೆಸ್‌ನ ತತ್ವ, ಸಿದ್ಧಾಂತ ನಂಬಿ, ತಾವಾಗಿಯೇ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸೇರಿಸಿಕೊಳ್ಳುತ್ತೇವೆ. ಅಲ್ಲದೆ, ಅಂತಹವರಿಗೆ ಜೈ ಎನ್ನುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಸಾಕಷ್ಟು ಜನರಿದ್ದಾರೆ. ನನ್ನ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್‌ರ ಸ್ಪರ್ಧೆ ಬಗ್ಗೆ ಯೋಚನೆ ಇಲ್ಲ. ಇದರ ಬಗ್ಗೆ ಚರ್ಚೆಯೂ ಆಗಿಲ್ಲ. ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಕುಟುಂಬ ಸದಸ್ಯರು ತಮ್ಮ ಮನೆಯಲ್ಲಿ ವರ ಮಹಾಲಕ್ಷ್ಮೀ ಪೂಜೆಯೆಂದು ತಮ್ಮ ಮನೆಗೆ ಆಹ್ವಾನಿಸಿದ್ದರು. ಪೂಜೆಗೆ ಹೋಗಿದ್ದರಷ್ಟೇ. ಡಾ.ಪ್ರಭಾ ಮಲ್ಲಿಕಾರ್ಜುನರನ್ನು ಲೋಕಸಭೆ ಚುನಾವಣೆ ಕಣಕ್ಕಿಳಿಸುವ ಬಗ್ಗೆ ಆಲೋಚನೆ ಇಲ್ಲ. ಅದರ ಬಗ್ಗೆ ನಾವು ಚರ್ಚೆಯೂ ಮಾಡಿಲ್ಲ ಎಂದರು.

ಬರ ಪೀಡಿತ ಪ್ರದೇಶಗಳ ಘೋಷಣೆಗೆ ಕೇಂದ್ರ ಸರಕಾರದ ಸಹಕಾರ ಅಗತ್ಯ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತದೆ. ಕೇಂದ್ರವೂ ಸಹಕರಿಸಬೇಕು. ನಾನು ಕೆಲವು ಕಡೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದೇನೆ. ಆ.28ರಂದು ಮತ್ತೆ ಕೆಲ ತಾಲೂಕುಗಳಿಗೆ ಭೇಟಿ ನೀಡುತ್ತೇನೆ ಎಂದು ಸಚಿವ ಮಲ್ಲಿಕಾರ್ಜುನ ಹೇಳಿದರು.

ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿ, ನೆರವು ನೀಡುವ ಕೆಲಸವನ್ನು ಕೇಂದ್ರ ಸರಕಾರ ಮಾಡಬೇಕು. ಬರ ಪೀಡಿತ ಜಿಲ್ಲೆಯ ಘೋಷಣೆಗೆ ಕೇಂದ್ರ ಸರಕಾರದ ಮೇಲೆ ಸಾಕಷ್ಟು ಹೊಣೆ ಇದ್ದು, ಮಾನದಂಡಗಳನುಸಾರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಬೇಕು. ಈ ಬಗ್ಗೆ ಸಂಸದರೂ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು.

ಎಸ್.ಎಸ್.ಮಲ್ಲಿಕಾರ್ಜುನ, ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X