Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುಪ್ರೀಂಕೋರ್ಟ್ ಗಮನ ಸೆಳೆಯಲು...

ಸುಪ್ರೀಂಕೋರ್ಟ್ ಗಮನ ಸೆಳೆಯಲು ಬೀದಿಗಿಳಿದು ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ

► ಕಾವೇರಿ ನದಿ ನೀರಿನ ವಿವಾದ

ವಾರ್ತಾಭಾರತಿವಾರ್ತಾಭಾರತಿ26 Sept 2023 5:33 PM IST
share
ಸುಪ್ರೀಂಕೋರ್ಟ್ ಗಮನ ಸೆಳೆಯಲು ಬೀದಿಗಿಳಿದು ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆ.26: ರಾಜ್ಯ ಸರಕಾರದ ಗಮನ ಸೆಳೆಯಲು ಬಿಜೆಪಿ ಸೇರಿದಂತೆ ರೈತರು, ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಆಚರಣೆ ಮಾಡಿದ್ದೇವೆ. ಆದರೆ, ಈ ಸರಕಾರ ಕೇಳುವ ಸ್ಥಿತಿಯಲ್ಲಿ ಇಲ್ಲ. ಜನರ ಆಕ್ರೋಶ ಸುಪ್ರೀಂಕೋರ್ಟ್ ಗೆ ತಲುಪಿಸಲು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಕಡಿಮೆ ನೀರು ಹರಿಸುವಂತೆ ಮಾಡಿಸಿದ್ದೇವೆ ಎನ್ನಲು ಇದೇನು ಬಟ್ಟೆ ವ್ಯಾಪಾರವೆ? ಇದು ಕಾವೇರಿ ನೀರಿನ ಸಮಸ್ಯೆ, ಇದು ಗಂಭೀರವಾದ ವಿಚಾರ ಎಂದರು.

ಇಂಡಿಯಾ ಮೈತ್ರಿಕೂಟದ ಡಿಎಂಕೆ ಹಿತ ಕಾಯಲು ರಾಜ್ಯ ಸರಕಾರ ರಾಜ್ಯದ ಹಿತ ಬಲಿಕೊಡುತ್ತಿದ್ದು, ಕಾವೇರಿ ಸಮಸ್ಯೆ ಪರಿಹಾರಕ್ಕೆ ಮಾತುಕತೆಗೆ ತಮಿಳುನಾಡಿನ ಸರಕಾರದ ಮನವೊಲಿಸಲಿ. ಬೆಂಗಳೂರು ಬಂದ್ ಹಾಗೂ ಕಾವೆರಿ ಜಲಾನಯನ ಪ್ರದೇಶದಲ್ಲಿ ಪ್ರತಿಭಟನೆ ಯಶಸ್ವಿಯಾಗಿದೆ. ಜನರ ಆಕ್ರೋಶ ಕಟ್ಟೆ ಒಡೆದಿದೆ. ಇಷ್ಟೆಲ್ಲ ಆದರೂ ಸರಕಾರ ಎಚ್ಚೆತ್ತುಕೊಂಡತೆ ಕಾಣಿಸುತ್ತಿಲ್ಲ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಪ್ರತಿಭಟನೆ ಹತ್ತಿಕ್ಕುವುದಿಲ್ಲ ಅಂತ ಹೇಳಿದರು. ಆದರೆ, ಎಲ್ಲ ಕಡೆ ಪ್ರತಿಭಟನಾಕಾರರನ್ನು ಬೆಳಗ್ಗೆಯಿಂದಲೆ ಬಂಧಿಸುವ ಕೆಲಸ ಮಾಡಿದ್ದಾರೆ. ಇದರ ನಡುವೆಯೂ ಹೋರಾಟಗಾರರೂ ಯಶಸ್ವಿಯಾಗಿ ಬಂದ್ ಮಾಡಿದ್ದಾರೆ ಎಂದು ಅವರು ಹೇಳಿದರು.

ಕೊವಿಡ್ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನವರು ರಾಜಕಾರಣಕ್ಕಾಗಿ ಮೆಕೆದಾಟು ಪಾದಯಾತ್ರೆ ಮಾಡಿದ್ದರು, ಆಗ ನಾವು ನಿಮಗೆ ಸಮಾವೇಶ ಮಾಡಲು ಅವಕಾಶ ಕೊಟ್ಟಿದ್ದೇವು. ಈಗ ಹೋರಾಟಗಾರರು ಫ್ರೀಡಂ ಪಾರ್ಕ್ ವರೆಗೂ ಜಾಥಾ ನಡೆಸಲು ಬಿಡುತ್ತಿಲ್ಲ ಎಂದು ಬಸವರಾಜ ಬೊಮ್ಮಾಯಿ ದೂರಿದರು.

ಪ್ರತಿಪಕ್ಷಗಳು ರಾಜಕಾರಣ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೈತ ಸಂಘದವರು, ಕನ್ನಡ ಸಂಘದವರು ರಾಜಕಾರಣ ಮಾಡುತ್ತಾರಾ? ನಿಮ್ಮ ಒಕ್ಕೂಟದ ಸ್ನೇಹಿತರ ಹಿತ ಕಾಯುವುದನ್ನು ಬಿಟ್ಟು ರಾಜ್ಯದ ಹಿತ ಕಾಯಿರಿ. ಇವರು ತಮಿಳುನಾಡಿಗೆ ನೀರು ಬಿಟ್ಟು ಈಗ ಪ್ರಧಾನಿ ಮಧ್ಯಸ್ತಿಕೆ ಕೇಳಿದರೆ ಅದನ್ನು ಹೇಗೆ ಮಾಡಲು ಸಾಧ್ಯವಿದೆ ಎಂದು ಪ್ರಶ್ನಿಸಿದರು.

ಡಿಸಿಎಂ ಹೇಳಿಕೆಯ ಔಚಿತ್ಯವೇನು?: ಕಾವೇರಿ ನದಿ ನೀರಿನ ಹಂಚಿಕೆ ವಿಷಯ ಸಿಡಬ್ಲ್ಯುಆರ್‍ಸಿಯಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೆಆರ್‍ಎಸ್ ಗೆ 10 ಸಾವಿರ ಕ್ಯೂಸೆಕ್ ಒಳ ಹರಿವು ಇದೆ ಎಂದು ಡಿಸಿಎಂ ಹೇಳುವ ಉದ್ದೇಶವೇನಿತ್ತು. ಇವರ ಈ ರೀತಿಯ ಹೇಳಿಕೆಯಿಂದಲೆ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಅವರು ಹೇಳಿದರು.

ಸಿಡಬ್ಲ್ಯುಆರ್‍ಸಿ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಹೇಳಿದ್ದು, ಅವರದು ಏನೇ ಆದೇಶ ಬಂದರೂ ರಾಜ್ಯ ಸರಕಾರ ಅದನ್ನು ಒಪ್ಪಬಾರದು. ತಕ್ಷಣ ಸುಪ್ರೀಂ ಕೋರ್ಟ್‍ಗೆ ಮಧ್ಯಂತರ ಅರ್ಜಿ ಹಾಕಬೇಕು ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಈ ಆದೇಶ ವೈಜ್ಞಾನಿಕವಾಗಿಲ್ಲ. ಅವರು ವಸ್ತುಸ್ಥಿತಿ ಅರಿತು ಆದೇಶ ಮಾಡಬೇಕು. ರಾಜ್ಯದ ನಾಯಕತ್ವ ಸರಿಯಾದ ಲೀಡ್ ತೆಗೆದುಕೊಳ್ಳಬೇಕು. ಇವರು ಹಗುರವಾಗಿ ತೆಗೆದುಕೊಂಡಿರುವುದರಿಂದ ಸಮಸ್ಯೆ ಹೆಚ್ಚಾಗುತ್ತಿದೆ. ನಾವೇ ಮಧ್ಯಂತರ ಅರ್ಜಿ(ಐಎ) ಹಾಕಿದರೆ ನಮ್ಮ ಪರಿಸ್ಥಿತಿ, ಅವರ ಪರಿಸ್ಥಿತಿ ಏನಿದೆ ಅಂತ ಹೇಳಲು ಹೆಚ್ಚು ಅವಕಾಶ ಇರುತ್ತದೆ ಎಂದು ಅವರು ಸಲಹೆ ನೀಡಿದರು.

Tags

Basavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X