Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಗಸ್ಟ್ ಅಂತ್ಯದೊಳಗೆ ಶಾಲಾ ಮಕ್ಕಳಿಗೆ...

ಆಗಸ್ಟ್ ಅಂತ್ಯದೊಳಗೆ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ ಪೂರ್ಣ : ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ17 Aug 2026 8:02 PM IST
share
ಆಗಸ್ಟ್ ಅಂತ್ಯದೊಳಗೆ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ ಪೂರ್ಣ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದ ಸರಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ಅಂದಾಜು 36.56ಲಕ್ಷ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉಚಿತ ಶೂ-ಸಾಕ್ಸ್ ಹಾಗೂ ಸ್ಯಾಂಡಲ್ ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಆಗಸ್ಟ್ ಅಂತ್ಯದೊಳಗಾಗಿ ಎಲ್ಲ ವಿದ್ಯಾರ್ಥಿಗಳಿಗೆ ವಿತರಣೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯೆ ಬಲ್ಕೀಸ್ ಬಾನು ಪ್ರಶ್ನೆಗೆ ಉತ್ತರಿಸಿದ ಸಚಿವರು, 2026-27ನೇ ಶೈಕ್ಷಣಿಕ ಸಾಲಿನಲ್ಲಿ ಒಟ್ಟು ರೂ. 104.00 ಕೋಟಿ ಅಂದಾಜು ವೆಚ್ಚದಲ್ಲಿ ರಾಜ್ಯಮಟ್ಟದಲ್ಲಿ ಪಾರದರ್ಶಕ ಟೆಂಡರ್ ಮೂಲಕ ‘ವಿದ್ಯಾವಿಕಾಸ ಯೋಜನೆ’ಯಡಿ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ಮತ್ತು ಸ್ಯಾಂಡಲ್‍ಗಳ ಖರೀದಿಗೆ ಅನುಮೋದನೆ ನೀಡಲಾಗಿದೆ ಎಂದರು.

ಒಟ್ಟು 36,61,267 ಪ್ರಮಾಣದ ಪೂರೈಕೆಗೆ ಕಾರ್ಯಾದೇಶ ನೀಡಲಾಗಿದ್ದು, ಈ ಪೈಕಿ ಈಗಾಗಲೇ 21,92,529 ಪ್ರಮಾಣ ಶಾಲೆಗಳಿಗೆ ತಲುಪಿ ವಿತರಣೆಯಾಗಿದೆ. 12,59,298 ಪ್ರಮಾಣ ತಾಲೂಕುಗಳಿಗೆ ಸಾಗಣೆಯಲ್ಲಿದ್ದು, 2,09,440 ಪ್ರಮಾಣ ಉತ್ಪಾದನಾ ಹಂತದಲ್ಲಿದೆ. ಅಧಿಕ ಮಳೆಯಾಗುವ ಪ್ರದೇಶಗಳ ಹಾಗೂ ಎಸ್‍ಡಿಎಮ್‍ಸಿ ವಿನಂತಿಸಿದ ಶಾಲೆಗಳ ವಿದ್ಯಾರ್ಥಿಗಳಿಗೆ ಶೂಗಳ ಬದಲಿಗೆ ಗುಣಮಟ್ಟದ ವ್ಯಾಲ್ಕ್ರೋ ಸ್ಯಾಂಡಲ್‍ಗಳನ್ನು ಪೂರೈಸಲಾಗುತ್ತಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಉಚಿತ ಶೂ-ಸಾಕ್ಸ್ ವಿತರಿಸುವ ಸೌಲಭ್ಯ ಇರುವುದಿಲ್ಲ. ಉತ್ಪನ್ನಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರದ ಫುಟ್‍ವೇರ್ ಡಿಸೈನ್ ಮತ್ತು ಡೆವಲಪ್‍ಮೆಂಟ್ ಇನ್‍ಸ್ಟಿಟ್ಯೂಟ್, ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು, ಸುರತ್ಕಲ್‍ನ ಎನ್‍ಐಟಿಕೆ ಹಾಗೂ ಲಿಡ್ಕರ್ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಉನ್ನತ ಮಟ್ಟದ ತಾಂತ್ರಿಕ ಸಮಿತಿಯನ್ನು ರಚಿಸಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಸರಬರಾಜಿಗೆ ಮೊದಲು ‘ಪೂರ್ವ-ಸಾಗಣೆ ತಪಾಸಣೆ' ನಡೆಸಲಾಗುತ್ತಿದ್ದು, ಎಫ್‍ಡಿಡಿಐ ಸಂಸ್ಥೆಯಿಂದ ತೃಪ್ತಿಕರ ಪರೀಕ್ಷಾ ವರದಿ ಬಂದ ನಂತರವೇ ಪೂರೈಕೆಗೆ ಅನುಮತಿ ನೀಡಲಾಗುತ್ತಿದೆ. ಸರಬರಾಜು ಆದೇಶ ನೀಡಿದ 60 ದಿನಗಳ ಒಳಗೆ ಪೂರೈಕೆ ಪೂರ್ಣಗೊಳಿಸಬೇಕು. ಶೂ-ಸಾಕ್ಸ್ ಹಾಗೂ ಸ್ಯಾಂಡಲ್‍ಗಳ ಅಳತೆಯಲ್ಲಿ ವ್ಯತ್ಯಾಸಗಳಿದ್ದರೆ ಮುಂದಿನ 15 ದಿನಗಳ ಒಳಗೆ ಉಚಿತವಾಗಿ ಬದಲಾಯಿಸಿ ನೀಡಲು ತಿಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸರಬರಾಜು ಮಾಡದಿದ್ದಲ್ಲಿ ಶೇ. 0.75 ರಷ್ಟು ವಿಳಂಬ ದಂಡ ವಿಧಿಸಲಾಗುವುದು ಹಾಗೂ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು.

ಜಿಲ್ಲಾ, ತಾಲೂಕು ಮತ್ತು ಶಾಲಾ ಮಟ್ಟದಲ್ಲಿ ಉಸ್ತುವಾರಿ ಸಮಿತಿಗಳನ್ನು ರಚಿಸಲಾಗಿದ್ದು, ನೋಡಲ್ ಅಧಿಕಾರಿಗಳನ್ನು ನೇಮಿಸಿ ಹಂಚಿಕೆ ಪ್ರಕ್ರಿಯೆಯನ್ನು ಕ್ಷಿಪ್ರವಾಗಿ ನಿರ್ವಹಿಸಲಾಗುತ್ತಿದೆ. ಜುಲೈ 31ರವರೆಗೆ ಶಾಲೆಗಳಲ್ಲಿ ದಾಖಲಾತಿಗೆ ಅವಕಾಶವಿದ್ದುದರಿಂದ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಕಾಲಳತೆಗೆ ತಕ್ಕಂತೆ ವಿತರಿಸುವ ಪ್ರಕ್ರಿಯೆಯಿಂದ ಸ್ವಲ್ಪ ವಿಳಂಬವಾಗಿದ್ದು, ಆಗಸ್ಟ್ ಮಾಹೆಯ ಅಂತ್ಯದ ವೇಳೆಗೆ ರಾಜ್ಯದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ಹಾಗೂ ಸ್ಯಾಂಡಲ್ ಸಿಗಲಿದೆ ಎಂದು ಮಧು ಬಂಗಾರಪ್ಪ ಭರವಸೆ ನೀಡಿದರು.

Tags

schoolMinister Madhu Bangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X