Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೃಂಗೇರಿ ಮರು ಮತ ಎಣಿಕೆ ಗೊಂದಲ |...

ಶೃಂಗೇರಿ ಮರು ಮತ ಎಣಿಕೆ ಗೊಂದಲ | ಮುಂದುವರಿದ ಆಣೆ ಪ್ರಮಾಣ; ಕಾಂಗ್ರೆಸ್‌ ಅಭ್ಯರ್ಥಿ ರಾಜೇಗೌಡ, ಚುನಾವಣಾ ಏಜೆಂಟ್ ಸುಧೀರ್ ಕುಮಾರ್‌ರಿಂದ ದೇವಾಲಯದಲ್ಲಿ ಪ್ರಮಾಣ

ವಾರ್ತಾಭಾರತಿವಾರ್ತಾಭಾರತಿ9 May 2026 1:06 PM IST
share
ಶೃಂಗೇರಿ ಮರು ಮತ ಎಣಿಕೆ ಗೊಂದಲ | ಮುಂದುವರಿದ ಆಣೆ ಪ್ರಮಾಣ; ಕಾಂಗ್ರೆಸ್‌ ಅಭ್ಯರ್ಥಿ ರಾಜೇಗೌಡ, ಚುನಾವಣಾ ಏಜೆಂಟ್ ಸುಧೀರ್ ಕುಮಾರ್‌ರಿಂದ ದೇವಾಲಯದಲ್ಲಿ ಪ್ರಮಾಣ

ಚಿಕ್ಕಮಗಳೂರು, ಮೇ 9 : 2023ರಲ್ಲಿ ನಡೆದ ಶೃಂಗೇರಿ ವಿಧಾನಸಭೆ ಕ್ಷೇತ್ರದ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಶಾಸಕರಾಗಿ ಆಯ್ಕೆಯಾದ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಜಿಲ್ಲಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಮರು ಮತ ಎಣಿಕೆ ಫಲಿತಾಂಶದ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಆಯೋಗ ಹಾಗೂ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಈ ಮಧ್ಯೆ ಶೃಂಗೇರಿ ಕ್ಷೇತ್ರದಲ್ಲಿ ಮತ ಎಣಿಕೆ ಸಂದರ್ಭ ಏಜೆಂಟ್‍ಗಳಾಗಿದ್ದವರು ದೇವಾಲಯದ ಮುಂದೆ ಆಣೆ ಪ್ರಮಾಣ ಮಾಡಲು ಮುಂದಾಗಿದ್ದಾರೆ.

ಶುಕ್ರವಾರ ಬಿಜೆಪಿ ಅಭ್ಯರ್ಥಿ ಜೀವರಾಜ್ ಪರ ಚುನಾವಣಾ ಏಜೆಂಟ್‍ಗಳಾಗಿದ್ದ ರಾಮಸ್ವಾಮಿ ಮತ್ತು ಅದ್ದಡ ಸತೀಶ್ ಎಂಬವರು ಕೊಪ್ಪ ಪಟ್ಟಣದ ವೀರಭದ್ರಸ್ವಾಮಿ ದೇವಾಲಯದ ಮುಂದೆ ಪ್ರಮಾಣ ಮಾಡಿ, 2023ರಲ್ಲಿ ಶೃಂಗೇರಿ ವಿಧಾನಸಭೆ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಸಂದರ್ಭ ಮತ ಎಣಿಕೆ ವೇಳೆ ಯಾವುದೇ ಲೋಪವಾಗಿಲ್ಲ, ಎಣಿಕೆ ಪ್ರಕ್ರಿಯೆ ಪಾರರ್ದಕವಾಗಿ ನಡೆದಿದೆ. ನಾವು ಕಾಂಗ್ರೆಸ್ ಅಭ್ಯರ್ಥಿಯಿಂದ ಹಣ ಪಡೆದು ಅಕ್ರಮ ಎಸಗಿದ್ದೇವೆ ಎಂಬ ಆರೋಪ ಕೇಳಿ ಬಂದಿದ್ದು, ಈ ಆರೋಪ ಸುಳ್ಳು, ನಾವು ತಪ್ಪು ಮಾಡಿದ್ದರೇ ದೇವರು ನಮಗೆ ಶಿಕ್ಷೆ ನೀಡಬೇಕು, ತಪ್ಪು ಮಾಡದಿದ್ದಲ್ಲಿ ಆರೋಪ ಮಾಡಿದವರನ್ನು ಆ ದೇವರೇ ನೋಡಿಕೊಳ್ಳಲಿ ಎಂದು ಪ್ರಮಾಣ ಮಾಡಿದ್ದರು.

ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಏಜೆಂಟ್ ಆಗಿದ್ದ ಸುಧೀರ್‌ ಕುಮಾರ್ ಮುರೊಳ್ಳಿ ಇದೇ ವೀರಭದ್ರಸ್ವಾಮಿ ದೇವಾಲಯದ ಮುಂದೆ ಪ್ರಮಾಣ ಮಾಡಿದ್ದು, ನಾನು 2023, ಮೇ 13ರಂದು ನಡೆದ ಮತ ಎಣಿಕೆ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಪರ ಚುನಾವಣಾ ಏಜೆಂಟ್ ಆಗಿದ್ದು, ಈ ವೇಳೆ ಮತ ಎಣಿಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ. ನಾನಲ್ಲದೇ ಬಿಜೆಪಿ, ಜೆಡಿಎಸ್, ಬಿಎಸ್ಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ಚುನಾವಣಾ ಏಜೆಂಟ್‍ಗಳೂ ಕೂಡ ಮತ ಎಣಿಕೆ ಕೇಂದ್ರದಲ್ಲಿದ್ದು, ಪ್ರತೀ ಮತ ಎಣಿಕೆಯನ್ನೂ ಕಣ್ಣಾರೆ ಕಂಡಿದ್ದಾರೆ. ಅಂಚೆ ಮತಗಳ ಎಣಿಕೆ ಸಂದರ್ಭ ತಿರಸ್ಕೃತ ಮತಗಳು ಹಾಗೂ ಜೀವರಾಜ್, ರಾಜೇಗೌಡ ಅವರ ಪರ ಬಂದಿದ್ದ ಸಿಂದು ಮತಗಳನ್ನೂ ವೀಕ್ಷಿಸಿದ್ದಾರೆ. ಮತ ಎಣಿಕೆ ಬಳಿಕ ಎಲ್ಲ ಏಜೆಂಟರು ಮತ ಎಣಿಕೆ ಪಾರದರ್ಶಕವಾಗಿ ನಡೆದಿರುವ ಬಗ್ಗೆ ಸಹಿಯನ್ನೂ ಮಾಡಿದ್ದಾರೆ.

ಆದರೆ ಕಳೆದ ಮೇ 2ರಂದು ನಡೆದ ಮರು ಮತ ಎಣಿಕೆ ವೇಳೆ ರಾಜೇಗೌಡ ಪರ ಬಂದಿದ್ದ ಸಿಂಧು ಮತಗಳು ಅಸಿಂಧು ಆಗಿದ್ದವು, ಸಿಂಧುವಾಗಿದ್ದ 257 ಮತಗಳಿಗೆ ಡಬಲ್ ರೈಟ್ ಮಾರ್ಕ್ ಹಾಕಿ ಅಸಿಂಧುಗೊಳಿಸಲಾಗಿತ್ತು. ಅಲ್ಲದೇ ಮತ ಪತ್ರಗಳಿದ್ದ ಕವರ್‌ ಗಳ ಸೀಲ್‍ಗಳು ಒಡೆದಿದ್ದು, ಇದು ಬಿಜೆಪಿ ಅಭ್ಯರ್ಥಿ ಜೀವರಾಜ್ ಹಾಗೂ ಅವರ ಸಹಚರರು ಮಾಡಿದ ಅಕ್ರಮವಾಗಿದೆ. ಈ ಸಂಬಂಧ ತಾನು ಚಿಕ್ಕಮಗಳೂರು ಪೊಲೀಸರಿಗೆ ದೂರು ನೀಡಿದ್ದೇನೆ. ಪಕ್ಷದಿಂದ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ. ರಾಜೇಗೌಡ ಪರ ಸಿಂಧುವಾಗಿದ್ದ ಅಂಚೆ ಮತಗಳಿಗೆ ಡಬಲ್ ರೈಟ್ ಮಾರ್ಕ್ ಟಿಕ್ ಹಾಕಿ ಅಸಿಂಧುಗೊಳಿಸಲಾಗಿದ್ದು, ಇದು ಜೀವರಾಜ್ ಹಾಗೂ ಅವರ ಸಹಚರರ ಕೃತ್ಯವಾಗಿದೆ ಎಂದು ಅವರು ದೇವರ ಮುಂದೆ ಪ್ರಮಾಣ ಮಾಡಿದ್ದಾರೆ.

ತಪ್ಪು ಮಾಡಿದ್ದರೆ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆಂದು ಪ್ರಮಾಣ ಮಾಡಿದ ರಾಜೇಗೌಡ: 2023ರ ಚುನಾವಣೆ ಫಲಿತಾಂಶದಲ್ಲಿ ತಾನು ಜಯಶೀಲನಾಗಿದ್ದು, ಮರು ಮತ ಎಣಿಕೆ ವೇಳೆ ನನಗೆ ಬಂದಿದ್ದ ಸಿಂಧುವಾಗಿದ್ದ 257 ಮತಗಳನ್ನು ಅಸಿಂಧುಗೊಳಿಸುವ ಮೂಲಕ ನನ್ನನ್ನು ಸೋಲಿಸಲಾಗಿದೆ. ಇದು ಸಂವಿಧಾನದ ಕಗ್ಗೊಲೆಯಾಗಿದೆ. ತನಗೆ ಮರು ಮತ ಎಣಿಕೆ ವೇಳೆ ಅನ್ಯಾಯವಾಗಿದೆ. ಮತ ತಿರುಚಿ ಮೋಸ ಮಾಡಿರುವವರಿಗೆ ಶಿಕ್ಷೆಯಾಗಬೇಕು, ತಲೆ ದಂಡಯಾಗಬೇಕು, ನಾವೇ ತಪ್ಪು ಮಾಡಿದ್ದರೂ ದಂಡನೆಯಾಗಬೇಕು, ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನಿಂದ ತಪ್ಪಾಗಿದ್ದರೆ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಇದೇ ವೇಳೆ ಮಾಜಿ ಶಾಸಕ ಟಿ.ಡಿ.ರಾಜೇಗೌಡ ಪ್ರಮಾಣ ಮಾಡಿದರು.

Tags

Sringeri recount
share
ವಾರ್ತಾಭಾರತಿ
ವಾರ್ತಾಭಾರತಿ
Next Story
X