Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಸಂಪುಟ ಪುನರ್ ರಚನೆ’ ಬಹಿರಂಗ ಹೇಳಿಕೆ...

‘ಸಂಪುಟ ಪುನರ್ ರಚನೆ’ ಬಹಿರಂಗ ಹೇಳಿಕೆ ಅನಗತ್ಯ : ಸಂತೋಷ್ ಲಾಡ್

ವಾರ್ತಾಭಾರತಿವಾರ್ತಾಭಾರತಿ11 Oct 2025 8:24 PM IST
share
‘ಸಂಪುಟ ಪುನರ್ ರಚನೆ’ ಬಹಿರಂಗ ಹೇಳಿಕೆ ಅನಗತ್ಯ : ಸಂತೋಷ್ ಲಾಡ್
"ನಾಯಕತ್ವ ಬದಲಾವಣೆ ಮಾಡುವುದಿದ್ದರೆ ಅದು ಹೈಕಮಾಂಡ್ ನಿರ್ಧರಿಸುತ್ತದೆ"

ಬೆಂಗಳೂರು, ಅ.11: ಸರಕಾರದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೆ ಶಾಸಕರು, ಸಚಿವರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುವುದು ಅನಗತ್ಯ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಶನಿವಾರ ನಗರದಲ್ಲಿರುವ ತಮ್ಮ ಸರಕಾರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಮಾಡುವುದಿದ್ದರೆ ಅದು ಹೈಕಮಾಂಡ್ ನಿರ್ಧರಿಸುತ್ತದೆ. ಶಾಸಕರು, ಸಚಿವರು ಈ ವಿಚಾರದಲ್ಲಿ ಮಾತನಾಡುವ ಅಗತ್ಯತೆ ಇಲ್ಲ ಎಂದು ಹೇಳಿದರು.

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಕೈ ಬಿಡಬೇಕು ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಮ್ಮ ಸಮಸ್ಯೆಗಳು ಏನೆ ಇದ್ದರೂ ಅದನ್ನು ಹೈಕಮಾಂಡ್ ಗಮನಕ್ಕೆ ತರಬೇಕು. ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಸಂತೋಷ್ ಲಾಡ್ ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅ.13ರಂದು ಸಚಿವರಿಗೆ ಔತಣಕೂಟ ಏರ್ಪಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಪ್ರತಿ ವರ್ಷ ಊಟಕ್ಕೆ ಕರೆಯುತ್ತಾರೆ. ಅದರಲ್ಲಿ ವಿಶೇಷತೆ ಏನು ಇಲ್ಲ ಎಂದು ಅವರು ತಿಳಿಸಿದರು.

ನಿತಿನ್ ಗಡ್ಕರಿ ಪ್ರಧಾನಿ ಆಗುತ್ತಾರೆ: ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್‍ನಲ್ಲಿ ಕ್ರಾಂತಿ ಆಗಿ, ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲಿ ಅಲ್ಲ, ಡಿಸೆಂಬರ್‍ನಲ್ಲಿ ಕೇಂದ್ರ ಸರಕಾರದಲ್ಲಿ ಕ್ರಾಂತಿ ಆಗಿ ನಿತಿನ್ ಗಡ್ಕರಿ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.

ನರೇಂದ್ರ ಮೋದಿ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗಾಗಲಿ, ಮಾಧ್ಯಮದವರಿಗಾಗಲಿ ಧೈರ್ಯ ಇಲ್ಲ. ಒತ್ತಾಯಪೂರ್ವಕವಾಗಿ ಮೋದಿ ಮಾಡುತ್ತಿರುವ ಎಲ್ಲ ಕೆಲಸಗಳನ್ನು ಒಪ್ಪುತ್ತಿದ್ದಾರೆ. ಬಿಹಾರದಲ್ಲಿ ಮಹಿಳೆಯರ ಖಾತೆಗಳಿಗೆ 10 ಸಾವಿರ ರೂ.ಗಳನ್ನು ಹಾಕಿದ್ದಾರೆ. ಅಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೆ, ಯಾಕೆ ಹಣ ಕೊಡುವ ಪರಿಸ್ಥಿತಿ ಬರುತ್ತಿತ್ತು ಎಂದು ಸಂತೋಷ್ ಲಾಡ್ ಪ್ರಶ್ನಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X