Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಕಲೇಶಪುರ | ಪಶ್ಚಿಮ ಘಟ್ಟದ...

ಸಕಲೇಶಪುರ | ಪಶ್ಚಿಮ ಘಟ್ಟದ ಅಂಚಿನಲ್ಲೊಂದು ಕಾಗಿನಹರೆ ಚಿಕ್ಕ ಕೋಟೆ

ಟಿಪ್ಪು ಸುಲ್ತಾನ್ ಕಟ್ಟಿಸಿದ ಕೋಟೆ ಶಿಥಿಲಾವಸ್ಥೆಯಲ್ಲಿ

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್13 Nov 2023 10:28 AM IST
share
ಸಕಲೇಶಪುರ | ಪಶ್ಚಿಮ ಘಟ್ಟದ ಅಂಚಿನಲ್ಲೊಂದು ಕಾಗಿನಹರೆ ಚಿಕ್ಕ ಕೋಟೆ

ಹಾಸನ: ಸಕಲೇಶಪುರ (Sakleshpura) ತಾಲೂಕಿನ ಪಶ್ಚಿಮ ಘಟ್ಟದ ಅಂಚಿನಲ್ಲಿರುವ ಗ್ರಾಮ ಕಾಗಿನಹರೆ. ಹೊಂಗಡಹಳ್ಳದ ಹತ್ತಿರವಿರುವ ಕಾಗಿನಹರೆ ಗುಡ್ಡದ ಮೇಲೆ ಟಿಪ್ಪು ಸುಲ್ತಾನ್ ಚಿಕ್ಕ ಕೋಟೆಯನ್ನು ಕಟ್ಟಿಸಿದ್ದಾರೆ. ಇಲ್ಲಿಯ ಎತ್ತರವಾದ ಬೋಳು ಗುಡ್ಡ ಪರಿಸರವು ಹಸಿರಿನಿಂದ ನೋಡುಗರನ್ನು ಆಕರ್ಷಿಸುತ್ತದೆ.

ಕೊಡಗು ಮತ್ತು ದಕ್ಷಿಣ ಕನ್ನಡಕ್ಕೆ ನಿಕಟವಾದಂತಿರುವ ಈ ಸ್ಥಳದಲ್ಲಿ ಕೋಟೆಯನ್ನು ಸುಮಾರು 1792ರಲ್ಲಿಯೇ ಕಟ್ಟಿಸಿ ಅಲ್ಲಿ ಚಿಕ್ಕ ಸೈನ್ಯ ಪಡೆಯನಿಟಿದ್ದರು.

ಶಿಥಿಲಗೊಂಡ ಈ ಕೋಟೆಯು 80 ಅಡಿ ಉದ್ದ 60 ಅಡಿ ಅಗಲವಾಗಿದ್ದು, ಸ್ಥಳೀಯ ಕಲ್ಲುಗಳಿಂದ ಮಣ್ಣನ್ನು ಹಾಕಿ ಕಟ್ಟಿಸಲಾಗಿದೆ. ಸುತ್ತಲೂ 6ಅಡಿ ಕಂದಕವಿದ್ದು ಈ ಪ್ರವೇಶದಲ್ಲಿ ಮಾತ್ರ ಹೋಗಲು ದಾರಿ ಇದೆ. ಪ್ರವೇಶಗೊಂಡ ತಕ್ಷಣವೇ 5 ಅಡಿ ಎತ್ತರ ತಡೆಗೋಡೆಯನ್ನು ಹಾಕಲಾಗಿದೆ.

ಹಿಂಭಾಗದಲ್ಲಿ 50X40 ಅಡಿ ಅಗಲದ ಇನ್ನೊಂದು ಕೋಟೆಯ ಆಕಾರದ ಸ್ಥಳವಿದ್ದು ಇದನ್ನು ಸೈನಿಕರ ತಂಗುವಿಕೆಗಾಗಿ ಯೂ ಮದ್ದುಗುಂಡುಗಳನ್ನು ಸಂಗ್ರಹಸಿ ಇಡಲಿಕ್ಕಾಗಿ ಮಾಡಲಾಗಿತ್ತು. ಅಂದಿನ ದಿನಗಳಲ್ಲಿ ಮಂಗಳೂರು ಕಡೆಯಿಂದ ಹಡಗಿನಲ್ಲಿ ಬಂದು ಮೈಸೂರು ಸೀಮೆಗೆ ಬರುವ ಬ್ರಿಟಿಷರನ್ನು ಸದೆ ಬಡಿಯಲು ಈ ಕೋಟೆ ನಿರ್ಮಾಣವಾಗಿದೆ.

ಹಸಿರಿನಿಂದ ಕಂಗೊಳಿಸುತ್ತಿರುವ ಇಲ್ಲಿಯ ಬೆಟ್ಟ, ಗುಡ್ಡ, ದಿಣ್ಣೆ ಕಾಡುಗಳ ನಡುವೆ ಆಗಸದಲ್ಲಿ ವಿವಿಧ ಭಂಗಿಗಳಲ್ಲಿ ನರ್ತಿಸಿದಂತೆ ಚಲಿಸುವ ಮೋಡಗಳ ಪ್ರಕೃತಿಯ ಮನಮೋಹಕ ದೃಶ್ಯ ಕಾಗಿನಹರೆಯಲ್ಲಿ ಕಣ್ಣಿಗೆ ಹಬ್ಬವುಂಟು ಮಾಡುತ್ತದೆ. ರಕ್ಷಿತಾರಣ್ಯ ಪ್ರದೇಶಗಳಲ್ಲಿ ಪ್ರಕೃತಿಯು ಹಸಿರು ಸೀರೆಯುಟ್ಟಂತೆ ಕಂಗೊಳಿಸುತ್ತಾಳೆ. ಮುಗಿಲಿಗೆ ಮುಖಮಾಡಿ ನಿಂತಿರುವ ಬೆಟ್ಟದ ಮೇಲೆ ಶ್ವೇತಧಾರಿಯಂತೆ ಮೋಡಗಳ ನೈಸರ್ಗಿಕ ಸೌಂದರ್ಯ ಕಣ್ಣುಂಬಿಕೊಳ್ಳಲು ಪ್ರವಾಸಿಗರನ್ನು ಈ ಪ್ರದೇಶ ಆಕರ್ಷಿಸುತ್ತದೆ.

ಇತಿಹಾಸದ ಪುಟದಲ್ಲಿ ದಾಖಲು

ಮಂಜರಾಬಾದ್ ಕೋಟೆಯಷ್ಟು ದೊಡ್ಡದಾಗಿರದೆ ಕಟ್ಟಡದ ಶೈಲಿ ಮತ್ತು ಯೋಜನೆಗಳಿಗಾಗಿ ಟಿಪ್ಪು ಇದನ್ನು ಕಟ್ಟಿಸಿದ್ದಾನೆಂದು ಸ್ಪಷ್ಟವಾಗುತ್ತದೆ. ಇತಿಹಾಸಕಾರ ದಿವಂಗತ ಚಂದ್ರಶೇಖರ ದೋಳೆಕರ್ ಈ ಕೋಟೆಯ ಬಗ್ಗೆ 'ಸಕಲೇಶಪುರ ಇತಿಹಾಸ' ಕೃತಿಯಲ್ಲಿ ದಾಖಲಿಸಿದ್ದಾರೆ.

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X