Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಬಜೆಟ್: ವಲಸೆ ಕಾರ್ಮಿಕರಿಗಾಗಿ 10...

ರಾಜ್ಯ ಬಜೆಟ್: ವಲಸೆ ಕಾರ್ಮಿಕರಿಗಾಗಿ 10 ಜಿಲ್ಲೆಗಳಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ16 Feb 2024 11:54 AM IST
share
ರಾಜ್ಯ ಬಜೆಟ್: ವಲಸೆ ಕಾರ್ಮಿಕರಿಗಾಗಿ 10 ಜಿಲ್ಲೆಗಳಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯ ನಿರ್ಮಾಣ

ಬೆಂಗಳೂರು, ಫೆ.16: ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿರುವ 2024-25ನೇ ಸಾಲಿನ ಬಜೆಟ್ ನಲ್ಲಿ ಕಾರ್ಮಿಕರ ಕಲ್ಯಾಣಕ್ಕೆ ಘೋಷಿದ ಯೋಜನೆಗಳು ಇಂತಿವೆ.

• ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗುವುದು.

• ನಮ್ಮ ಸರ್ಕಾರವು ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (Gig Workers) ಬದುಕಿನ ಭದ್ರತೆಗಾಗಿ Platform-Based Gig Workers Fund and Welfare Fee Bill ಎಂಬ ಹೊಸ ವಿಧೇಯಕವನ್ನು ಜಾರಿಗೆ ತರಲಿದೆ. ಆ ಮೂಲಕ ಅರ್ಹ ಆನ್-ಲೈನ್ ವಹಿವಾಟುಗಳ ಮೇಲೆ ಸೆಸ್ ವಿಧಿಸಿ ಗಿಗ್ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು.

• ಪ್ರಸಕ್ತ ಆಶಾದೀಪ ಯೋಜನೆಯಡಿ ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯವನ್ನು ವಿಸ್ತರಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು;

• ಮಾಲಕರಿಗೆ ವರ್ಗಾಯಿಸುವ ಶಿಷ್ಯ ವೇತನದ ಅವಧಿಯನ್ನು ಆರು ತಿಂಗಳಿನಿಂದ ಒಂದು ವರ್ಷಕ್ಕೆ ಹೆಚ್ಚಿಸಲಾಗುವುದು.

• ಅಪ್ರೆಂಟಿಸ್ ತರಬೇತಿ ಪಡೆದವರನ್ನು ಅದೇ ಮಾಲಕರು ಖಾಯಂ ಆಗಿ ನೇಮಕಾತಿ ಮಾಡಿಕೊಂಡಲ್ಲಿ ಮಾಲಕರಿಗೆ ವೇತನ ಮರುಪಾವತಿ ಮಾಡುವ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳ ಅವಧಿಗೆ ಹೆಚ್ಚಿಸಲಾಗುವುದು ಹಾಗೂ ವೇತನದ ಗರಿಷ್ಠ ಮಿತಿಯನ್ನು 6,500 ರಿಂದ 7,000 ರೂ. ಗಳಿಗೆ ಹೆಚ್ಚಿಸಲಾಗುವುದು.

• •ಹೊಸದಾಗಿ ಖಾಯಂ ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳ ಮಾಸಿಕ 6,000 ರೂ.ಗಳ ಗರಿಷ್ಠ ವೇತನವನ್ನು ಎರಡು ವರ್ಷಗಳವರೆಗೆ ಮಾಲಕರಿಗೆ ಮರುಪಾವತಿ ಮಾಡಲಾಗುವುದು.

• ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗುವುದು.

• ವಾಣಿಜ್ಯ ಸಾರಿಗೆ ವಾಹನಗಳ ನೋಂದಣಿಯ ಮೇಲೆ ಸುಂಕವನ್ನು ವಿಧಿಸುವ ಮೂಲಕ ಸಾರಿಗೆ ವಾಹನಗಳ ಕಾರ್ಮಿಕರಿಗೆ ಭದ್ರತಾ ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ರೂಪಿಸಲಾಗುವುದು. ಅಲ್ಲದೇ, ವಾಹನ ಚಾಲಕರಿಗೆ ನಿಲ್ದಾಣ/ಹೆದ್ದಾರಿ ಬದಿಯಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು.

• ಇ.ಎಸ್.ಐ. ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು, Point of Care Mobile Digital Diagnostic Kiosk, Mobile Health Unit, 40 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ಸಮಗ್ರ ಆರೋಗ್ಯ ತಪಾಸಣೆ, ಎಲ್ಲಾ ವಿಮಾದಾರರಿಗೆ Tetanus ಮತ್ತು Hepatitis ಲಸಿಕೆ ಕಾರ್ಯಕ್ರಮ ಹಾಗೂ ಅತ್ಯಾಧುನಿಕ ರೋಗಪತ್ತೆ ಹಚ್ಚುವ ಕೇಂದ್ರ ಸ್ಥಾಪನೆ ಮುಂತಾದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X