ಸಿಎಂ ಸಿದ್ದರಾಮಯ್ಯಗೆ ʼಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿʼ ಸಲ್ಲಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ಬುಧವಾರ ವಿಧಾನಸೌಧದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಸಮಾಜ ಕಲ್ಯಾಣ ಇಲಾಖೆ ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರಾಘವೇಂದ್ರ ಹಿಟ್ನಾಳ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ದಯಾನಂದ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Next Story




