Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಿಪಿಎ ರದ್ದು ಮಾಡುವ ಅಧಿಕಾರ ಸಬ್...

ಜಿಪಿಎ ರದ್ದು ಮಾಡುವ ಅಧಿಕಾರ ಸಬ್ ರಿಜಿಸ್ಟ್ರಾರ್ ಗೆ ಇಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ5 Nov 2023 8:11 PM IST
share
ಜಿಪಿಎ ರದ್ದು ಮಾಡುವ ಅಧಿಕಾರ ಸಬ್ ರಿಜಿಸ್ಟ್ರಾರ್ ಗೆ ಇಲ್ಲ:  ಹೈಕೋರ್ಟ್

ಬೆಂಗಳೂರು, ನ. 5: ನೋಂದಾಯಿತ ಜನರಲ್ ಪವರ್ ಆಫ್ ಅಟಾರ್ನಿ(ಜಿಪಿಎ) ಅನ್ನು ಕ್ಯಾನ್ಸಲೇಷನ್ ಆಫ್ ಜಿಎಪಿ ಹೆಸರಿನಲ್ಲಿ ರದ್ದುಗೊಳಿಸಿ ಮತ್ತೊಂದು ಹೆಸರಿನಲ್ಲಿ ನೋಂದಣಿ ಮಾಡುವ ಅಧಿಕಾರ ಉಪ ನೋಂದಣಾಧಿಕಾರಿಗಳಿಗೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು.

ಬಾಗಲಕೋಟೆಯ ಮಧುಮತಿ ತಮ್ಮ ಹಾಗೂ ತಮ್ಮ ಪತಿಯ ಹೆಸರಿನಲ್ಲಿ ಜಂಟಿಯಾಗಿ ನೋಂದಾಯಿಸಿದ್ದ ಜಿಪಿಎ ಅನ್ನು ರದ್ದುಗೊಳಿಸಲು ಬಯಸಿದ್ದರು. ಆದರೆ, ಅದನ್ನು ನಿರಾಕರಿಸಿ ಬೆಳಗಾವಿಯ ಸಬ್ ರಿಜಿಸ್ಟ್ರಾರ್ ಹಿಂಬರಹ ನೀಡಿದ್ದರು. ಇದನ್ನು ಪ್ರಶ್ನಿಸಿ ಮಧುಮತಿ ಸಲ್ಲಿಸಿದ್ದ ಅರ್ಜಿ ಆಲಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.

ರಿಜಿಸ್ಟ್ರಾರ್/ಸಬ್ ರಿಜಿಸ್ಟ್ರಾರ್ ಗೆ ಅಗತ್ಯ ಪುರಾವೆಗಳೊಂದಿಗೆ ದಾಖಲೆಗಳ ನೋಂದಣಿ ಮಾಡುವುದಿಲ್ಲವೆಂದು ಹೇಳುವ ಯಾವ ಅಧಿಕಾರವೂ ಇಲ್ಲ. ಆದರೆ, 1908ರ ರಿಜಿಸ್ಟ್ರೇಷನ್ ಕಾಯಿದೆ ಅನ್ವಯ ರಿಜಿಸ್ಟ್ರಾರ್‍ಗೆ ನೋಂದಾಯಿತ ದಾಖಲೆಯನ್ನು ರದ್ದುಗೊಳಿಸುವ ಅಧಿಕಾರ ಇಲ್ಲ ಎಂದು ಪೀಠ ತಿಳಿಸಿದೆ.

ಕ್ರಯಪತ್ರ ಅಥವಾ ಡೀಡ್ ಅನ್ನು ರದ್ದುಗೊಳಿಸುವುದು ಅದನ್ನು ವಜಾ ಮಾಡುವುದಕ್ಕೆ ಸಮನಾದುದು. ಒಪ್ಪಂದದ ವಿಚಾರಗಳಲ್ಲಿ, ವಜಾ ಮಾಡುವುದು(ರಿಷಿಷನ್) ಪದವನ್ನು ರದ್ದು ಮಾಡುವುದಕ್ಕೆ ಬಳಸಲಾಗುವುದು. ಹೀಗಾಗಿ, ಒಮ್ಮೆ ವ್ಯಕ್ತಿ ದಾಖಲೆಯನ್ನು ನೋಂದಾಯಿಸಿದರೆ ಮತ್ತು ನಂತರ ಅದನ್ನು ರದ್ದುಗೊಳಿಸಲು ಬಯಸಿದರೆ ಆಗ ಆ ಪ್ರಕರಣವನ್ನು ಭಾರತೀಯ ಒಪ್ಪಂದ ಕಾಯಿದೆ ಸೆಕ್ಷನ್ 62ರಡಿ ಪರಿಗಣಿಸಬೇಕಾಗುತ್ತದೆ ಎಂದು ಪೀಠ ಹೇಳಿತು.

ಡೀಡ್ ರದ್ದು ಮಾಡಬೇಕಾದರೆ ಅದನ್ನೂ ಎರಡೂ ಕಡೆಯಿಂದ ಮಾಡಬೇಕಾಗುತ್ತದೆ. ಒಮ್ಮೆ ನೋಂದಾಯಿತ ದಾಖಲೆ ಜಾರಿಯಾದರೆ, ಅದನ್ನು ರದ್ದುಗೊಳಿಸಲು ಆ ವ್ಯಕ್ತಿ ಬಯಸಿದರೆ ಆಗ ವಿಶೇಷ ಪರಿಹಾರ ಕಾಯಿದೆ ಸೆಕ್ಷನ್ 31 ಅಡಿ ಲಭ್ಯವಿರುವ ಪರಿಹಾರವನ್ನು ಅವರು ಪಡೆದುಕೊಳ್ಳಬೇಕಾಗುತ್ತದೆ.

ಅದರೆ, ಭಾರತೀಯ ನೋಂದಣಿ ಕಾಯಿದೆ 1908ರಲ್ಲಿ ಅದಕ್ಕೆ ಯಾವುದೇ ಪರಿಹಾರ ಇಲ್ಲ. ಹೀಗಾಗಿ, ಉಪ ನೋಂದಣಾಧಿಕಾರಿಗೆ ನೋಂದಾಯಿತ ಜಿಪಿಎ ರದ್ದುಗೊಳಿಸುವ ಅಧಿಕಾರವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಕಾನೂನು ಇಲ್ಲದ ಕಾರಣ ಸಬ್ ರಿಜಿಸ್ಟ್ರಾರ್‍ಗೆ ನೋಂದಾಯಿತ ದಾಖಲೆ ರದ್ದುಗೊಳಿಸುವ ಅಧಿಕಾರವಿದೆ ಎಂಬ ಊಹಿಸಿಕೊಂಡು ಕಾರ್ಯನಿರ್ವಹಿಸುವಂತಿಲ್ಲ ಎಂದು ಪೀಠ ತಿಳಿಸಿದೆ.

ಪ್ರಕರಣವೇನು?: ಅರ್ಜಿದಾರರು ತಮ್ಮ ಹಾಗೂ ತಮ್ಮ ಪತಿ ಹೆಸರಿನಲ್ಲಿ ತಮ್ಮ ವಹಿವಾಟು ನಿಯಂತ್ರಣ, ಆದಾಯ ತೆರಿಗೆ ಪಾವತಿ ಮತ್ತು ಅಡವಿಟ್ಟು ಆಸ್ತಿಗಾಗಿ ತಮ್ಮಲ್ಲಿರುವ ಹಣವನ್ನು ಪಾವತಿಸಲು ಜಂಟಿಯಾಗಿ ಜಿಪಿಎ ನೋಂದಣಿ ಮಾಡಿಸಿಕೊಂಡಿದ್ದರು. ನಂತರ ಅದನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಿದ್ದರು. ಆದರೆ ಅದನ್ನು ರದ್ದು ಮಾಡಲಾಗದು ಎಂದು ಉಪ ನೋಂದಣಾಧಿಕಾರಿ ಹಿಂಬರಹ ನೀಡಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X