Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜಕೀಯ ಚರ್ಚೆಗೆ ಗ್ರಾಸವಾದ ಹಿರಿಯ ಶಾಸಕ...

ರಾಜಕೀಯ ಚರ್ಚೆಗೆ ಗ್ರಾಸವಾದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಪತ್ರ!

ವಾರ್ತಾಭಾರತಿವಾರ್ತಾಭಾರತಿ29 Nov 2023 8:49 PM IST
share
ರಾಜಕೀಯ ಚರ್ಚೆಗೆ ಗ್ರಾಸವಾದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಪತ್ರ!

ಬೆಂಗಳೂರು: ‘ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ನಾನು ಹಣ ಪಡೆದುಕೊಂಡಿದ್ದೇನೆ’ ಎಂಬ ಬಗ್ಗೆ ತನಿಖೆಗೆ ಆದೇಶ ನೀಡಿ ನನ್ನನ್ನು ಆರೋಪ ಮುಕ್ತ ಮಾಡಬೇಕು. ನನ್ನ ಮೇಲಿನ ಆರೋಪ ಸಾಬೀತಾದರೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ನಿರ್ಧಾರ ಮಾಡಿದ್ದೇನೆ’ಎಂಬ ಆಳಂದ ಕ್ಷೇತ್ರದ ಕಾಂಗ್ರೆಸ್ನ ಹಿರಿಯ ಶಾಸಕ ಬಿ.ಆರ್. ಪಾಟೀಲ್, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಬರೆದಿರುವ ಪತ್ರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ‘ಈ ಸರಕಾರದಲ್ಲಿ ಶಾಸಕರಿಗೆ ಎಷ್ಟು ಬೆಲೆ ಇದೆ ಎನ್ನುವುದು ಬಿ.ಆರ್.ಪಾಟೀಲ್ ಪತ್ರದಿಂದಲೇ ಗೊತ್ತಾಗುತ್ತದೆ. ಇದು ನಿರಂತರ ನಡೆಯುತ್ತಿದ್ದು, ಆಡಳಿತ ಪಕ್ಷದಲ್ಲಿ ಏನಾಗುತ್ತದೆ ಎಂಬ ಸರಕಾರ ಗಂಭೀರ ಚಿಂತನೆ ನಡೆಸುವ ಅಗತ್ಯವಿದೆ’ ಎಂದು ಸಲಹೆ ನೀಡಿದ್ದಾರೆ. ಆದರೆ, ಸಚಿವ ಎಂ.ಬಿ.ಪಾಟೀಲ್, ‘ಹಿರಿಯರಾದ ಬಿ.ಆರ್.ಪಾಟೀಲ್ ಅವರು ಭಾವನಾತ್ಮಕವಾಗಿ ಸಿಎಂಗೆ ಪತ್ರ ಬರೆದಿದ್ದಾರೆ’ ಎಂದು ಸಮರ್ಥನೆ ನೀಡಿದ್ದಾರೆ.

ಪಾಟೀಲ್ ಏನಿದು ಪತ್ರ: ‘ನಾನು ಈ ಹಿಂದೆ 2013ರಲ್ಲಿ ಶಾಸಕನಾಗಿದ್ದಾಗ ಕ್ಷೇತ್ರದಲ್ಲಿ ಕೆಲ ಕಾಮಗಾರಿಗಳನ್ನು ಕೆಆರ್ ಐಡಿಎಲ್ಗೆ ನೀಡಿದ್ದೆ. ಆದರೆ, ಕಾರಣಾಂತರಗಳಿಂದ 2013ರಲ್ಲಿ ನೀಡಿದ್ದ ಕಾಮಗಾರಿಗಳು ಪೂರ್ಣವಾಗಿಲ್ಲ. ಈ ಬಗ್ಗೆ ನಾನು ಕಳೆದ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದಾಗ ನನ್ನನ್ನೆ ಅನುಮಾನದಿಂದ ನೋಡಲಾಯಿತು.

ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅನುಪಸ್ಥಿತಿಯಲ್ಲಿ ಸಚಿವ ಕೃಷ್ಣ ಭೈರೇಗೌಡ ನನ್ನ ಮೇಲೆ ಅನುಮಾನ ಬರುವಂತೆ ಸದನದಲ್ಲಿ ಮಾತನಾಡಿದರು. ಕೆಆರ್ ಐಡಿಎಲ್ ಕಡೆಯಿಂದ ನಾನು ಹಣ ಪಡೆದು ಭೂಸೇನೆಗೆ ಕಾಮಗಾರಿ ವಹಿಸಿದ್ದೇನೆಂದು ಸಂಶಯ ಮೂಡುವಂತೆ ಮಾತನಾಡಿದ್ದರು. ಆ ಬಳಿಕ ಪ್ರಿಯಾಂಕ ಖರ್ಗೆ ಕಾಮಗಾರಿಗಳ ಕುರಿತು ಸಭೆ ನಡೆಸಲಿಲ್ಲ.

ನಾನು ಇದೀಗ ಇಂತಹ ಆರೋಪಗಳನ್ನು ಹೊತ್ತುಕೊಂಡು ಬೆಳಗಾವಿ ಅಧಿವೇಶನಕ್ಕೆ ಹಾಜರಾಗುವುದು ಸರಿಯಲ್ಲ. ಆರೋಪಗಳನ್ನು ಹೊತ್ತು ಸದನಕ್ಕೆ ಬಂದರೆ ನಾನು ಆರೋಪ ಒಪ್ಪಿಕೊಂಡಂತಾಗುತ್ತದೆ. ಹೀಗಾಗಿ ನನ್ನ ಮೇಲೆ ಬಂದ ಆರೋಪಗಳ ಕುರಿತು ತನಿಖೆ ನಡೆಸಿ. ಸತ್ಯಾಸತ್ಯತೆ ಹೊರ ಬರಲು ತನಿಖೆಗೆ ಆದೇಶ ನೀಡಿ, ನನ್ನನ್ನು ಆರೋಪ ಮುಕ್ತ ನನ್ನಾಗಿ ಮಾಡಬೇಕು.

ಒಂದು ವೇಳೆ ನನ್ನ ಮೇಲಿನ ಆರೋಪ ಸಾಬೀತಾದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ. ಪಂಚ ರಾಜ್ಯ ಚುನಾವಣೆ ಇರುವುದರಿಂದ ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರಬಾರದೆಂದು ಈಗ ಪತ್ರ ಬರೆಯುತ್ತಿದ್ದೇನೆ. ಕೂಡಲೇ ತನಿಖಾ ಆಯೋಗ ರಚನೆ ಮಾಡಬೇಕು’ ಎಂದು ಶಾಸಕ ಬಿ.ಆರ್.ಪಾಟೀಲ್, ಸಿಎಂಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾವನಾತ್ಮಕ ಪತ್ರ: ‘ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್ ಸೂಕ್ಷ್ಮ ಸ್ವಭಾವದವರು. ಹೀಗಾಗಿ ಭಾವನಾತ್ಮಕವಾಗಿ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿರಬಹುದು. ಅವರು ಸಜ್ಜನ ರಾಜಕಾರಣಿ. ತತ್ವ, ಸಿದ್ದಾಂತದ ಮೇಲೆ ರಾಜಕಾರಣ ಮಾಡಿದವರು. ನಾನು ಚಿಕ್ಕವನಿಂದ ಅವರನ್ನು ನೋಡಿದ್ದೇನೆ. ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ’ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ‘ಅವರ ಮೇಲೆ ಯಾರಾದರೂ ಆರೋಪ ಮಾಡಿದರೆ ಜನ ಒಪ್ಪಲ್ಲ. ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪಗಳು ಸಹಜ. ಹೀಗಾಗಿ ಭಾವನಾತ್ಮಕವಾಗಿ ಪತ್ರ ಬರೆದಿರಬಹುದು. ನಾನು ಆ ಪತ್ರ ನೋಡಿಲ್ಲ. ಸಿಎಂ, ಪಾಟೀಲ್ ಜೊತೆ ಚರ್ಚೆ ಮಾಡಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪತ್ರ ಬರೆದು ಉತ್ನತ ಮಟ್ಟದ ನೈತಿಕತೆ ಮೆರೆದಿದ್ದಾರೆ. ಪತ್ರ ಬರೆದಿದ್ದಕ್ಕೆ ಪ್ರಶಂಸಿಸಬೇಕು’ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X