Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇನ್ನು ಒಂದು ತಿಂಗಳಷ್ಟೇ ಶಿವಮೊಗ್ಗ ಏರ್...

ಇನ್ನು ಒಂದು ತಿಂಗಳಷ್ಟೇ ಶಿವಮೊಗ್ಗ ಏರ್ ಪೋರ್ಟ್ ಕಾರ್ಯಾಚರಣೆ!

ಸುರಕ್ಷತೆ, ಭದ್ರತಾ ಸಮಸ್ಯೆಗಳನ್ನು ಉಲ್ಲೇಖಿಸಿ ಒಂದು ತಿಂಗಳಿಗಷ್ಟೇ ಪರವಾನಿಗೆ ನವೀಕರಿಸಿದ ಡಿಜಿಸಿಎ

ವಾರ್ತಾಭಾರತಿವಾರ್ತಾಭಾರತಿ4 Sept 2024 11:24 AM IST
share
ಇನ್ನು ಒಂದು ತಿಂಗಳಷ್ಟೇ ಶಿವಮೊಗ್ಗ ಏರ್ ಪೋರ್ಟ್ ಕಾರ್ಯಾಚರಣೆ!

ಶಿವಮೊಗ್ಗ: ನಾಗರಿಕ ವಿಮಾನಯಾನ ನಿಯಂತ್ರಣ ಸಂಸ್ಥೆಯಾದ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ನಡೆಸಲು ನೀಡಿರುವ ಪರವಾನಿಗೆ ಸೆಪ್ಟಂಬರ್ 23ಕ್ಕೆ ಮುಕ್ತಾಯವಾಗಲಿದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಪರವಾನಿಗೆಯನ್ನು ನವೀಕರಿಸಲು ವಿಫಲವಾದರೆ, ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಫೆಬ್ರವರಿ 27, 2023 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಶಿವಮೊಗ್ಗ ವಿಮಾನ ನಿಲ್ದಾಣವು ಆಗಸ್ಟ್ 23, 2023ರಂದು ವಿಮಾನ ಹಾರಾಟ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈಗ ಬೆಂಗಳೂರು, ಗೋವಾ, ತಿರುಪತಿ ಮತ್ತು ಹೈದರಾಬಾದ್ಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ನೇರ ವಿಮಾನ ಕಾರ್ಯಾಚರಣೆ ಮಾಡಲಾಗುತ್ತಿದೆ. ಡಿಜಿಸಿಎಯು ಆಗಸ್ಟ್ 23, 2024ರವರೆಗೆ ವಿಮಾನಗಳನ್ನು ನಿರ್ವಹಿಸಲು ಪರವಾನಿಗೆಯನ್ನು ನೀಡಿತ್ತು. ಮತ್ತೆ ಪರವಾನಿಗೆ ನವೀಕರಣ ಮಾಡುವಾಗ ಕೇವಲ ಒಂದು ತಿಂಗಳವರೆಗೆ ಮಾತ್ರ ನವೀಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆಎಸ್ಐಐಡಿಸಿಯಿಂದ ನಿರ್ವಹಣೆ ಮಾಡುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವು ರಾಜ್ಯದಲ್ಲಿ ಮೊದಲನೆಯದು. ಡಿಜಿಸಿಎ ಪರವಾನಿಗೆ ನೀಡುವಾಗ ಸುರಕ್ಷತೆ ಮತ್ತು ಭದ್ರತೆಗೆ ಷರತ್ತುಗಳನ್ನು ಹಾಕಿತ್ತು. ಕೆಲವು ಷರತ್ತುಗಳನ್ನು ಪೂರೈಸದ ಕಾರಣ, ಡಿಜಿಸಿಎ ಒಂದು ವರ್ಷದವರೆಗೆ ಪರವಾನಿಗೆಯನ್ನು ನವೀಕರಿಸಲು ನಿರಾಕರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ರನ್ವೇ ಸುರಕ್ಷತಾ ಪ್ರದೇಶವು ನಿಗದಿತ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂದು ಡಿಜಿಸಿಎ ಹೇಳಿದೆ. ವಿಮಾನ ನಿಲ್ದಾಣಕ್ಕೆ ಬೇಕಾದ ರಕ್ಷಣಾ ಸಾಧನಗಳನ್ನು ಖರೀದಿಸುವಲ್ಲಿ ವಿಳಂಬವಾಗಿದೆ ಮತ್ತು ಅಗ್ನಿ ಸುರಕ್ಷತೆಯನ್ನು ನೋಡಿಕೊಳ್ಳಲು ಸಾಕಷ್ಟು ಉದ್ಯೋಗಿಗಳು ಇಲ್ಲ ಎಂಬುದನ್ನು ಉಲ್ಲೇಖಿಸಿ ಡಿಜಿಸಿಎ ಕೇವಲ ಒಂದು ತಿಂಗಳಿಗೆ ಪರವಾನಿಗೆ ನೀಡಿದೆ.

ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯ ಕೊರತೆ, ಕ್ವಿಕ್ ರಿಯಾಕ್ಷನ್ ಟೀಮ್ (ಕ್ಯೂಆರ್ಟಿ) ಇಲ್ಲದಿರುವುದು ಪರವಾನಿಗೆ ಮಿತಿಗೊಳಿಸಲು ಕಾರಣ ಎನ್ನಲಾಗಿದೆ. ಪರವಾನಿಗೆಯನ್ನು ನವೀಕರಿಸಲು ಈ ʼಕೊರತೆʼಗಳನ್ನು ಸರಿಪಡಿಸುವಂತೆ ಡಿಜಿಸಿಎಯು ಕೆಎಸ್ಐಐಡಿಸಿಗೆ ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಡಿಜಿಸಿಎ ಲೈಸನ್ಸ್ ಸಿಗಲಿದೆ

ಫೈರ್ ಸೇಫ್ಟಿ ವಿಚಾರದಲ್ಲಿ ಅಗತ್ಯ ಸಿಬ್ಬಂದಿಯನ್ನು ಭರ್ತಿ ಮಾಡಲಾಗಿದೆ. ನೈಟ್ ಲ್ಯಾಂಡಿಂಗ್ ಸಮಸ್ಯೆಯೂ ಬಗೆಹರಿದಿದೆ. ಅಗತ್ಯ ಸುರಕ್ಷತಾ ಸಾಮಗ್ರಿಗಳಿವೆ. ನಾಗರಿಕ ವಿಮಾನಯಾನ ನಿಯಂತ್ರಣ ಸಂಸ್ಥೆಯಾದ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಲೈಸನ್ಸ್ ದೊರೆಯಲಿದೆ.

- ಸಿ.ಶಮಂತ್, ಶಿವಮೊಗ್ಗ ವಿಮಾನ ನಿಲ್ದಾಣ ವ್ಯವಸ್ಥಾಪಕರು,

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X