Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಮಾವೇಶಕ್ಕೆ ಎದುರಾಗಿದ್ದ ದೊಡ್ಡ...

ಸಮಾವೇಶಕ್ಕೆ ಎದುರಾಗಿದ್ದ ದೊಡ್ಡ ಪ್ರತಿರೋಧವನ್ನು ಯಶಸ್ವಿಯಾಗಿ ಎದುರಿಸಿದ್ದೇವೆ : ಸುಹೈಲ್‌ ಅಹ್ಮದ್ ಮರೂರ್

ವಾರ್ತಾಭಾರತಿವಾರ್ತಾಭಾರತಿ16 May 2026 6:03 PM IST
share
ಸಮಾವೇಶಕ್ಕೆ ಎದುರಾಗಿದ್ದ ದೊಡ್ಡ ಪ್ರತಿರೋಧವನ್ನು ಯಶಸ್ವಿಯಾಗಿ ಎದುರಿಸಿದ್ದೇವೆ : ಸುಹೈಲ್‌ ಅಹ್ಮದ್ ಮರೂರ್
ಬೆಂಗಳೂರಿನಲ್ಲಿ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟದಿಂದ ʼಕರ್ನಾಟಕ ಮುಸ್ಲಿಮ್ ಸಮಾವೇಶʼ

ಬೆಂಗಳೂರು : ಕರ್ನಾಟಕ ಮುಸ್ಲಿಮ್ ಸಮಾವೇಶವನ್ನು ಆಯೋಜಿಸಿ ಒಂದು ವಾರದಿಂದ ಇದರ ಪ್ರಚಾರ ಮಾಡಿದ್ದೇವೆ. ಆದರೆ, ಕಳೆದ 24 ಗಂಟೆಯಲ್ಲಿ ಈ ಸಮಾವೇಶ ರದ್ದಾಗಿದೆ ಎಂದು ಅಪಪ್ರಚಾರ, ಸುಳ್ಳು ಮಾಹಿತಿ ಹರಡಿದರೂ ರಾಜ್ಯದ ವಿವಿಧ ಮೂಲೆಗಳಿಂದ ಅಸಂಖ್ಯಾತ ಜನರು ಇಲ್ಲಿ ಸೇರಿದ್ದಾರೆ. ಸಮಾವೇಶಕ್ಕೆ ಎದುರಾಗಿದ್ದ ದೊಡ್ಡ ಪ್ರತಿರೋಧವನ್ನು ನಾವು ಯಾಶಸ್ವಿಯಾಗಿ ಎದುರಿಸಿದ್ದೇವೆ ಎಂದು ಕರ್ನಾಟಕ ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ವಕ್ತಾರ ಸುಹೈಲ್‌ ಅಹ್ಮದ್ ಮರೂರ್ ತಿಳಿಸಿದರು.

ಶನಿವಾರ ನಗರದ ಟೌನ್‍ಹಾಲ್‍ನಲ್ಲಿ ಕರ್ನಾಟಕ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ ಕರ್ನಾಟಕ ಮುಸ್ಲಿಮ್ ಸಮಾವೇಶದಲ್ಲಿ ‘ಸಂವಿಧಾನ ಪೀಠಿಕೆ’ ಓದುವ ಮೂಲಕ ಪ್ರಾಸ್ತಾವಿಕ ಭಾಷಣ ಆರಂಭಿಸಿದ ಅವರು, ನಮ್ಮ ಒಕ್ಕೂಟ ಕಳೆದ ಎಂಟು ತಿಂಗಳಿನಿಂದ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅಭಿಪ್ರಾಯ ಸಂಗ್ರಹಿಸಿದೆ. ಸಮುದಾಯದ ಹಿತಾಸಕ್ತಿಗಾಗಿ, ಸಾಂವಿಧಾನಿಕ ಹಕ್ಕುಗಳಿಗಾಗಿ ಹೋರಾಟ ಮಾಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಮುಸ್ಲಿಮ್ ಸಮುದಾಯಕ್ಕೆ ಲಕ್ಷಾಂತರ ಜನರನ್ನು ಸೇರಿಸಿ ಧಾರ್ಮಿಕ ಸಮಾವೇಶ ಮಾಡುವ ಶಕ್ತಿಯಿದೆ. ಆದರೆ, ಕೇವಲ ಒಂದು ಸಾವಿರ ಜನರನ್ನು ಸಂಘಟಿಸಲು ಹೊರಟಾಗ ನಿಮ್ಮ ಹಿಂದೆ ಯಾರಿದ್ದಾರೆ? ನಿಮಗೆ ದುಡ್ಡು ಕೊಟ್ಟವರು ಯಾರು?, ಈ ಸಮಾವೇಶ ಯಾರ ಪರ?, ಯಾರ ವಿರುದ್ಧ? ಎಂದು ದೊಡ್ಡ ಮಟ್ಟದ ಪ್ರತಿರೋಧ, ಸವಾಲು, ಒತ್ತಡ ನಿರ್ಮಾಣವಾಯಿತು. ಬೇರೆ ಯಾರಾದರೂ ಇದ್ದಿದ್ದರೆ, ಈ ಸಮಾವೇಶ ರಾಜಿ, ಒತ್ತಡಕ್ಕೆ ಮಣಿದು ರದ್ದಾಗುತ್ತಿತ್ತು ಎಂದು ಸುಹೈಲ್‌ ಅಹ್ಮದ್ ಮರೂರ್ ತಿಳಿಸಿದರು.

ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಅಸ್ಮಿತೆ ಅಪಾಯದಲ್ಲಿರುವ ಸಂದಿಗ್ಧ ಕಾಲದಲ್ಲಿದ್ದೇವೆ. ಹಿಜಾಬ್ ನಿಷೇಧ ಆದೇಶವನ್ನು ರದ್ದು ಮಾಡುವಂತೆ ಮೂರು ವರ್ಷಗಳಿಂದ ಆಗ್ರಹಿಸುತ್ತಿದ್ದೆವು. ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಈ ಸಮಾವೇಶದ ಕುರಿತು ಪತ್ರಿಕಾಗೋಷ್ಠಿ ಮಾಡಿದ ಮೂರೇ ಗಂಟೆಯಲ್ಲಿ ಸರಕಾರ ಆದೇಶ ಹಿಂಪಡೆದಿದೆ. ಈ ಒತ್ತಡವನ್ನು ಎಲ್ಲರೂ ಗ್ರಹಿಸಬೇಕು. ಸರಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ಈ ಒಕ್ಕೂಟ ಸ್ವಾಗತಿಸಿ, ಧನ್ಯವಾದ ಸಲ್ಲಿಸುತ್ತದೆ ಎಂದು ಅವರು ಹೇಳಿದರು.

ಮುಸ್ಲಿಮ್ ಸಮುದಾಯಕ್ಕೆ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಉದ್ದೇಶಗಳಿಗಾಗಿ ಒಂದು ಸಮಾವೇಶ ಮಾಡುವ ಸಾಮರ್ಥ್ಯವಿಲ್ಲವೆ? 500 ಜನ ಸೇರಿ ಮಾಡುವ ಸಮಾವೇಶವನ್ನು ಅನುಮಾನದ ದೃಷ್ಟಿಯಿಂದ ನೋಡಿ, ಅಪಪ್ರಚಾರ ನಡೆಸುತ್ತಿರುವುದು ಏಕೆ? ಇದು ಕಾಂಗ್ರೆಸ್ ಪಕ್ಷ ಅಥವಾ ಸರಕಾರದ ವಿರುದ್ಧ ಮಾಡುತ್ತಿರುವ ಸಮಾವೇಶವಲ್ಲ. ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಕೊಟ್ಟ ಭರವಸೆಗಳು ಏನು? ಈಡೇರಿಸಿದ್ದು ಯಾವುವು? ಈಡೇರಿಸದೆ ಇರುವುದು ಯಾವುದು? ಎಂದು ಪ್ರಶ್ನೆ ಮಾಡಲು ಸಮಾವೇಶ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಸರಕಾರದ ಆಶ್ವಾಸನೆಗಳು, ಅನುಷ್ಠಾನದಲ್ಲಿ ಆಗಿರುವ ಕೊರತೆ ಕುರಿತ ನಮ್ಮ ವರದಿಯಲ್ಲಿ ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಕಾರ್ಮಿಕರು ಇದೇ ಮೊದಲ ಬಾರಿಗೆ ತಮ್ಮ ತೆರಿಗೆ ಹಾಗೂ ಶ್ರಮದ ಪಾಲಿಗೆ ಲೆಕ್ಕ ಕೇಳುತ್ತಿದ್ದಾರೆ. ಇದು ವ್ಯಕ್ತಿ, ಪಕ್ಷದ ಪರವಾಗಿ ಅಲ್ಲ, ಸಮುದಾಯದ ಪರವಾಗಿ ಒಂದು ಸಣ್ಣ ಕೆಲಸ ಮಾಡುತ್ತಿದ್ದೇವೆ. ಈ ಸಮಾವೇಶ ಮುಗಿದ ಬಳಿಕ ವರದಿಯನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿಯವರಿಗೂ ತಲುಪಿಸುವ ಪ್ರಯತ್ನ ಮಾಡುತ್ತೇವೆ ಎಂದು ಸುಹೈಲ್‌ ಅಹ್ಮದ್ ಮರೂರ್ ತಿಳಿಸಿದರು.

ಕರ್ನಾಟಕ ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಹಾರಿಸ್ ಸಿದ್ದೀಖಿ ಸ್ವಾಗತಿಸಿದರು.



Tags

Suhail Ahmed MaroorMuslims
share
ವಾರ್ತಾಭಾರತಿ
ವಾರ್ತಾಭಾರತಿ
Next Story
X