ಸಚಿವ ಸ್ಥಾನ ಅಲ್ಲ, ಮುಖ್ಯಮಂತ್ರಿ ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು ಎಂದ ಆರ್.ವಿ ದೇಶಪಾಂಡೆ

ಕಾರವಾರ ಜು.15: 'ಮುಖ್ಯಮಂತ್ರಿ ಹುದ್ದೆಯನ್ನೇ ನನಗೆ ಮೀಸಲಿಟ್ಟಿರಬಹುದು. ಆ ಕಾರಣಕ್ಕೆ ಸಚಿವ ಸ್ಥಾನ ನೀಡಿಲ್ಲ' ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಹೇಳಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ''ಹಿರಿಯ ಶಾಸಕರಾದರೂ ಸಚಿವ ಸ್ಥಾನ ನೀಡದಿರಲು ಕಾರಣ ಏನು?'' ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಮೇಲಿನಂತೆ ಹಾಸ್ಯಭರಿತವಾಗಿ ಉತ್ತರಿಸಿದ್ದಾರೆ.
''ರಾಜ್ಯದಲ್ಲಿ ಗ್ಯಾರಂಟಿಗಳ ಮೂಲಕವೇ ಬಿಜೆಪಿಯನ್ನು ಸೋಲಿಸಿದ್ದೇವೆ. ರಾಜ್ಯ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದೆ. ವಿರೋಧ ಪಕ್ಷದವರು ಇದನ್ನೆಲ್ಲ ಮೆಚ್ಚಬೇಕು, ಟೀಕೆ ಮಾಡಬಾರದು'' ಎಂದರು.
''ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವೈಜ್ಞಾನಿಕ ಕಾಮಗಾರಿ ವಿಚಾರವಾಗಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತಿರುವುದು ತಪ್ಪು. ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹಿಸಬಾರದು. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೂ ಪತ್ರ ಬರೆಯುತ್ತೇನೆ'' ಎಂದು ತಿಳಿಸಿದರು.
Next Story





