Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. SIR | 43.81ಲಕ್ಷ ಮತದಾರರಿಗೆ ನೋಟಿಸ್...

SIR | 43.81ಲಕ್ಷ ಮತದಾರರಿಗೆ ನೋಟಿಸ್ ಪ್ರಕ್ರಿಯೆ ಆರಂಭ

ವಿಶೇಷ ನೋಂದಣಿ ಅಭಿಯಾನ: ಮತಗಟ್ಟೆಗಳಲ್ಲಿ ಬಿಎಲ್‍ಒಗಳು ಕಡ್ಡಾಯ ಹಾಜರಿ

ವಾರ್ತಾಭಾರತಿವಾರ್ತಾಭಾರತಿ28 Aug 2026 8:50 PM IST
share
SIR | 43.81ಲಕ್ಷ ಮತದಾರರಿಗೆ ನೋಟಿಸ್ ಪ್ರಕ್ರಿಯೆ ಆರಂಭ

ಬೆಂಗಳೂರು : ರಾಜ್ಯದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯಲ್ಲಿ ಒಟ್ಟು 43,81,006 ಮತದಾರರಿಗೆ ನೋಟಿಸ್ ನೀಡಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ನೋಟಿಸ್‍ಗಳ ಸೃಷ್ಟಿ ಪ್ರಕ್ರಿಯೆ ಆ.28ರಿಂದ ಆರಂಭವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

ಶುಕ್ರವಾರ ಈ ಸಂಬಂಧ ಆಯೋಗವು ಪ್ರಕಟಣೆ ಬಿಡುಗಡೆ ಮಾಡಿದ್ದು, ಆ.28ರ ವೇಳೆಗೆ ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಒಟ್ಟು 4,46,35,948 ಮತದಾರರಿದ್ದಾರೆ. ಈ ಪೈಕಿ 2,21,59,229 ಪುರುಷರು, 2,24,73,848 ಮಹಿಳೆಯರು ಹಾಗೂ 2,871 ತೃತೀಯಲಿಂಗಿ ಮತದಾರರು. ಒಟ್ಟು ಮತದಾರರ ಪೈಕಿ ಸುಮಾರು 9.82ರಷ್ಟು ಮಂದಿಗೆ ನೋಟಿಸ್ ನೀಡಲಾಗುತ್ತಿದೆ. ನೋಟಿಸ್‍ಗಳ ಸೃಷ್ಟಿ ಆ.28 ರಿಂದಲೇ ಆರಂಭವಾಗಿದ್ದು, ಅದರ ವಿವರವಾದ ಅಂಕಿಅಂಶಗಳನ್ನು ನಂತರ ನೀಡಲಾಗುವುದು ಎಂದು ಹೇಳಿದೆ.

ನೋಟಿಸ್ ಹಂತದ ಕಾರ್ಯಕ್ಕಾಗಿ ರಾಜ್ಯದಲ್ಲಿ ಒಟ್ಟು 4,262 ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು (ಎಇಆರ್‌ ಒ)ಗಳು ಹಾಗೂ ಹೆಚ್ಚುವರಿ ಎಇಆರ್‌ ಒಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚುವರಿ ಎಇಆರ್‌ ಒಗಳ ನೇಮಕಕ್ಕೆ ಸಂಬಂಧಿಸಿದಂತೆ ಆ.27ರಂದು ಗೆಜೆಟ್ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಜನಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 13(ಸಿ)(1)ರ ಅನ್ವಯ ಸರಕಾರದ ಅಧಿಕಾರಿಗಳನ್ನು ಹೆಚ್ಚುವರಿ ಎಇಆರ್‌ ಒ ಗಳಾಗಿ ನೇಮಕ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ವಿಶೇಷ ನೋಂದಣಿ ಅಭಿಯಾನ: ಎಸ್‍ಐಆರ್ ಭಾಗವಾಗಿ ಮತದಾರರ ನೋಂದಣಿ, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ನಾಲ್ಕು ದಿನಗಳ ವಿಶೇಷ ಅಭಿಯಾನ ನಡೆಸುವಂತೆ ಚುನಾವಣಾ ಆಯೋಗ ಸೂಚಿಸಿದೆ. ಚುನಾವಣಾಧಿಕಾರಿ ಕಚೇರಿ ಹೊರಡಿಸಿರುವ ಆದೇಶದ ಪ್ರಕಾರ, ಆ.29 (ಶನಿವಾರ), ಆ.30(ರವಿವಾರ), ಸೆ.19(ಶನಿವಾರ) ಹಾಗೂ ಸೆ.20(ರವಿವಾರ) ವಿಶೇಷ ಅಭಿಯಾನ ನಡೆಯಲಿದೆ. ಈ ಕುರಿತು ಚುನಾವಣಾ ಆಯೋಗ ಈಗಾಗಲೇ ಅನುಮೋದನೆ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವಿಶೇಷ ಅಭಿಯಾನದ ನಾಲ್ಕೂ ದಿನಗಳಲ್ಲಿ ಬಿಎಲ್‍ಒಗಳು ಮತಗಟ್ಟೆಗಳಲ್ಲಿ ಹಾಜರಿರಬೇಕು. ಮತದಾರರು ತಮ್ಮ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿಕೊಳ್ಳಲು ಬಿಎಲ್‍ಒಗಳು ನೆರವು ನೀಡಬೇಕು. ಅಲ್ಲದೆ, ನಮೂನೆ-6, ನಮೂನೆ-6ಎ, ನಮೂನೆ-7 ಮತ್ತು ನಮೂನೆ-8 ಅರ್ಜಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಮತದಾರರಿಂದ ಸಲ್ಲಿಕೆಯಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಿ, ಅವುಗಳನ್ನು ಬಿಎಲ್‍ಒ ಆಪ್‍ನಲ್ಲಿ ಡಿಜಿಟಲೀಕರಣಗೊಳಿಸಬೇಕು ಎಂದು ಆದೇಶಿಸಲಾಗಿದೆ.

ವಿಶೇಷ ಅಭಿಯಾನದ ದಿನದಂದು ಸ್ವೀಕರಿಸಿದ ಅರ್ಜಿಗಳ ಸಂಖ್ಯೆಯ ಕುರಿತು ಅಂದು ಸಂಜೆ 5:30ರೊಳಗೆ ವರದಿ ಸಲ್ಲಿಸುವಂತೆಯೂ ಬಿಎಲ್‍ಒಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನದ ದಿನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ವ್ಯಾಪಕ ಮತದಾರರ ಜಾಗೃತಿ ಚಟುವಟಿಕೆಗಳನ್ನು ನಡೆಸಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Tags

SIRvoters
share
ವಾರ್ತಾಭಾರತಿ
ವಾರ್ತಾಭಾರತಿ
Next Story
X