Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ಬಂದ್‌ ಗೆ ಬೆಂಬಲವಿಲ್ಲ,...

ಬೆಂಗಳೂರು ಬಂದ್‌ ಗೆ ಬೆಂಬಲವಿಲ್ಲ, ಸೆ.29ಕ್ಕೆ ʼಕರ್ನಾಟಕ ಬಂದ್ʼ: ವಾಟಾಳ್ ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ25 Sept 2023 1:00 PM IST
share
ಬೆಂಗಳೂರು ಬಂದ್‌ ಗೆ ಬೆಂಬಲವಿಲ್ಲ, ಸೆ.29ಕ್ಕೆ ʼಕರ್ನಾಟಕ ಬಂದ್ʼ: ವಾಟಾಳ್ ನಾಗರಾಜ್

ಬೆಂಗಳೂರು, ಸೆ.25: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಬಾರದೆಂದು ಒತ್ತಾಯಿಸಿ ಕರೆ ನೀಡಿದ್ದ ನಾಳೆಯ ಬೆಂಗಳೂರು ಬಂದ್ ಹೋರಾಟಕ್ಕೆ ಬೆಂಬಲ ಸೂಚಿಸದ ಕನ್ನಡ ಒಕ್ಕೂಟವು, ಸೆ.29(ಶುಕ್ರವಾರ) ‘ಅಖಂಡ ಕರ್ನಾಟಕ ಬಂದ್’ ಮಾಡುವುದಾಗಿ ಘೋಷಿಸಿದೆ.

ಸೋಮವಾರ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ರೈತ ಹಾಗೂ ಕನ್ನಡ ಪರ ಹೋರಾಟಗಾರರು, ‘ಮಂಗಳವಾರ ಬೆಂಗಳೂರು ಬಂದ್ ನಡೆಸಿದರೆ, ಯಾವುದೇ ಪರಿಣಾಮ ಬೀರುವುದಿಲ್ಲ. ಹಾಗಾಗಿ, ಸೆ.29ಕ್ಕೆ ‘ಕರ್ನಾಟಕ ಬಂದ್’ ನಡೆಸಿ ಪ್ರಧಾನಿ ಮೋದಿ, ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದು ಪ್ರಕಟಿಸಿದರು.

ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಒಕ್ಕೂಟದ ವಾಟಾಳ್ ನಾಗರಾಜ್, ‘ಮಂಗಳವಾರ ಬೆಂಗಳೂರು ಬಂದ್ ಕರೆ ನೀಡಿದ್ದು, ಇದರಲ್ಲಿ ರಾಜಕೀಯ ಪಕ್ಷಗಳ ಕೈವಾಡ ಇದೆ. ಹಾಗಾಗಿ, ಯಾವುದೇ ಕಾರಣಕ್ಕೂ ಈ ಬಂದ್ ಬೆಂಬಲ ನೀಡಲ್ಲ. ಬದಲಾಗಿ ಸೆ.29ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಹೇಳಿದರು.

ಇನ್ನೂ, ಬೆಂಗಳೂರು ಬಂದ್ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ಪಾಲ್ಗೊಳ್ಳುವುದಿಲ್ಲ. ಈ ಬಂದ್ ನಡೆಸುವ ಮುನ್ನ ನಮ್ಮೊಂದಿಗೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ. ಜೊತೆಗೆ ಮಂಗಳವಾರ ಬೆಂಗಳೂರು ಬಂದ್ ಬಿಟ್ಟು ಸೆ.29ಕ್ಕೆ ಕರ್ನಾಟಕ ಬಂದ್ ನಡೆಸಿ ಪರಿಣಾಮಕಾರಿಯಾಗಿ ಒಗ್ಗೂಡಿ ಹೋರಾಟ ನಡೆಸೋಣ ಎಂದು ಮನವಿ ಮಾಡಿಕೊಂಡರು ಒಪ್ಪಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬೆಂಗಳೂರು ಬಂದ್ ನಡೆಸಿದರೆ ಬರೀ ನಗರ ವಲಯಕ್ಕೆ ಮಾತ್ರ ಈ ಹೋರಾಟ ಸೀಮಿತವಾಗಲಿದೆ. ಆದರೆ ಕಾವೇರಿ ನದಿ ನೀರು ಬೆಂಗಳೂರು ಮಾತ್ರವಲ್ಲದೆ ನಾಲ್ಕೈದು ಜಿಲ್ಲೆಗಳ ವಿಷಯವಾಗಿದೆ. ಜೊತೆಗೆ ಇದು ಇಡೀ ರಾಜ್ಯದ ಮೇಲೆ ಪರಿಣಾಮ ಬೀರುವ ಜಲ ವಿವಾದ ಆಗಿದ್ದು, ಇದಕ್ಕೆ ಉತ್ತರ ಕರ್ನಾಟಕ ಭಾಗದ ಜನರು ಸಹ ಬೆಂಬಲ ಸೂಚಿಸಲಿದ್ದಾರೆ.ಹಾಗಾಗಿ ಕರ್ನಾಟಕ ಬಂದ್ ಒಂದೇ ಅಗತ್ಯವಿದ್ದು, ಇದಕ್ಕೆ ಸರಿಸುಮಾರು 1200ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಅಧಿಕೃತವಾಗಿ ಬೆಂಬಲ ನೀಡಿವೆ ಎಂದು ಅವರು ತಿಳಿಸಿದರು.

ಕನ್ನಡಪರ ಹೋರಾಟಗಾರ ಸಾರಾ ಗೋವಿಂದು ಮಾತನಾಡಿ, ‘ಶುಕ್ರವಾರ ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ. ಇದಕ್ಕೆ ಎಲ್ಲ ರೀತಿಯ ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ ಮಂಗಳವಾರ ಬೆಂಗಳೂರು ಹೋರಾಟ ಆಮ್ ಆದ್ಮಿ ಪಕ್ಷಕ್ಕೆ ಸೀಮಿತವಾಗಿದೆ. ಅಲ್ಲದೆ, ಅವರು ಈ ಹಿಂದೆ ಕನ್ನಡ, ನಾಡು, ನುಡಿ, ಜಲಕ್ಕೆ ನೀಡಿದ ಕೊಡುಗೆಗಳೇನು ಎಂದು ಪ್ರಶ್ನಿಸಿದರು.

ರೈತನಾಯಕ ಬಡಗಲಪುರ ನಾಗೇಂದ್ರ ಮಾತನಾಡಿ, ‘ಕರ್ನಾಟಕ ಬಂದ್‍ಗೆ ನಮ್ಮ ಒಮ್ಮತಾ ಬೆಂಬಲ ಇದೆ. ಅಂದು ರೈತರ ನಾಯಕರು ಈ ಹೋರಾಟದಲ್ಲಿ ಪಾಲ್ಗೊಂಡು ಬಂದ್ ಯಶಸ್ವಿಗೊಳಿಸುವುದು ಮಾತ್ರವಲ್ಲದೆ, ಆಡಳಿತ ನಡೆಸುತ್ತಿರುವ ಸರಕಾರಗಳಿಗೆ ಬಿಸಿ ಮುಟ್ಟಿಸುತ್ತೇವೆ’ ಎಂದರು.

ಕನ್ನಡಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಮಾತನಾಡಿ, ಕಾವೇರಿ ವಿಚಾರವಾಗಿ ಒಂದೇ ದಿನ, ಒಂದೇ ಬಂದ್ ಹೋರಾಟ ನಡೆಯಬೇಕು. ಅದೇ ಕಾರಣಕ್ಕಾಗಿ ಶುಕ್ರವಾರ ಅಖಂಡ ಕರ್ನಾಟಕದ ಬಂದು ಹೋರಾಟಕ್ಕೆ ಕರೆ ನೀಡಲಾಗಿದೆ. ಅಂದು ಸಾವಿರಾರು ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದು ನುಡಿದರು. ಇನ್ನೂ, ಸಭೆಯಲ್ಲಿ ಪಾಲ್ಗೊಂಡಿದ್ದ ನೂರಕ್ಕೂ ಅಧಿಕ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಗೆ ಬೆಂಬಲಿಸುವುದಾಗಿ ಘೋಷಿಸಿದರು.

ಸೆ.29ರಂದು ಕರ್ನಾಟಕ ಬಂದ್ ಬೆಂಬಲಿಸಿ, ರಾಜಧಾನಿ ಬೆಂಗಳೂರಿನ ಟೌನ್‍ಹಾಲ್ ಮುಂಭಾಗದಿಂದ ಫ್ರೀಡಂ ಪಾರ್ಕ್‍ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಆನಂತರ ಕಾವೇರಿ ನದಿ ನೀರು ಹರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಕೆ ಮಾಡಲಾಗುವುದು ಎಂದು ವಾಟಾಳ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X