Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವರಿಷ್ಠರ ಮುಂದೆ ವಿಜಯೇಂದ್ರ ನನ್ನ ಹೆಸರು...

ವರಿಷ್ಠರ ಮುಂದೆ ವಿಜಯೇಂದ್ರ ನನ್ನ ಹೆಸರು ಉಲ್ಲೇಖಿಸಿಲ್ಲ ಎಂದು ತಿಳಿದು ಆಘಾತವಾಯಿತು: ಡಿ.ವಿ.ಸದಾನಂದಗೌಡ

"ಒಬ್ಬ ರಾಜ್ಯಾಧ್ಯಕ್ಷ ಕೋರ್ ಕಮಿಟಿ ಅಭಿಪ್ರಾಯ, ವರದಿಯಲ್ಲಿ ವ್ಯಕ್ತವಾಗಿರುವ ಅಂಶವನ್ನು ಹೈಕಮಾಂಡ್ ಮುಂದೆ ಹೇಳಬೇಕಿತ್ತು"

ವಾರ್ತಾಭಾರತಿವಾರ್ತಾಭಾರತಿ14 March 2024 8:11 PM IST
share
ವರಿಷ್ಠರ ಮುಂದೆ ವಿಜಯೇಂದ್ರ ನನ್ನ ಹೆಸರು ಉಲ್ಲೇಖಿಸಿಲ್ಲ ಎಂದು ತಿಳಿದು ಆಘಾತವಾಯಿತು: ಡಿ.ವಿ.ಸದಾನಂದಗೌಡ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನನ್ನ ಹೆಸರನ್ನು ಉಲ್ಲೇಖಿಸಲಿಲ್ಲ ಎಂಬ ಮತು ಕೇಳಿ ನನಗೆ ಆಘಾತವಾಯಿತು ಎಂದು ಸಂಸದ ಡಿ.ವಿ.ಸದಾನಂದಗೌಡ ಹೇಳಿದರು.

ಗುರುವಾರ ನಗರದಲ್ಲಿ ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿದ ಅವರು, ‘ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರೇ ನಿಮ್ಮ ಹೆಸರು ಉಲ್ಲೇಖ ಮಾಡಿಲ್ಲ, ವಿವೇಕ್ ರೆಡ್ಡಿ ಹೆಸರು ಉಲ್ಲೇಖ ಮಾಡಿದ್ದಾರೆ’ ಎಂದು ನಮ್ಮ ರಾಜ್ಯದ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನನಗೆ ತಿಳಿಸಿದರು ಎಂದರು.

ಒಬ್ಬ ರಾಜ್ಯದ ಅಧ್ಯಕ್ಷ, ಕೋರ್ ಕಮಿಟಿ ಅಭಿಪ್ರಾಯ ಹಾಗೂ ವರದಿಯಲ್ಲಿ ವ್ಯಕ್ತವಾಗಿರುವ ಅಂಶವನ್ನು ಹೈಕಮಾಂಡ್ ಮುಂದೆ ಹೇಳಬೇಕಿತ್ತು. ವಿವೇಕ್ ರೆಡ್ಡಿ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲೆ ಇರಲಿಲ್ಲ. ಅವರು(ವಿಜಯೇಂದ್ರ) ಸತ್ಯ ಸಂಗತಿ ಹೇಳುವ ಪ್ರಯತ್ನ ಮಾಡದೆ ಇರುವುದು ನೋವು ತಂದಿದೆ ಎಂದು ಸದಾನಂದಗೌಡ ಹೇಳಿದರು.

ಈಗ ಪ್ರಕಟವಾಗಿರುವ ಪಟ್ಟಿಯಲ್ಲಿ ಅವರ ಸಮುದಾಯ(ವೀರಶೈವ-ಲಿಂಗಾಯತ)ಕ್ಕೆ ಸಾಕಷ್ಟು ಸ್ಥಾನಗಳನ್ನು ಕೊಟ್ಟಿದ್ದಾರೆ. ಬೆಳಗಾವಿ ಕ್ಷೇತ್ರವನ್ನು ಅವರದೆ ಸಮುದಾಯಕ್ಕೆ ನೀಡಲು ಪ್ರಯತ್ನಿಸುತ್ತಿದ್ದಾರೆ. ಕೇವಲ ಒಬ್ಬ ಸ್ಥಾನ ಮಾತ್ರ ಒಕ್ಕಲಿಗರಿಗೆ ನೀಡಿದ್ದಾರೆ. ಉಳಿದಿರುವ ಚಿಕ್ಕಬಳ್ಳಾಪುರ ಒಂದು ಕೊಡಬಹುದೇನೋ? ಒಕ್ಕಲಿಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ನವರು ಬೇರೆ ಬೇರೆ ಸಮುದಾಯಗಳಿಗೆ ಗೌರವ ಕೊಟ್ಟು ಕೆಲಸ ಮಾಡುತ್ತಿದ್ದಾರೆ. ನಮ್ಮಲ್ಲಿ ಅದರ ಕೊರತೆಯಿದೆ. ನನ್ನ ಅಧ್ಯಕ್ಷರಿಗೆ ನನ್ನ ಮೌಲ್ಯಮಾಪನ ಮಾಡಲು ಆಗುವುದಿಲ್ಲ. ನನ್ನ ಮೌಲ್ಯ ಮಾಪನ ಮಾಡಬೇಕಿರುವುದು ನನ್ನ ಕ್ಷೇತ್ರದ ಕಾರ್ಯಕರ್ತರು, ಅವರೆಲ್ಲರೂ ನನ್ನ ಪರವಾಗಿದ್ದಾರೆ ಎಂದು ಸದಾನಂದಗೌಡ ಹೇಳಿದರು.

ನಮ್ಮಲ್ಲಿ ಆಂತರಿಕವಾಗಿ ಎರಡು ವಿಭಾಗಗಳು ಇದ್ದರೂ ನನ್ನ ಕೆಲಸ, ವ್ಯಕ್ತಿತ್ವ, ರಾಜಕೀಯದ ಬಗ್ಗೆ ಯಾರು ಪ್ರಶ್ನೆ ಮಾಡುವ ಹಾಗಿಲ್ಲ. ಯಾರಿಂದಲೂ ಪ್ರಮಾಣಪತ್ರ ಪಡೆಯುವ ಅಗತ್ಯವಿಲ್ಲ. ವರಿಷ್ಠರ ಬಳಿ ನಾನು ಯಾವತ್ತು ಭಿಕ್ಷೆ ಬೇಡಿಲ್ಲ, ಅವರ ಹಿಂದೆ ಓಡಾಡಿಲ್ಲ, ಗುಂಪುಗಾರಿಕೆ ಮಾಡಿಲ್ಲ, ಅವರ ಚೇಲಾಗಿರಿ ಮಾಡುವ ಕೆಲಸ ಕಾರ್ಯ ಈವರೆಗೆ ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದು ಅವರು ತಿಳಿಸಿದರು.

ಶೋಭಾ ಕರಂದ್ಲಾಜೆ ನಮ್ಮ ಪಕ್ಷದಿಂದ ಅಧಿಕೃತ ಅಭ್ಯರ್ಥಿ. ಅವರ ವಿರುದ್ಧ ಗೋ ಬ್ಯಾಕ್ ಎಂದು ಪ್ರತಿಭಟನೆ ಮಾಡುವುದನ್ನು ನಾನು ವಿರೋಧಿಸುತ್ತೇನೆ. ನಾವು ಹಾಗೂ ನಮ್ಮ ಕಾರ್ಯಕರ್ತರು ಪಕ್ಷದ ಸೂಚನೆಯಂತೆ ಕೆಲಸ ಮಾಡುತ್ತೇವೆ ಎಂದು ಡಿ.ವಿ.ಸದಾನಂದಗೌಡ ಹೇಳಿದರು.

Tags

DV Sadanand Gowdaಡಿ.ವಿ.ಸದಾನಂದಗೌಡ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X