Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ :...

ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ : ಆರ್‌ಸಿಬಿ, ಕೆಎಸ್‍ಸಿಎ, ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ5 Jun 2025 9:09 PM IST
share
ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ : ಆರ್‌ಸಿಬಿ, ಕೆಎಸ್‍ಸಿಎ, ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೀಯಲ್ ತನಿಖೆಯ ನೇತೃತ್ವ ವಹಿಸಿಕೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‍ಸಿಎ), ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಮತ್ತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ನೋಟಿಸ್ ನೀಡಿ ವಿಚಾರಣೆಗೊಳಪಡಿಸುವುದಾಗಿ ಪ್ರಕಟಿಸಿದ್ದಾರೆ.

ಗುರುವಾರ ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರಕಾರದ ಆದೇಶದಂತೆ 15 ದಿನದೊಳಗೆ ಕೂಲಂಕಷವಾಗಿ ತನಿಖೆ ನಡೆಸಿ ವರದಿ ನೀಡಲು ಸರಕಾರ ಸೂಚನೆ ನೀಡಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಕಾರ್ಯನಿರತರಾಗಿದ್ದೇನೆ. ಕಾಲ್ತುಳಿತ ಉಂಟಾಗಿರುವ ಸ್ಥಳದ ಬಗ್ಗೆ ತಪಾಸಣೆ ನಡೆಸಲಾಗಿದೆ. ಜತೆಗೆ, ಸಿಸಿಟಿವಿ ದೃಶ್ಯಾವಳಿ ಪಡೆದು ಪರಿಶೀಲಿಸಲಾಗುವುದು ಎಂದರು.

ಘಟನೆಗೆ ಸಂಬಂಧಿಸಿದ ವಿಚಾರಣೆಗಾಗಿ ಕೆಎಸ್‍ಸಿಎ ಉನ್ನತ ಅಧಿಕಾರಿಗಳು, ಕ್ರೀಡಾಂಗಣದ ಭದ್ರತೆ ಹೊಣೆ ಹೊತ್ತಿದ್ದ ಡಿಎನ್‍ಎ ಇವೆಂಟ್ ಮ್ಯಾನೇಜ್‍ಮೆಂಟ್, ವಿಜಯೋತ್ಸವ ಆಯೋಜಕರಾಗಿದ್ದ ಆರ್‌ಸಿಬಿ ಫ್ರಾಂಚೈಸಿ ಹಾಗೂ ನಗರದ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಲಾಗುವುದು ಎಂದು ಅವರು ಉಲ್ಲೇಖಿಸಿದರು.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರು ಹಾಗೂ ಗಾಯಾಳುಗಳಿಗೆ ನೋಟಿಸ್ ನೀಡಿ ಅವರಿಂದ ಹೇಳಿಕೆ ಪಡೆಯಲಾಗುವುದು. ಜೂ.13ರ ಬೆಳಗ್ಗೆ 10.30ರಿಂದ 1.30ರ ವರೆಗೆ ಸಾರ್ವಜನಿಕರೂ ಬಂದು ತಮ್ಮ ಬಳಿಯಿರುವ ಸಾಕ್ಷ್ಯಗಳನ್ನು ನೀಡಿ ಹೇಳಿಕೆ ಕೊಡಲು ಅವಕಾಶ ಮಾಡಿಕೊಡಲಾಗುವುದು ಎಂದು ಜಿ. ಜಗದೀಶ್ ಹೇಳಿದರು.

ವಿಜಯೋತ್ಸವದಲ್ಲಿ ಭಾಗಿಯಾಗಲು ನಗರದ ವಿವಿಧ ಮೂಲೆಗಳಿಂದ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳು ಮೆಟ್ರೊ ಮೂಲಕ ಬಂದಿದ್ದರಿಂದ ದಟ್ಟಣೆ ಹೆಚ್ಚಾಗಿತ್ತು. ಕೂಡಲೇ ಸಮನ್ವಯ ಸಾಧಿಸಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಬಹುದಾಗಿತ್ತು. ಈ ಬಗ್ಗೆ ಬಿಎಂಆರ್‍ಸಿಎಲ್ ಅಧಿಕಾರಿಗಳಿಂದಲೂ ಮಾಹಿತಿ ಪಡೆಯಲಾಗುವುದು ಎಂದು ಜಿ.ಜಗದೀಶ್ ತಿಳಿಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿರುವ ಎಲ್ಲ ಪ್ರವೇಶ ದ್ವಾರಗಳಿಗೆ ತೆರಳಿದ ಮ್ಯಾಜಿಸ್ಟೀರಿಯಲ್ ತನಿಖಾಧಿಕಾರಿ ಜಿ.ಜಗದೀಶ್ ಕಬ್ಬನ್ ಪಾರ್ಕ್ ಠಾಣಾ ಪೊಲೀಸರಿಂದ ಮಾಹಿತಿ ಪಡೆದುಕೊಂಡರು. ನೂಕುನುಗ್ಗಲು ವೇಳೆ ಗೇಟ್ ನಂಬರ್ 6ಎ ಬಳಿ ತಂತಿಬೇಲಿ ಮುರಿದಿರುವುದು, ಗೇಟ್ ನಂಬರ್ 8ರ ಬಳಿ ಕಾರಿನ ಗಾಜು ಒಡೆದು ಹಾನಿಯಾಗಿರುವುದನ್ನು ವೀಕ್ಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X