Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅ.25ರಿಂದ ಕಬ್ಬು ಅರೆಯುವಿಕೆ ಆರಂಭ:...

ಅ.25ರಿಂದ ಕಬ್ಬು ಅರೆಯುವಿಕೆ ಆರಂಭ: ಸಕ್ಕರೆ ಸಚಿವ ಶಿವಾನಂದ ಪಾಟೀಲ್

ʼʼಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ 1 ರೂಪಾಯಿಯೂ ಬಾಕಿ ಇಲ್ಲʼʼ

ವಾರ್ತಾಭಾರತಿವಾರ್ತಾಭಾರತಿ17 Oct 2023 11:20 PM IST
share
ಅ.25ರಿಂದ ಕಬ್ಬು ಅರೆಯುವಿಕೆ ಆರಂಭ: ಸಕ್ಕರೆ ಸಚಿವ ಶಿವಾನಂದ ಪಾಟೀಲ್

ಬೆಂಗಳೂರು, ಅ.17: ರಾಜ್ಯದಲ್ಲಿ ಈ ಬಾರಿ ಒಂದು ವಾರ ಮುಂಚಿತವಾಗಿ ಕಬ್ಬು ಅರೆಯುವಿಕೆ ಶುರುವಾಗಲಿದೆ. ಸಾಮಾನ್ಯವಾಗಿ ನ.1ರಿಂದ ಎಲ್ಲ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಅರೆಯುವಿಕೆ ಆರಂಭವಾಗಬೇಕಿತ್ತು. ಆದರೆ, ಬರದ ಹಿನ್ನೆಲೆಯಲ್ಲಿ ಅ.25ರಿಂದಲೆ ಕಬ್ಬು ಅರೆಯುವಿಕೆ ಆರಂಭವಾಗಲಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರೈತರು ಕಂಗಲಾಗಿದ್ದಾರೆ. ಬಹಳಷ್ಟು ಕಡೆ ಕಬ್ಬು ಒಣಗುತ್ತಿದೆ. ಹಂಗಾಮಿಗೆ ಬೇಗನೆ ಕಬ್ಬು ಅರೆಯುವಿಕೆ ಶುರು ಮಾಡುವಂತೆ ಬೆಳಗಾರರು ಮನವಿ ಮಾಡಿದ್ದಾರೆ. ಹೀಗಾಗಿ ಒಂದು ವಾರ ಮುಂಚಿತವಾಗಿ ಕಬ್ಬು ಅರೆಯುವಿಕೆಯನ್ನು ಆರಂಭಿಸುವಂತೆ ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಸೂಚಿಸಲಾಗಿದೆ ಎಂದರು.

ಮುಖ್ಯಮಂತ್ರಿ ಆದೇಶದನ್ವಯ ಜಾರಿ: ಪ್ರತಿ ಬಾರಿ ತಮಗೆ ಇಷ್ಟ ಬಂದಂತೆ ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವಿಕೆಯನ್ನು ಶುರು ಮಾಡುತ್ತಿದ್ದವು. ಈ ಬಾರಿ ನ.1 ರಿಂದ ಏಕಕಾಲದಲ್ಲಿ ಕಬ್ಬು ಅರೆಯುವಿಕೆಯನ್ನು ಆರಂಭಿಸುವಂತೆ ನಿರ್ದೇಶಿಸಲಾಗಿತ್ತು. ಸದ್ಯ ಎಲ್ಲೆಡೆ ಬರ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಅ.25ರ ನಂತರ ಶುರು ಮಾಡುವಂತೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ ಎಂದು ಅವರು ಹೇಳಿದರು.

ಬರ ಹಿನ್ನೆಲೆ; ಇಳುವರಿ ಕಡಿಮೆ ಸಾಧ್ಯತೆ: ಕಬ್ಬು ಎಂದಿನಂತೆ ಸುಮಾರು 11 ರಿಂದ 12 ತಿಂಗಳಿಗೆ ಕಟಾವಿಗೆ ಬರುತ್ತದೆ. ಮಳೆ ಚೆನ್ನಾಗಿ ಆಗಿ, ನವೆಂಬರ್ ನಲ್ಲಿ ಕಬ್ಬು ಕಟಾವು ಮಾಡಿದ್ದರೆ ಇಳುವರಿಯೂ ಜಾಸ್ತಿ ಇರುತ್ತಿತ್ತು. ಆದರೆ, ಮಳೆ ಕೊರತೆಯಿಂದ ಅಕ್ಟೋಬರ್ ನಲ್ಲೆ ಕಬ್ಬು ಕಟಾವು ಮಾಡುವುದರಿಂದ ಸ್ವಲ್ಪ ಇಳುವರಿ ಕಡಿಮೆಯಾಗಲಿದೆ ಎಂದು ಶಿವಾನಂದ ಪಾಟೀಲ್ ಮಾಹಿತಿ ನೀಡಿದರು.

ರಾಜ್ಯದಲ್ಲಿ ಈ ಬಾರಿ 3.50 ರಿಂದ 4.50 ಲಕ್ಷ ಹೆಕ್ಟೇರ್ ನಲ್ಲಿ 11-12 ತಿಂಗಳು ತುಂಬಿದ ಕಬ್ಬು ಇದೆ. ಶೇ.9.5ರಷ್ಟು ಇಳುವರಿ ಇರುತ್ತಿತ್ತು. ಈ ಬಾರಿ ಸುಮಾರು 1 ಲಕ್ಷ ಹೆಕ್ಟೇರ್‍ನಲ್ಲಿ ಕಬ್ಬು ಕಟಾವಿಗೆ ಬಂದಿಲ್ಲ. ಕಳೆದ ಬಾರಿ 74 ಕಾರ್ಖಾನೆಗಳಲ್ಲಿ ಕಬ್ಬು ಅರೆಯುವಿಕೆಯನ್ನು ಮಾಡಲಾಗಿತ್ತು. ಈ ಬಾರಿ 75 ರಿಂದ 78 ಕಾರ್ಖಾನೆಯಲ್ಲಿ ಕಬ್ಬನ್ನು ಅರೆಯಬಹುದು. ಇದರಿಂದ 1800 ಮೆಗಾವ್ಯಾಟ್ ಕೋಜನ್(ವಿದ್ಯುತ್) ಉತ್ಪಾದನೆಯಾಗಲಿದೆ ಎಂದು ಅವರು ಹೇಳಿದರು.

ಒಂದು ರೂಪಾಯಿಯೂ ಬಾಕಿ ಇಲ್ಲ: ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಎಫ್‍ಆರ್‍ಪಿಗಿಂತ ಜಾಸ್ತಿ ಹಣವನ್ನೆ ಕೊಡಿಸಲಾಗಿದೆ. ಈ ಮೊದಲು 19.74 ಸಾವಿರ ಕೋಟಿ ರೂಪಾಯಿ ಇದ್ದು, ಈಗ 20 ಸಾವಿರ ಕೋಟಿ ರೂಪಾಯಿ ರೈತರಿಗೆ ಕೊಡಿಸಲಾಗಿದೆ. ಬುಳವಾಡ ಬಸವೇಶ್ವರ ಸಕ್ಕರೆ ಕಾರ್ಖಾನೆಯಿಂದ 28 ಕೋಟಿ ರೂ.ಬಾಕಿ ಇತ್ತು. ಕಾರ್ಖಾನೆಯ ಉಪಕರಣ ಜಪ್ತಿ ಮಾಡಿ ಹಣವನ್ನು ರೈತರಿಗೆ ಕೊಡಿಸಲಾಗಿದೆ. ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ ಒಂದು ರೂಪಾಯಿ ಬಾಕಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸಕ್ಕರೆ ಉತ್ಪಾದನೆ ಕಡಿಮೆಯಾಗುವ ಸಂಭವ: ಎಥೆನಾಲ್ ಲಾಭಾಂಶವನ್ನು ರೈತರಿಗೆ ಕೊಡುವ ಬಗ್ಗೆ ಸಕ್ಕರೆ ನಿಯಂತ್ರಣ ಮಂಡಳಿ ಮುಂದೆ ತಂದು ನಿರ್ಧಾರ ಮಾಡಲಾಗುವುದು. ಕಳೆದ ಬಾರಿ ಎಥೆನಾಲ್ 35 ಸಾವಿರ ಕೋಟಿ ಲೀಟರ್ ಗೆ ಹೋಗಿತ್ತು. ಈ ಬಾರಿ ಸಕ್ಕರೆ ಉತ್ಪಾದನೆಯೂ ಕಡಿಮೆ ಆಗಬಹುದು, ಮಾರುಕಟ್ಟೆಯಲ್ಲಿ ಬೇಡಿಕೆಯಷ್ಟು ಸಕ್ಕರೆ ಬಾರದೆ ಇರಬಹುದು. ರಾಜ್ಯದಲ್ಲಿ ಎಥೆನಾಲ್ ಲಾಭವನ್ನು ಈ ವರ್ಷವೆ ರೈತರಿಗೆ ಕೊಡಿಸಲಾಗುವುದು ಎಂದು ಶಿವಾನಂದ ಪಾಟೀಲ್ ಹೇಳಿದರು.

ಕಾರ್ಖಾನೆಗಳ ಅಂತರ ನಿಗದಿ: ಹಿಂದಿನ ಸರಕಾರ ಸಕ್ಕರೆ ಕಾರ್ಖಾನೆಗಳ ನಡುವೆ 15 ಕಿ.ಮೀ ಅಂತರವನ್ನು ಮಾಡಿದ್ದರು. ನಾವೀಗ 25 ಕಿ.ಮೀ ಅಂತರ ಇರಬೇಕೆಂದು ಹೇಳುತ್ತವೆ ಅμÉ್ಟೀ. ನೆರೆಯ ಮಹಾರಾಷ್ಟ್ರದಲ್ಲಿ ಈಗ 25 ಕಿ.ಮೀ ಅಂತರ ಇದೆ. ಕಬ್ಬು ಬೆಳೆ ತುಂಬಾ ಕಡಿಮೆ ಇದೆ. ಮುಖ್ಯವಾಗಿ 125 ದಿನ ಕಬ್ಬು ಅರೆಯುವಿಕೆ ನಡೆಸಿದರೆ ಮಾತ್ರ ಕಾರ್ಖಾನೆಗೆ ಪ್ರಯೋಜನ. ಇದನ್ನು 90 ದಿನಕ್ಕೆ ಸೀಮಿತಗೊಳಿಸಬಹುದು. ಹಾಗಾಗಿ ಅಂತರ ನಿಗದಿಪಡಿಸುವ ವಿಚಾರ ಕೈಬಿಡಲಾಗಿದೆ ಎಂದು ಅವರು ಹೇಳಿದರು.

ವಿದ್ಯುನ್ಮಾನ ಮಾಪನ ಯಂತ್ರ ಕಡ್ಡಾಯ: ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಮೋಸ ಆಗುವುದಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ತಪಾಸಣೆಗೆ ಕಾರ್ಯಪಡೆ ರಚನೆ ಮಾಡಲಾಗುತ್ತಿದೆ. ಮಾಪನ ಇಲಾಖೆ, ನಮ್ಮ ಇಲಾಖೆ ಸೇರಿ ತಪಾಸಣೆ ನಡೆಸುತ್ತೇವೆ. ರೈತರು ಲಿಖಿತವಾಗಿ ದೂರು ಕೊಟ್ಟರೆ ಪರಿಶೀಲಿಸುತ್ತೇವೆ. ವಿದ್ಯುನ್ಮಾನ ಮಾಪನ ಯಂತ್ರ ಕಡ್ಡಾಯ ಮಾಡಲಾಗುವುದು ಎಂದು ಶಿವಾನಂದ ಪಾಟೀಲ್ ತಿಳಿಸಿದರು.

ಮುಂಚೆಯೆ ಕಬ್ಬು ಅರೆಯುವಿಕೆಯನ್ನು ಆರಂಭ ಮಾಡಿದ ಶಾಸಕರೊಬ್ಬರ ಕಾರ್ಖಾನೆ ನಿಲ್ಲಿಸಿದೆ. ಕೆಆರ್‍ಪಿ ಶುಗರ್ಸ್ ಅವರು ಬೇರೆ ಏರಿಯಾದ ಕಬ್ಬು ನುರಿಸಿದ್ದರು. ಬಸವೇಶ್ವರ ಶುಗರ್ ಕಾರ್ಖಾನೆಗೆ ಗೋದಾಮು ಇರಲಿಲ್ಲ. ಕಬ್ಬು, ಸಕ್ಕರೆ ಎಲ್ಲಿಗೆ ಸಾಗಿಸುತ್ತಿದ್ದ ಅಂತ ಗೊತ್ತೆ ಇರಲಿಲ್ಲ. ಈಗ ಗೋದಾಮು ಕಟ್ಟಿಸಿದ್ದಾರೆ ಎಂದು ಅವರು ತಿಳಿಸಿದರು.

7 ವರ್ಷದಿಂದ ಕಾರ್ಖಾನೆ ನಡೆಸುತ್ತಿದ್ದರು. 3.50 ಸಾವಿರ ಟನ್ ಗೆ ಪರವಾನಗಿ ಇತ್ತು. 7 ಸಾವಿರ ಟನ್ ಕ್ರಷಿಂಗ್ ಮಾಡುತ್ತಿದ್ದರು. ಈ ಸಂಬಂಧ ನೋಟಿಸ್ ನೀಡಲಾಗಿದ್ದು ತನಿಖೆ ನಡೆದಿದೆ. ಸಕ್ಕರೆ ನಿರ್ವಹಣೆ, ನಿಯಂತ್ರಣಕ್ಕೆ ವಿಧೇಯಕವನ್ನು ಮಹಾರಾಷ್ಟ್ರ ಮಾದರಿಯಲ್ಲಿ ತರಲು ಚಿಂತನೆ ಇದೆ. ಅಲ್ಲಿ 198 ಕಾರ್ಖಾನೆ ಇದೆ. ಇಳುವರಿ, ಎಥೆನಾಲ್ ಎಲ್ಲವೂ ಜಾಸ್ತಿ ಇದೆ ಎಂದು ಅವರು ಹೇಳಿದರು.

ಮೈಶುಗರ್ ಕಾರ್ಖಾನೆ: ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ಅವ್ಯವಹಾರ ಕುರಿತಂತೆ ಪ್ರತಿಕ್ರಿಯಿಸಿದ ಶಿವಾನಂದ ಪಾಟೀಲ್, ಈಗಾಗಲೆ ಲೋಕಾಯುಕ್ತ ತನಿಖೆ ಆಗಿದೆ. ಅದರ ಆಧಾರದ ಮೇಲೆ ಮೇಲ್ಮನವಿ ಹೋಗಬೇಕು. 1 ಕೋಟಿ ರೂಪಾಯಿ ತುಂಬಬೇಕು. 2 ಲಕ್ಷ ಟನ್ ಅರೆಯುವಿಕೆ(ಕ್ರಷಿಂಗ್) ಆಗಿದೆ. ಶೇ. 7.50 ರಷ್ಟು ರಿಕವರಿ ಆಗಿದೆ ಎಂದರು.

ರಫ್ತಿಗೆ ಅವಕಾಶ ಕೊಟ್ಟರೆ ಒಳ್ಳೆಯದು: ಸಕ್ಕರೆ ಮೇಲೆ ಶೇ.5ರಷ್ಟು ಜಿಎಸ್ಟಿ ಇದೆ. ಅದರಿಂದ ನಮಗೆ ಶೇ 2.5 ಸಿಗಲಿದೆ. ದೇಶದಲ್ಲಿಗ ರಫ್ತು ರದ್ದಾಗಿರುವುದರಿಂದ ಸಕ್ಕರೆ ದರ ಕಡಿಮೆ ಇದೆ. ರಫ್ತಿಗೆ ಅವಕಾಶ ಸಿಕ್ಕರೆ ರೈತರಿಗೆ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಶಿವಾನಂದ ಪಾಟೀಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X