Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ, ಕಸ್ತೂರಿ ರಂಗನ್ ವರದಿ ಕುರಿತು...

ಬರ, ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ: ನಾಳೆಯಿಂದ(ಸೆ.21) ವಿಶೇಷ ಅಧಿವೇಶನ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ20 Sept 2026 9:35 PM IST
share
ಬರ, ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ: ನಾಳೆಯಿಂದ(ಸೆ.21) ವಿಶೇಷ ಅಧಿವೇಶನ ಪ್ರಾರಂಭ

ಬೆಂಗಳೂರು : ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ, ರೈತರ ಜ್ವಲಂತ ಸಮಸ್ಯೆಗಳು ಹಾಗೂ ಪಶ್ಚಿಮಘಟ್ಟ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹೊರಡಿಸಿರುವ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಕುರಿತು ಚರ್ಚೆ ನಡೆಸಲು ವಿಧಾನ ಮಂಡಲ ಉಭಯ ಸದನಗಳ ಮೂರು ದಿನಗಳ ವಿಶೇಷ ಅಧಿವೇಶನ ಸೋಮವಾರದಿಂದ(ಸೆ.21) ಪ್ರಾರಂಭವಾಗಲಿದೆ.

ಸೋಮವಾರ ಬೆಳಗ್ಗೆ 11 ಗಂಟೆಗೆ ಉಭಯ ಸದನಗಳ ಕಾರ್ಯ ಕಲಾಪ ಅಧಿಕೃತವಾಗಿ ಆರಂಭವಾಗಲಿದೆ. ಆದರೆ, ಈ ಹಿಂದೆ ನಡೆದ ಅಧಿವೇಶನದ ರಾಜಕೀಯ ಗದ್ದಲ ಹಾಗೂ ರಾಜ್ಯದ ಪ್ರಸ್ತುತ ವಾಸ್ತವಿಕ ಸ್ಥಿತಿಗತಿಗಳ ಹಿನ್ನೆಲೆಯಲ್ಲಿ ಈ ವಿಶೇಷ ಅಧಿವೇಶನ ಅತ್ಯಂತ ಮಹತ್ವ ಪಡೆದುಕೊಂಡಿದೆ. ಸಾಮಾನ್ಯ ಅಧಿವೇಶನಕ್ಕಿಂತ ವಿಭಿನ್ನವಾಗಿ ಈ ವಿಶೇಷ ಅಧಿವೇಶನದಲ್ಲಿ ರಾಜ್ಯದ ಎರಡು ಪ್ರಮುಖ ಸವಾಲುಗಳಾದ ಬರ ಪರಿಸ್ಥಿತಿ ಮತ್ತು ಕಸ್ತೂರಿರಂಗನ್ ವರದಿ ಕೇಂದ್ರ ಬಿಂದುವಾಗುವ ನಿರೀಕ್ಷೆಯಿದೆ.

ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ತಂಡ ನೀಡಿದ ವರದಿಯನ್ನಾಧರಿಸಿ ಕೇಂದ್ರ ಸರಕಾರ ಹೊರಡಿಸಿರುವ ಕರಡು ಅಧಿಸೂಚನೆಯಿಂದ ಮಲೆನಾಡು ಹಾಗೂ ಕರಾವಳಿ ಭಾಗದ ಜನರಲ್ಲಿ ಆತಂಕ ವ್ಯಕ್ತವಾಗಿದೆ. ವರದಿಯ ಸಾಧಕ-ಬಾಧಕಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ, ರಾಜ್ಯದ ಸ್ಪಷ್ಟ ನಿಲುವನ್ನು ನಿರ್ಣಯದ ಮೂಲಕ ಕೇಂದ್ರಕ್ಕೆ ತಲುಪಿಸುವುದು ಈ ಅಧಿವೇಶನದ ಮುಖ್ಯ ಉದ್ದೇಶವಾಗಿದೆ.

ಇನ್ನೊಂದೆಡೆ, ಮುಂಗಾರು ಅಭಾವದಿಂದಾಗಿ ರಾಜ್ಯದ ವಿವಿಧೆಡೆ ಬೆಳೆಗಳು ಒಣಗುತ್ತಿದ್ದು, ಕುಡಿಯುವ ನೀರು, ಜಾನುವಾರುಗಳ ಮೇವು ಹಾಗೂ ವಿದ್ಯುತ್ ಅಭಾವ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕೃಷಿ ವಲಯ ಎದುರಿಸುತ್ತಿರುವ ಈ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಸದನದಲ್ಲಿ ಚರ್ಚೆ ನಡೆಯಲಿದೆ.

ವಿಶೇಷ ಅಧಿವೇಶನದಲ್ಲಿ ಬೆಳೆ ನಷ್ಟಕ್ಕೆ ಪರಿಹಾರ, ಸಾಲದ ಒತ್ತಡ, ಜಾನುವಾರುಗಳಿಗೆ ಮೇವು, ಕುಡಿಯುವ ನೀರು, ವಿದ್ಯುತ್ ಪೂರೈಕೆ, ಕೇಂದ್ರದಿಂದ ಬರಬೇಕಿರುವ ಬರ ಪರಿಹಾರ ಸೇರಿದಂತೆ ರೈತರ ಬದುಕಿಗೆ ನೇರವಾಗಿ ಸಂಬಂಧಿಸಿದ ಹಲವು ವಿಚಾರಗಳು ಪ್ರಸ್ತಾಪವಾಗುವ ಸಾಧ್ಯತೆಯಿದೆ.

ಜು.20ರಿಂದ ಆ.13ರ ವರೆಗೆ ಮಳೆಗಾಲದ ಅಧಿವೇಶನ ನಡೆದಿತ್ತು. ಆದರೆ ಪ್ರತಿಪಕ್ಷಗಳು ಸಚಿವರಾಗಿದ್ದ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಧರಣಿ ನಡೆಸಿದ್ದರಿಂದ ಬರಗಾಲ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆ, ರೈತರ ಸಮಸ್ಯೆ ಸೇರಿ ಯಾವುದೇ ವಿಚಾರಗಳೂ ಆಗ ಚರ್ಚೆಯಾಗಿರಲಿಲ್ಲ. ಇದರ ನಡುವೆ ಕಸ್ತೂರಿರಂಗನ್ ಸಮಿತಿ ವರದಿ ಆಧರಿಸಿ ಪಶ್ಚಿಮಘಟ್ಟ ಪ್ರದೇಶದ 20,668 ಚ.ಕಿಮೀ. ಪ್ರದೇಶದಲ್ಲಿನ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ಕೇಂದ್ರ ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ ಆ ಭಾಗದ ಜನರ ಬದುಕು ಅತಂತ್ರವಾಗಲಿದ್ದು, ಈ ಬಗ್ಗೆ ಸದನದಲ್ಲಿ ಚರ್ಚಿಸಿ ಕೇಂದ್ರಕ್ಕೆ ಅಧಿಸೂಚನೆ ವಿರುದ್ಧ ನಿರ್ಣಯ ಮಂಡಿಸಿ ಕಳುಹಿಸಲು ಸರಕಾರ ತೀರ್ಮಾನಿಸಿದೆ.

ಅಧಿವೇಶನದಲ್ಲಿ ನಿರ್ಣಯ ಮಂಡನೆ?: ವಿಶೇಷ ಅಧಿವೇಶನದಲ್ಲಿ ಡಾ.ಕೆ.ಕಸ್ತೂರಿ ರಂಗನ್ ವರದಿ ಕರಡು ಬಗ್ಗೆ ಚರ್ಚಿಸಿ, ಅಧಿಸೂಚನೆ ವಿರುದ್ಧ ನಿರ್ಣಯ ಮಂಡಿಸಲು ಸರಕಾರ ಮುಂದಾಗಿದೆ ಎಂದು ಗೊತ್ತಾಗಿದೆ.

Tags

Special Session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X