ರೌಡಿಶೀಟರ್ ಶಿವರಾಜ ಅಲಿಯಾಸ್ ಕುಳ್ಳ ಶಿವ ಗಡಿಪಾರು

ಬೆಂಗಳೂರು, ಸೆ.2: ಕೊಲೆ, ದರೋಡೆ, ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಶಿವರಾಜ ಅಲಿಯಾಸ್ ಕುಳ್ಳ ಶಿವನನ್ನು ನಗರದಿಂದ ಗಡಿಪಾರು ಮಾಡಿ ಸಿಸಿಬಿಯ ಜಂಟಿ ಪೆÇಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಆದೇಶ ಹೊರಡಿಸಿದ್ದಾರೆ.
ಶಿವರಾಜ ಅಲಿಯಾಸ್ ಕುಳ್ಳ ಶಿವ ಎಂಬಾತ ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಬ್ಯಾಡರಹಳ್ಳಿ, ತಾವರೆಕೆರೆ, ಮಾದನಾಯಕನಹಳ್ಳಿ, ಕುಂಬಳಗೂಡು ಪೊಲೀಸ್ ಠಾಣೆಗಳಲ್ಲಿ 10 ಪ್ರಕರಣಗಳು ದಾಖಲಾಗಿವೆ.
ಆರೋಪಿಯು ಪದೇ ಪದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದು, ಆತನ ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಅಧಿನಿಯಮದ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿ.ಬಿ.ಎಂ.ಪಿ ವ್ಯಾಪ್ತಿಯ ಪ್ರದೇಶವನ್ನು ಪ್ರವೇಶಿಸದಂತೆ ತುಮಕೂರು ಜಿಲ್ಲೆಗೆ ಗಡೀಪಾರು ಮಾಡಿ ಆದೇಶಿಸಲಾಗಿದೆ ಎಂದು ಡಾ.ಎಸ್.ಡಿ.ಶರಣಪ್ಪ ಮಾಹಿತಿ ನೀಡಿದ್ದಾರೆ.
Next Story





