Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು...

ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರ ‘ಸ್ಟ್ರೇಂಜ್​ ಬರ್ಡನ್ಸ್​ – ದಿ ಪಾಲಿಟಿಕ್ಸ್​ ಆ್ಯಂಡ್ ಪ್ರೆಡಿಕಮೆಂಟ್ಸ್​ ಆಫ್​ ರಾಹುಲ್ ಗಾಂಧಿ’ ಪುಸ್ತಕ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ12 Sept 2023 11:37 PM IST
share
ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರ  ‘ಸ್ಟ್ರೇಂಜ್​ ಬರ್ಡನ್ಸ್​ – ದಿ ಪಾಲಿಟಿಕ್ಸ್​ ಆ್ಯಂಡ್ ಪ್ರೆಡಿಕಮೆಂಟ್ಸ್​ ಆಫ್​ ರಾಹುಲ್ ಗಾಂಧಿ’ ಪುಸ್ತಕ ಲೋಕಾರ್ಪಣೆ

ಬೆಂಗಳೂರು, ಸೆ‌.12:ಕಾಂಗ್ರೆಸ್ ನಾಯಕ ರಾಹುಲ್ ಕುರಿತ ಪುಸ್ತಕ ಜೀವನಚರಿತ್ರೆಯಲ್ಲ ಬದಲಾಗಿ ಸಾಮಾಜಿಕ ವಿಶ್ಲೇಷಣೆಯ ದಾಖಲೆಯಾಗಿದೆ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಚಿರಂಜೀವಿ ಸಿಂಗ್ ಅಭಿಪ್ರಾಯಪಟ್ಟರು.

ಮಂಗಳವಾರ ನಗರದ ಅರಮನೆ ರಸ್ತೆಯ ಕೊಂಡಜ್ಜಿ ಸಭಾಂಗಣದಲ್ಲಿ ಪೆಂಗ್ವಿನ್​ ರ‍್ಯಾಂಡಮ್​ ಹೌಸ್ ಪ್ರಕಟಿಸಿರುವ ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರ ‘ಸ್ಟ್ರೇಂಜ್​ ಬರ್ಡನ್ಸ್​ – ದಿ ಪಾಲಿಟಿಕ್ಸ್​ ಆ್ಯಂಡ್ ಪ್ರೆಡಿಕಮೆಂಟ್ಸ್​ ಆಫ್​ ರಾಹುಲ್ ಗಾಂಧಿ’ ((Strange Burdens- The Politics and Predicaments of Rahul Gandhi) ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ಟ್ರೇಂಜ್ ಬರ್ಡನ್ಸ್‌ ಇದು ಜೀವನ ಚರಿತ್ರೆಯಲ್ಲ. ರಾಜಕೀಯ ವ್ಯಾಖ್ಯಾನದ ಪುಸ್ತಕ. ಮಾರ್ಚ್ 2004ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದಾಗಿನಿಂದ ರಾಹುಲ್ ಗಾಂಧಿ ಅವರ ಆಲೋಚನೆಗಳು ಮತ್ತು ನಾಯಕತ್ವವನ್ನು ಕೃತಿಯು ವಿಶ್ಲೇಷಿಸುತ್ತದೆ. ಜತೆಗೆ, ಈಗಿನ ಸಾಮಾಜಿಕ ದೃಷ್ಟಿಕೋನ ನೋಡುವ ದಾಖಲೆ ಆಗಿದೆ ಎಂದರು.

ಸುಗತ ಅವರ ಪುಸ್ತಕದಲ್ಲಿ ರಾಹುಲ್ ಗಾಂಧಿ ಅವರ ಮಾನಸಿಕತೆ, ಜನರ ಒಡನಾಟ, ವಿಭಿನ್ನ ಹೋರಾಟ. ಅದರಲ್ಲೂ, ಪ್ರಭಾವಿಗಳನ್ನು ಎದುರು ಹಾಕಿಕೊಂಡಿರುವ ಪರಿಯನ್ನು ವಿಶ್ಲೇಷಣೆ ಮಾಡಿದ್ದಾರೆ. ಹೀಗಾಗಿ, ಇದೊಂದು ಭಿನ್ನ ಪುಸ್ತಕಯೇ ಇರಲಿದೆ ಎಂದು ಅವರು ನುಡಿದರು.

ಹಿರಿಯ ನಟಿ ಹಾಗೂ ಸಾಹಿತಿ ಪದ್ಮಾವತಿ ರಾವ್​ ಮಾತನಾಡಿ, ನಾನು ಹಿಂದೂ ಆಗಿದ್ದೇನೆ‌.ಆದರೆ, ಎಂದೂ ಸಹ ಮೂಲಭೂತವಾದವನ್ನು ಬೆಂಬಲಿಸುವುದಿಲ್ಲ. ಜಾತ್ಯಾತೀತೆ, ಸಹಬಾಳ್ವೆವೇ ನನ್ನ ಹಾದಿಯಾಗಿದೆ ಎಂದು ಅಭಿಪ್ರಾಯಿಸಿದರು.

ರಾಹುಲ್ ಗಾಂಧಿಯವರ ರಾಜಕೀಯ ಮತ್ತು ಬಿಕ್ಕಟ್ಟುಗಳು, ಗೊಂದಲಗಳು ಮತ್ತು ವಿರೋಧಾಭಾಸಗಳು, ತುಂಟತನ ಮತ್ತು ಗೆಲುವು, ಜೊತೆಗೆ ಅವರ ಸೌಮ್ಯತೆಯನ್ನು ಅರ್ಥಮಾಡಿಕೊಳ್ಳುವ ನಿರೂಪಣೆಗಳು ಪುಸ್ತಕದಲ್ಲಿವೆ.

ಪುಸ್ತಕವು ಸಾರ್ವಜನಿಕವಾಗಿ ಅವರ ಸೂಕ್ತತೆ ಅಥವಾ ಸೂಕ್ತವಲ್ಲದ ಕುರಿತ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸುವುದಿಲ್ಲ. ಆದರೆ ಅವರು ಇತಿಹಾಸದ ಪ್ರವಾಹಗಳಲ್ಲಿ ಹೇಗೆ ಸಿಕ್ಕಿಬಿದ್ದಿದ್ದಾರೆ ಎಂಬುದನ್ನು ಕೇಂದ್ರೀಕರಿಸಿದೆ. ಇದು ಮಿಥ್ಯೆಯನ್ನು ಮುರಿಯುವ ಅಥವಾ ಮಿಥ್ಯೆಯನ್ನು ಸೃಷ್ಟಿಸುವ ಪ್ರಯತ್ನವಲ್ಲ, ಬದಲಾಗಿ ರಾಜಕೀಯ ಒಳನೋಟದ ಅನ್ವೇಷಣೆಯಾಗಿದೆ ಎಂದು ಅವರು ವಿಶ್ಲೇಷಣೆ ಮಾಡಿದರು.

ಇತಿಹಾಸಕಾರ ಹಾಗೂ ಮನಶಾಸ್ತ್ರಜ್ಞ ಡಾ. ಸಂಜೀವ್​ ಜೈನ್​ ಮಾತನಾಡಿ, ಈ ಪುಸ್ತಕವು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಇದೆ. ಹಾಗೆಂದು ಇದು ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷದ ಕುರಿತಾಗಿಲ್ಲ. ಈ ಪುಸ್ತಕವು ಇಬ್ಬರು ವ್ಯಕ್ತಿಗಳು ಮತ್ತು ಅವರು ಪ್ರತಿನಿಧಿಸುವ ಎರಡು ಪಕ್ಷಗಳ ವೈರುಧ್ಯಗಳು ಮತ್ತು ಒಮ್ಮತದ ಕುರಿತಾಗಿವೆ ಎಂದರು.

ಈ ಸಂದರ್ಭದಲ್ಲಿ ಬರಹಗಾರ ಹಾಗೂ ಹೋರಾಟಗಾರ ಪ್ರೊ. ಜಿ.ಎನ್​.ದೇವಿ, ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಇದ್ದರು‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X