Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಸ್ಲಿಮರು ಈ ಸಮಾಜದ ನಾಗರಿಕರಲ್ಲವೇ? :...

ಮುಸ್ಲಿಮರು ಈ ಸಮಾಜದ ನಾಗರಿಕರಲ್ಲವೇ? : ರಿಝ್ವಾನ್ ಅರ್ಶದ್

"ನಾವು ಎಲ್ಲಿಂದಲೋ ಬಂದವರಲ್ಲ, ನಾವು ನಿಮ್ಮ ಸಹೋದರರು"

ವಾರ್ತಾಭಾರತಿವಾರ್ತಾಭಾರತಿ20 March 2025 5:31 PM IST
share
ಮುಸ್ಲಿಮರು ಈ ಸಮಾಜದ ನಾಗರಿಕರಲ್ಲವೇ? : ರಿಝ್ವಾನ್ ಅರ್ಶದ್

ಬೆಂಗಳೂರು : ‘ಮುಸ್ಲಿಮರು ಈ ದೇಶದ ನಾಗರಿಕರಲ್ಲವೇ?, ಅವರು ಈ ಸಮಾಜದ ಭಾಗ ಅಲ್ಲವೇ?. ಒಂದು ವೇಳೆ ಅವರು ಪ್ರಾಣಿಗಳು, ಈ ಸಮಾಜದಲ್ಲಿ ಬದುಕಲು ಯೋಗ್ಯರಲ್ಲವೆಂದು ಘೋಷಣೆ ಮಾಡಲಿ’ ಎಂದು ಆಡಳಿತ ಪಕ್ಷದ ಸದಸ್ಯ ರಿಝ್ವಾನ್ ಅರ್ಶದ್, ಇಂದಿಲ್ಲಿ ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು.

ಗುರುವಾರ ವಿಧಾನಸಭೆಯಲ್ಲಿ ಆಯವ್ಯಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಸದಸ್ಯರು ರಾಜ್ಯ ಬಜೆಟ್ ಬಗ್ಗೆ ಮಾಧ್ಯಮಗಳಿಗೆ ನೀಡಿರುವ ಪ್ರತಿಕ್ರಿಯೆ ಗಮನಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅನ್ನು ‘ಮುಸ್ಲಿಮರ ಬಜೆಟ್, ತುಷ್ಠೀಕರಣದ ಬಜೆಟ್, ಹಲಾಲ್ ಬಜೆಟ್’ ಎಂದು ಟೀಕಿಸಿದ್ದಾರೆ.

‘ಆದರೆ, ಈ ದೇಶ ಹಾಗೂ ರಾಜ್ಯದಲ್ಲಿ ಯಾವ ಮುಸ್ಲಿಮರು ತೆರಿಗೆ ಪಾವತಿಸುವುದಿಲ್ಲವೇ?. ಬೊಕ್ಕಸಕ್ಕೆ ನಮ್ಮ ತೆರಿಗೆ ಹಣ ಹೋಗುವುದಿಲ್ಲವೇ?. ಆ ತೆರಿಗೆಯಲ್ಲಿ ಪಾಲು ಕೇಳುವ ಅಧಿಕಾರ ನಮಗೆ ಇಲ್ಲವೇ?. ಈ ಸಮಾಜದಲ್ಲಿ ನಮಗೆ ಬದುಕಲು ಹಕ್ಕಿಲ್ಲವೇ?. 4.10 ಲಕ್ಷ ಕೋಟಿ ರೂ. ಬಜೆಟ್‍ನ ಪೈಕಿ 4,100 ಕೋಟಿ ರೂ.ಗಳನ್ನು ಅಲ್ಪಸಂಖ್ಯಾತರಿಗೆ ನೀಡಲಾಗಿದೆ. ಅದು ಬರೀ ಮುಸ್ಲಿಮರಿಗೆ ಮಾತ್ರವಲ್ಲ’ ಎಂದು ರಿಝ್ವಾನ್ ಅರ್ಶದ್ ಉಲ್ಲೇಖಿಸಿದರು.

‘ನಾವು ಎಲ್ಲಿಂದಲೋ ಬಂದವರಲ್ಲ. ನಾವು ನಿಮ್ಮ ಸಹೋದರರು ಎಂಬುದನ್ನು ಮೊದಲು ತಿಳಿದುಕೊಳ್ಳಿ. ನಾವು ಈ ದೇಶದ ಜನ, ಇದೇ ಮಣ್ಣಿನ ಮಕ್ಕಳು. ಇದೇ ಹಿಂದುಳಿದ ವರ್ಗದಿಂದ, ಇದೇ ದಲಿತರಿಂದ ಯಾವಾಗಲೋ ಮತಾಂತರ ಆಗಿರಬಹುದು. ಅದನ್ನು ತಿಳಿದುಕೊಂಡರೂ ನಮ್ಮ ಜೊತೆ ಸಹಾನುಭೂತಿ ಇಲ್ಲವಲ್ಲ’ ಎಂದು ರಿಝ್ವಾನ್ ಅರ್ಶದ್, ಬಿಜೆಪಿ ಸದಸ್ಯರ ವಿರುದ್ಧ ವಾಗ್ಭಾಣ ಬಿಟ್ಟರು.

ಈ ವೇಳೆ ಮಧ್ಯೆಪ್ರವೇಶಿಸಿದ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್, ‘ಕಲ್ಲು ಹೊಡೆಯುವವರು ನಿಮ್ಮವರು. ಜಗಳ ಮಾಡುವವರು ನಿಮ್ಮವರು. ಪಾಕಿಸ್ತಾನದಿಂದ ಹಿಂದೂಗಳನ್ನು ಓಡಿಸಿದ್ದು ನಿಮ್ಮವರು’ ಎಂದು ಟೀಕಿಸಿದರು. ಇದರಿಂದ ಸದನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ ನಡೆಯಿತು.

ಬಳಿಕ ಮಾತನಾಡಿದ ರಿಝ್ವಾನ್ ಅರ್ಶದ್, ‘ಪ್ರಧಾನಿ ಮೋದಿಯವರು ಮುಸ್ಲಿಮ್ ಯುವಕರು ಒಂದು ಕೈಯಲ್ಲಿ ‘ಕುರ್‌ಆನ್’ ಇನ್ನೊಂದು ಕೈಯಲ್ಲಿ ಕಂಪ್ಯೂಟರ್ ಹಿಡಿಯಬೇಕು ಎಂದು ಹೇಳಿದ್ದಾರೆ. ಮೋದಿ ಹೇಳಿಕೆಗೆ ವಿರುದ್ಧವಾಗಿ ಬಿಜೆಪಿಯ ಮುಖಂಡರು, ಸಿದ್ದರಾಮಯ್ಯರ ಬಜೆಟ್ ಅನ್ನು ಟೀಕಿಸಿದ್ದಾರೆ’ ಎಂದು ದೂರಿದರು.

ರಾಜ್ಯದ ಅಲ್ಪಸಂಖ್ಯಾತರ ಜನಸಂಖ್ಯೆ ಶೇ.16ರಷ್ಟಿದೆ. ಅಲ್ಪಸಂಖ್ಯಾತರ ಪೈಕಿ ಮುಸ್ಲಿಮರ ಸಂಖ್ಯೆ ಹೆಚ್ಚಿದೆ. ಹೀಗಾಗಿರುವ ಸರಕಾರ ಆ ವರ್ಗಗಳ ಕಲ್ಯಾಣಕ್ಕೆ ಅನುದಾನ ಒದಗಿಸುವುದಿರಲ್ಲಿ ತಪ್ಪೇನಿದೆ. ಬಿಜೆಪಿ ಮುಖಂಡರು ಅನಗತ್ಯ ಟೀಕೆ ಮಾಡುವ ಮೂಲಕ ಜನರಿಗೆ ತಪ್ಪು ಸಂದೇಶ ನೀಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಬಿಜೆಪಿ ನಾಯಕರು ಮನಸೋ ಇಚ್ಛೆ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ವಿಷಬೀಜ ಬಿತ್ತಿ ಬೆಂಕಿ ಹಚ್ಚುತ್ತಿದ್ದಾರೆ. ಇದರಿಂದ ರಾಜ್ಯದ ಘಣತೆ ಏನಾಗುತ್ತದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಏನು ಸಂದೇಶ ಹೋಗುತ್ತದೆ ಎಂಬುದ ಆಲೋಚಿಸಬೇಕು. ನಮಗೆ ಬಜೆಟ್‍ನಲ್ಲಿ ನೀಡಿರುವ ಅನುದಾನ ಅತ್ಯಂತ ಕಡಿಮೆಯೇ?, ಸರಕಾರ ಸಮುದಾಯದ ಕಲ್ಯಾಣಕ್ಕಾಗಿ ಇನ್ನೂ ಅನುದಾನ ಒದಗಿಸಬೇಕು ಎಂದು ಅವರು ಕೋರಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X