Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಿರಿಯ ವಕೀಲ ಎ.ಜಿ.ಶಿವಣ್ಣ ನಿಧನ

ಹಿರಿಯ ವಕೀಲ ಎ.ಜಿ.ಶಿವಣ್ಣ ನಿಧನ

ವಾರ್ತಾಭಾರತಿವಾರ್ತಾಭಾರತಿ18 Oct 2023 6:59 PM IST
share
ಹಿರಿಯ ವಕೀಲ ಎ.ಜಿ.ಶಿವಣ್ಣ ನಿಧನ

ಬೆಂಗಳೂರು, ಅ.18: ಕರ್ನಾಟಕ ಹೈಕೋರ್ಟ್‍ನ ಹಿರಿಯ ವಕೀಲರು, ಈ ಹಿಂದೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಚಾಲಕರು ಮತ್ತು ಬೆಂಗಳೂರು ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಅಳಶೆಟ್ಟಿಕೆರೆ ಗಂಗಣ್ಣ ಶಿವಣ್ಣ(68) ಬುಧವಾರ ಬೆಳಗಿನ ಜಾವ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಪತ್ನಿ, ಇಬ್ಬರು ಪುತ್ರಿಯರು ಮತ್ತು ಹೈಕೋರ್ಟ್ ವಕೀಲರೂ ಆದ ಪುತ್ರ ಅಮರ್ ಅವರನ್ನು ಅಗಲಿದ್ದಾರೆ.

ಸಹೋದ್ಯೋಗಿಗಳ ಜೊತೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿರುವ ಮಹಾಬಲೇಶ್ವರ ದೇವಸ್ಥಾನಕ್ಕೆ ತೆರಳಿದ್ದರು. ಬುಧವಾರ ಬೆಳಗಿನ ಜಾವ 3 ರಿಂದ 4 ಗಂಟೆ ವೇಳೆಯಲ್ಲಿ ತೀವ್ರ ಹೃದಯಾಘಾತಕ್ಕೆ ಈಡಾಗಿ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಅಮರ್ ತಿಳಿಸಿದ್ದಾರೆ.

ಅಂತ್ಯಸಂಸ್ಕಾರ ಗುರುವಾರ(ಅ.19) ಬೆಳಗ್ಗೆ ತುಮಕೂರು ತಾಲೂಕಿನ ಕುಣಿಗಲ್ ರಸ್ತೆಯ ನಾಗವಲ್ಲಿ ಬಳಿಯ ಕೋಡಿ ಮುದ್ದನಹಳ್ಳಿ ತೋಟದಲ್ಲಿ ನೆರವೇರಲಿದೆ ಎಂದು ಅಮರ್ ಹೇಳಿದ್ದಾರೆ.

ತುಮಕೂರಿನ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪೂರೈಸಿದ್ದ ಶಿವಣ್ಣ ಲೇಖಕರೂ ಆಗಿದ್ದರು. ಭೂ ಸುಧಾರಣೆ ಸಂಬಂಧಿತ ಕಾನೂನುಗಳಲ್ಲಿ ಹೆಚ್ಚಿನ ಪರಿಣಿತಿ ಹೊಂದಿದ್ದರು.

‘ಪಹಣಿ ಪತ್ರಿಕೆ ಮತ್ತು ಗೇಣಿ(ಸಾಗುವಳಿ) ಪತ್ರಗಳ ಕಾನೂನಿನ ಒಂದು ಪರಿಚಯ’, ‘ಕಾಮೆಂಟರಿ ಆನ್ ಲ್ಯಾಂಡ್ ರೆವಿನ್ಯೂ ಆ್ಯಕ್ಟ್ಟ್’, ‘ಕರ್ನಾಟಕ ಲ್ಯಾಂಡ್ ಗ್ರ್ಯಾಬಿಂಗ್ ಆ್ಯಕ್ಟ್ಟ್’, ‘ಕರ್ನಾಟಕ ಕೋರ್ಟ್ ಫೀ ಆ್ಯಕ್ಟ್’, ‘ಕನ್ವರ್ಷನ್ ಆಫ್ ಅಗ್ರಿಕಲ್ಚರ್ ಲ್ಯಾಂಡ್’ ಮತ್ತು ‘ರೈಟ್ಸ್ ಆಫ್ ಅಕ್ಯೂಸ್ಡ್’ ಸೇರಿದಂತೆ ಕಾನೂನು ಸಂಬಂಧಿತ ಪುಸ್ತಕಗಳನ್ನು ಕನ್ನಡ ಮತ್ತು ಇಂಗ್ಲಿμïನಲ್ಲಿ ರಚಿಸಿದ್ದಾರೆ. ಇವರ ಪುಸ್ತಕಗಳನ್ನು ‘ಕರ್ನಾಟಕ ಲಾ ಪಬ್ಲಿಷರ್ಸ್’ ಪ್ರಕಟಿಸಿದೆ.

ಸಹಕಾರ ಸಂಘಗಳ ಚುನಾವಣಾ ಅಧಿಕಾರಿಯಾಗಿಯೂ ಜನಪ್ರಿಯರಾಗಿದ್ದ ಶಿವಣ್ಣ, ಬೆಂಗಳೂರು ವಕೀಲರ ಸಂಘ, ಮಹಿಳಾ ವಕೀಲರ ಸಂಘ, ನ್ಯಾಯಮಿತ್ರ ಸಹಕಾರ ಬ್ಯಾಂಕ್‍ಗಳ ಚುನಾವಣಾ ಪ್ರಕ್ರಿಯೆಯಲ್ಲಿನ ಹಲವು ಸುಧಾರಣೆಗೆ ಕಾರಣಕರ್ತರಾಗಿದ್ದರು.

‘ವಕೀಲರ ಆತ್ಮೀಯರು, ಕಿರಿಯರಿಗೆ ಮಾರ್ಗದರ್ಶಕರೂ ಮತ್ತು ಕಾನೂನಿನ ಕನ್ನಡ ಬಳಕೆ ಬಗ್ಗೆ ಅಪಾರ ಆಸ್ಥೆ ವಹಿಸಿದ್ದ ಶಿವಣ್ಣ ನಗುಮುಖದ ಸೌಮ್ಯ ಸ್ವಭಾವದ ಸ್ನೇಹ ಜೀವಿಯಾಗಿದ್ದರು. ಅವರ ಅಕಾಲಿಕ ಸಾವು ನಾಡಿನ ವಕೀಲ ವೃಂದಕ್ಕೆ ತುಂಬಲಾರದ ನಷ್ಟ’ ಎಂದು ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಮತ್ತು ಹಿರಿಯ ವಕೀಲ ರವಿವರ್ಮ ಕುಮಾರ್ ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X