Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ...

ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ವಾರ್ತಾಭಾರತಿವಾರ್ತಾಭಾರತಿ12 Jan 2026 7:54 PM IST
share
ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ಸಾಮಾಜಿಕ ಬಹಿಷ್ಕಾರ ವಿಧಿಸುವ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

ಬೆಂಗಳೂರು : ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲ್ಪಟ್ಟ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025’ಕ್ಕೆ ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸೋಮವಾರದಂದು ರಾಜ್ಯ ಸರಕಾರವು ರಾಜ್ಯಪತ್ರ ಹೊರಡಿಸಿದೆ.

ಈ ಕಾನೂನಿನ ಅನ್ವಯ ಸಾಮಾಜಿಕ ಬಹಿಷ್ಕಾರ ವಿಧಿಸುವುದಕ್ಕಾಗಿ ಸಭೆ ಸೇರುವುದು ನಿಷೇಧವಾಗಿದೆ. ಒಂದು ವೇಳೆ ಸಾಮಾಜಿಕ ಬಹಿಷ್ಕಾರವನ್ನು ವಿಧಿಸುವ ವಿಷಯದ ಮೇಲೆ ಸಂಘಟಿಸಿರುವ ಸಭೆಯಲ್ಲಿ ಭಾಗವಹಿಸಿರುವ ಪ್ರತಿ ಸದಸ್ಯನು ಒಂದು ಲಕ್ಷ ರೂಪಾಯಿಗಳಿಗೆ ದಂಡವನ್ನು ಪಾವತಿ ಮಾಡಬೇಕು. ಅಲ್ಲದೆ, ಈ ಅಪರಾಧ ಮಾಡಲು ನೆರವು ಅಥವಾ ಪ್ರೇರಣೆ ನೀಡಿದ ವ್ಯಕ್ತಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂ.ಗಳ ದಂಡ ಅಥವಾ ಇವೆರಡನ್ನು ವಿಧಿಸಬಹುದಾಗಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಸಾಮಾಜಿಕ ಬಹಿಷ್ಕಾರದ ಅಮಾನವೀಯ ಪದ್ಧತಿಯು ಇನ್ನೂ ಜೀವಾಂತವಾಗಿದೆ. ಈ ಪಿಡುಗನ್ನು ಸಂಪೂರ್ಣವಾಗಿ ತೆಗೆದುಹಾಕುವಲ್ಲಿ ಈಗಾಗಲೇ ಇರುವ ಕಾನೂನುಗಳು ಪರಿಣಾಮಕಾರಿಯಲ್ಲ ಎಂದು ಸಾಬೀತಾಗಿದೆ. ಹೀಗಾಗಿ ಕಾನೂನನನ್ನು ತರಲಾಗಿದೆ ಎಂದು ಸರಕಾರವು ರಾಜ್ಯಪತ್ರದಲ್ಲಿ ಹೇಳಿದೆ.

ನೈತಿಕತೆ, ಸಾಮಾಜಿಕ ಸ್ವೀಕಾರ, ರಾಜಕೀಯ ಒಲವು, ಲಿಂಗತ್ವ ಅಥವಾ ಯಾವುದೇ ಇತರ ಆಧಾರದ ಮೇಲೆ ಸಮುದಾಯದ ಸದಸ್ಯರ ನಡುವೆ ತಾರತಮ್ಯವನ್ನು ಉಂಟುಮಾಡುವುದು, ಸಮಾಜದಿಂದ ದೂರವಿರಿಸುವುದು ಅಥವಾ ತಿರಸ್ಕರಿಸುವುದು ಅಥವಾ ಸಾಮಾಜಿಕ ಅಥವಾ ವ್ಯಾವಹಾರಿಕ ಬಂಧಗಳನ್ನು ಕಡಿಯುವುದು ಸಾಮಾಜಿಕ ಬಹಿಷ್ಕಾರವಾಗಿರುತ್ತದೆ.

ಸಾಮಾಜಿಕ ಬಹಿಷ್ಕಾರದ ಸಂತ್ರಸ್ತರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 3(5), 61(1), 61(2), 190, 196, 308(1) ರಿಂದ (6) ಮತ್ತು 62ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು. ದೂರನ್ನು ಸ್ವೀಕರಿಸಿದ ಮೇಲೆ, ಇನ್ಸ್ ಪೆಕ್ಟರ್ ದರ್ಜೆಗಿಂತ ಕಡಿಮೆಯಲ್ಲದ ಪೊಲೀಸ್ ಅಧಿಕಾರಿಯು ಸ್ವಪ್ರೇರಿತ ಕ್ರಮವನ್ನು ಕೈಗೊಳ್ಳಬಹುದು ಎಂದು ಈ ಕಾನೂನಿನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತನಿಗೆ ಪರಿಹಾರ: ನ್ಯಾಯಾಲಯವು, ತೀರ್ಪನ್ನು ಹೊರಡಿಸುವಾಗ, ವಸೂಲಾದ ದಂಡದ ಪೂರ್ಣ ಅಥವಾ ಭಾಗವನ್ನು ಸಂತ್ರಸ್ತ ಅಥವಾ ಆತನ ಕುಟುಂಬಕ್ಕೆ ಪರಿಹಾರವಾಗಿ ನೀಡಲು ಆದೇಶಿಸಬಹುದು ಎಂದು ತಿಳಿಸಿದೆ.

ಕಾಯ್ದೆಯಲ್ಲಿ ಉಲ್ಲೇಖಿಸಲಾದ ಸಾಮಾಜಿಕ ಬಹಿಷ್ಕಾರದ ವ್ಯಾಖ್ಯಾನ :

1.ಇನ್ನೊಬ್ಬ ವ್ಯಕ್ತಿಯೊಂದಿಗೆ ವ್ಯವಹರಿಸಲು, ಬಾಡಿಗೆಗಾಗಿ ಕೆಲಸ ನಿರ್ವಹಿಸಲು ಅಥವಾ ವ್ಯಾಪಾರ ಮಾಡಲು ಮತ್ತು ಸೇವೆ ನಿರಾಕರಿಸುವುದು ಸಾಮಾಜಿಕ ಬಹಿಷ್ಕಾರವಾಗಿದೆ.

2.ಯಾವುದೇ ಸಾಮಾಜಿಕ, ಧಾರ್ಮಿಕ ಅಥವಾ ಸಾಮುದಾಯಿಕ ಕಾರ್ಯಕ್ರಮಗಳು, ಸಮಾರಂಭ, ಸಮಾವೇಶ, ಸಭೆ ಅಥವಾ ಮೆರವಣಿಗೆಗಳಲ್ಲಿ ಪಾಲ್ಗೊಳ್ಳದಂತೆ ತಡೆಯುವುದು.

3.ಸಹಜವಾಗಿ ನೆರವೇರಿಸುವ ಮದುವೆ, ಶವಸಂಸ್ಕಾರ ಅಥವಾ ಇತರ ಧಾರ್ಮಿಕ ಸಮಾರಂಭಗಳು ಮತ್ತು ಪದ್ಧತಿಗಳನ್ನು ನಿರ್ವಹಿಸಲು ನಿರಾಕರಿಸುವುದು.

4.ಧರ್ಮಾದಾಯ ದತ್ತಿ, ಧಾರ್ಮಿಕ ಅಥವಾ ಸಾರ್ವಜನಿಕ ಸ್ಥಳಕ್ಕೆ ಪ್ರವೇಶಿಸುವುದನ್ನು ತಡೆಯುವುದು.

5.ಯಾವುದೇ ಶಾಲೆ, ಶೈಕ್ಷಣಿಕ ಸಂಸ್ಥೆ, ವೈದ್ಯಕೀಯ ಸಂಸ್ಥೆ, ಸಮುದಾಯ ಸಭಾಂಗಣ, ಕ್ಲಬ್ ಹಾಲ್, ಸ್ಮಶಾನ, ಸಮಾಧಿ ಸ್ಥಳ ಅಥವಾ ಆತನ ಸಮುದಾಯವು ಬಳಸುವ ಅಥವಾ ಬಳಸಲು ಉದ್ದೇಶಿಸಿರುವ ಯಾವುದೇ ಇತರ ಸ್ಥಳ ಅಥವಾ ಯಾವುದೇ ಇತರ ಸಾರ್ವಜನಿಕ ಸ್ಥಳದ ಸೌಲಭ್ಯ ಒದಗಿಸುವುದನ್ನು ಅಥವಾ ಬಳಸುವುದನ್ನು ತಡೆಯುವುದು.

Tags

Social Boycott Prohibition BillGovernor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X