Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್...

ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ BJP ಟಿಕೆಟ್ ಘೋಷಿಸಬೇಕು: ಮಾಜಿ ಸಚಿವ ನಾರಾಯಣಗೌಡ ಒತ್ತಾಯ

ʼʼಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಕ್ರಮ ಸರಿಯಿಲ್ಲʼʼ

ವಾರ್ತಾಭಾರತಿವಾರ್ತಾಭಾರತಿ11 Oct 2023 7:25 PM IST
share
ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ BJP ಟಿಕೆಟ್ ಘೋಷಿಸಬೇಕು: ಮಾಜಿ ಸಚಿವ ನಾರಾಯಣಗೌಡ ಒತ್ತಾಯ

ಮಂಡ್ಯ, ಅ.11: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಬಿಜೆಪಿ ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಕ್ರಮವು ಸರಿಯಲ್ಲ ಎಂದು ಮಾಜಿ ಸಚಿವ ಡಾ.ನಾರಾಯಣಗೌಡ ಹೇಳಿದ್ದಾರೆ.

ಬುಧವಾರ ಕೆ.ಆರ್.ಪೇಟೆ ಪಟ್ಟಣದಲ್ಲಿ ತನ್ನ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಗೆ ಪ್ರಭಲವಾದ ವಿರೋಧಿಯೆಂದರೆ ಜೆಡಿಎಸ್ ಪಕ್ಷ. ಆದ್ದರಿಂದ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ತೀರ್ಮಾನವನ್ನು ಪರಿಶೀಲನೆ ಮಾಡಬೇಕು ಎಂದು ಅವರು ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಬಿಜೆಪಿ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬರಲು ನಾನೂ ಸೇರಿದಂತೆ 17 ಶಾಸಕರು ಕಾರಣರಾಗಿದ್ದೇವೆ. ಕಳೆದ ಲೋಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಎಂಟು ಸ್ಥಾನಗಳಲ್ಲಿಯೂ ಜೆಡಿಎಸ್ ಶಾಸಕರಿದ್ದರೂ ಜೆಡಿಎಸ್ ಕಾಂಗ್ರೇಸ್ ಮೈತ್ರಿ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರು ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಮಂಡ್ಯ ಜಿಲ್ಲೆಯ ಸೊಸೆಯಾಗಿದ್ದ ಸ್ವಾಭಿಮಾನಿ ಅಭ್ಯರ್ಥಿ ಸುಮಲತಾ ಭರ್ಜರಿ ಗೆಲುವು ಸಾಧಿಸಿದ್ದರು.

ಪ್ರಸ್ತುತ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಿದ್ದರೂ ಲೋಕಸಭೆ ಚುನಾವಣೆಯ ವಿಚಾರ ಬಂದಾಗ ಪ್ರಜ್ಞಾವಂತ ಮತದಾರರು ನರೇಂದ್ರಮೋದಿ ನೇತೃತ್ವದ ಬಿಜೆಪಿ ಬೆಂಬಲಿಸಲಿದ್ದಾರೆ. ಹಾಗಾಗಿ ಸುಮಲತಾ ಅಂಬರೀಶ್ ಸ್ಪರ್ಧಿಸಬೇಕು ಎಂದು ಅವರು ಪ್ರತಿಪಾದಿಸಿದರು.

ಸುಮಲತಾ ಅಂಬರೀಶ್ ಮಾತನಾಡಿ, ಕಾವೇರಿ ವಿಚಾರದಲ್ಲಿ ನಮ್ಮ ರಾಜ್ಯ ಸರಕಾರ ಸುಪ್ರೀಂಕೋರ್ಟ್, ಪ್ರಾಧಿಕಾರದ ಮುಂದೆ ವಾಸ್ತವ ಪರಿಸ್ಥಿತಿ ಮಂಡಿಸಲು ವಿಫಲವಾಗಿದೆ. ವಿವಾದವನ್ನು ಸೌಹಾರ್ದಯುತ ಮಾತುಕತೆಯಿಂದ ಬಗೆಹರಿಸಿಕೊಳ್ಳಲು ಸಾಧ್ಯವಿದೆ ಎಂದರು.

ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಿ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಪರಿಹಾರ ಕಂಡುಹಿಡಿಯಲು ಸಾಧ್ಯವಿಲ್ಲ. ಅದಕ್ಕೆ ಕಾನೂನು ತೊಡಕಿದೆ. ಇದು ಕಾಂಗ್ರೇಸ್ ನಾಯಕರಿಗೂ ಗೊತ್ತಿದೆಯಾದರೂ ಸುಖಾಸುಮ್ಮನೆ ವಿತಂಡವಾದ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

“ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಬಗ್ಗೆ ಮೇಲ್ಮಟ್ಟದಲ್ಲಿ ಮಾತುಕತೆಯಾಗಿದ್ದರೂ ಸ್ಥಾನಗಳ ಹೊಂದಾಣಿಕೆ ಇನ್ನೂ ಅಂತಿಮವಾಗಿಲ್ಲ. ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ. ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಹೊಂದಾಣಿಕೆಯಿಂದ ರಾಜ್ಯದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜನತೆ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂದು ಬಯಸಿದ್ದಾರೆ.”

-ಸುಮಲತಾ ಅಂಬರೀಶ್, ಸಂಸದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X