Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಜಾತಿ ಸಮೀಕ್ಷೆ’ಯಲ್ಲಿ ಎಲ್ಲರೂ...

‘ಜಾತಿ ಸಮೀಕ್ಷೆ’ಯಲ್ಲಿ ಎಲ್ಲರೂ ಪಾಲ್ಗೊಳ್ಳಲು ಕ್ರಮ ವಹಿಸಲಾಗಿದೆ : ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ13 Sept 2025 9:18 PM IST
share
‘ಜಾತಿ ಸಮೀಕ್ಷೆ’ಯಲ್ಲಿ ಎಲ್ಲರೂ ಪಾಲ್ಗೊಳ್ಳಲು ಕ್ರಮ ವಹಿಸಲಾಗಿದೆ : ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು, ಸೆ. 13: ‘ಪ್ರತಿಪಕ್ಷ ಬಿಜೆಪಿಯವರ ರೀತಿಯಲ್ಲಿ ಯಾವುದೇ ವರ್ಗದ ಜನರ ಮೇಲೆ ನಾವು ಯಾವುದೇ ಧರ್ಮ ಹಾಗೂ ಆಚರಣಾ ಪದ್ಧತಿಗಳನ್ನು ಬಲವಂತವಾಗಿ ಹೇರುವುದಿಲ್ಲ. ಇಲ್ಲಿ ಎಲ್ಲರೂ ಸ್ವತಂತ್ರವಾಗಿರಲು ಅವಕಾಶ ಕಲ್ಪಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ 60 ಪ್ರಶ್ನೆಗಳ ಪೈಕಿ ನಾಸ್ತಿಕ ಹಾಗೂ ಆಸ್ತಿಕ ಎಂಬ ಕಾಲಂ ಇದ್ದರೆ ತಪ್ಪೇನು. ರಾಜ್ಯದಲ್ಲಿ ಆಡಳಿತದಲ್ಲಿರುವುದು ಬಿಜೆಪಿ ಸರಕಾರವಲ್ಲ, ಕಾಂಗ್ರೆಸ್ ನೇತೃತ್ವದ ಸರಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಡಳಿತದಲ್ಲಿ ಎಲ್ಲರೂ ಸರ್ವರೂ ಸ್ವತಂತ್ರರು ಎಂದು ಹೇಳಿದರು.

ಈ ಹಿಂದೆ ಸಮೀಕ್ಷೆ ನಡೆದ ವೇಳೆ ಬಹಳಷ್ಟು ಮಂದಿ ತಮ್ಮ ಜಾತಿಯ ಹೆಸರನ್ನು ಬರೆಸಲು ನಿರಾಕರಿಸಿದರು. ಸಾಕಷ್ಟು ಮಂದಿ ದೇವರನ್ನು ನಂಬದ ನಾಸ್ತಿಕರಿದ್ದಾರೆ. ದೇವರನ್ನು ನಂಬುವ ಅಸ್ತಿಕರೂ ಇದ್ದಾರೆ. ನಾವೆಲ್ಲಾ ದೇವರನ್ನು ನಂಬುತ್ತೇವೆ. ನಂಬದೇ ಇದ್ದವರ ಮೇಲೆ ನಾವು ಪ್ರಹಾರ ಮಾಡುವುದು ಸರಿಯಲ್ಲ ಎಂದು ಅವರು ಆಕ್ಷೇಪಿಸಿದರು.

ಈ ಹಿಂದೆ ಬಿಜೆಪಿ ಸರಕಾರದಲ್ಲಿ ಯಾವ ಆಹಾರ ತಿನ್ನಬೇಕೆಂಬುದನ್ನು ಅವರೇ ನಿರ್ಧರಿಸುವ ಸ್ಥಿತಿ ಇತ್ತು. ಧರ್ಮದ ಕಾಲಂನಲ್ಲಿ ನಾಸ್ತಿಕ ಅಥವಾ ಅಸ್ತಿಕ ಎಂದು ಬರೆಸುವುದು ಜನರ ಆಯ್ಕೆ. ದೇವರನ್ನು ನಂಬದೇ ಇದ್ದವರು ತಮ್ಮ ಅಭಿಪ್ರಾಯವನ್ನು ದಾಖಲಿಸಲು ಅವಕಾಶ ಕಲ್ಪಿಸಬೇಕೆಂದು ಕೇಳುತ್ತಿದ್ದಾರೆ. ಅದಕ್ಕಾಗಿ ಸರಕಾರ ಎಲ್ಲ ರೀತಿಯ ಅವಕಾಶಗಳನ್ನು ನೀಡಿದೆ ಎಂದು ಅವರು ಸಮರ್ಥಿಸಿದರು.

ಧರ್ಮ, ಜಾತಿ ವಿಚಾರದಲ್ಲಿ ಇದೇ ರೀತಿ ಬದುಕಬೇಕೆಂದು ಒತ್ತಡ ಹಾಕುವುದಿಲ್ಲ. ಜನ ತಮಗೆ ಸರಿ ಅನಿಸಿದ್ದನ್ನು ಬರೆಸಬಹುದು. ಈ ಹಿಂದೆ ಸಮೀಕ್ಷೆ ನಡೆದಾಗ ಮತಾಂತರವಾಗಿರುವವರು ತಮ್ಮ ಹೊಸ ಧರ್ಮದ ಜೊತೆಗೆ ಜಾತಿಯ ಹೆಸರನ್ನು ಬರೆಸಿದ್ದರು. ಮೊದಲಿನ ಸಮೀಕ್ಷೆಯ ಲೋಪಗಳನ್ನು ಗುರುತಿಸಿ, ಈಗ ಸರಿಪಡಿಸಲಾಗಿದೆ ಎಂದರು.

ಸಮೀಕ್ಷೆಯನ್ನು ವೈಜ್ಞಾನಿಕ ರೀತಿಯಲ್ಲಿ ನಡೆಸಲಾಗುವುದು. ಶಿಕ್ಷಕರು ಈ ಬಾರಿ ಯಾವುದೇ ಲೋಪ ಮಾಡದೆ ಸಮೀಕ್ಷೆ ನಡೆಸಲಿದ್ದಾರೆ. ಸಮೀಕ್ಷೆ ಮಾಡದೇ ಲೋಪವೆಸಗಿದರೆ ಅಂತಹವರ ವಿರುದ್ದ ಕ್ರಮ ಜರುಗಿಸಲಾಗುತ್ತದೆ. ಸಾರ್ವಜನಿಕರು ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕು. ತುಳಿತಕ್ಕೊಳಗಾದ ಜನರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ಈ ಸಮೀಕ್ಷೆ ಅನುಕೂಲವಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X