ವಿಕಾಸಸೌಧದಲ್ಲಿ ಸದ್ಭಾವನಾ ದಿನ ಆಚರಣೆ; ಅಧಿಕಾರಿಗಳು, ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ

ಬೆಂಗಳೂರು: ಸದ್ಭಾವನಾ ದಿನದ ಅಂಗವಾಗಿ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ, ವಿಧಾನ ಪರಿಷತ್ ನ ಸಭಾಪತಿ ಸಲೀಂ ಅಹ್ಮದ್, ವಿಧಾನ ಸಭೆಯ ಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರುಗಳು ಸಮ್ಮುಖದಲ್ಲಿ ಸಚಿವಾಲಯದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ, ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ, ಮುದ್ರಾಂಕ ಮತ್ತು ನೋಂದಣಿ ಹಾಗೂ ಸಾಮಾಜಿಕ ಭದ್ರತಾ ವಿಭಾಗದ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಜಗದೀಶ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Next Story




