Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ನಾವೀನ್ಯತೆಗೆ ಸ್ವಿಟ್ಜರ್ಲೆಂಡ್ ಆಸಕ್ತಿ,...

‘ನಾವೀನ್ಯತೆಗೆ ಸ್ವಿಟ್ಜರ್ಲೆಂಡ್ ಆಸಕ್ತಿ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಜತೆ ಕಾನ್ಸುಲ್ ಜನರಲ್ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ24 July 2023 9:26 PM IST
share
‘ನಾವೀನ್ಯತೆಗೆ ಸ್ವಿಟ್ಜರ್ಲೆಂಡ್ ಆಸಕ್ತಿ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಜತೆ ಕಾನ್ಸುಲ್ ಜನರಲ್ ಚರ್ಚೆ

ಬೆಂಗಳೂರು, ಜು. 24: ವಿಜ್ಞಾನ ಮತ್ತು ಸಂಶೋಧನೆ ಹಾಗೂ ನಾವೀನ್ಯತೆ ವಿಷಯದಲ್ಲಿ ರಾಜ್ಯದ ಜತೆ ಕೆಲಸ ಮಾಡಲು, ಸ್ವಿಟ್ಜರ್ಲೆಂಡ್ ಆಸಕ್ತಿ ವ್ಯಕ್ತಪಡಿಸಿದ್ದು, ಈ ಸಂಬಂಧವಾಗಿ ಆ ದೇಶದ ಕಾನ್ಸುಲ್ ಜನರಲ್ ಜೋನಾಸ್ ಬ್ರನ್ಶ್‍ವಿಗ್ ಅವರು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಸೋಮವಾರ ಬೆಂಗಳೂರಿನಲ್ಲಿ ವಿಸ್ತೃತ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬ್ರನ್ಶ್‍ವಿಗ್, ‘ಸ್ವಿಟ್ಜರ್ಲೆಂಡ್ ಮತ್ತು ಕರ್ನಾಟಕದ ನಡುವೆ ಇರುವ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಇಂಡೋ-ಸ್ವಿಸ್ ಇನ್ನೋವೇಶನ್ ಪ್ಲಾಟ್‍ಫಾರಂ ಎನ್ನುವ ಸಾಂಸ್ಥಿಕ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಬಯಲಾಜಿಕಲ್ ಸೈನ್ಸಸ್(ಎನ್‍ಸಿಬಿಎಸ್)ನಲ್ಲಿ ಮೂರು ದಿನಗಳ ಸಮಾವೇಶ ನಡೆಸುವ ಮೂಲಕ ಈ ವೇದಿಕೆಗೆ ಚಾಲನೆ ನೀಡಲಾಗುವುದು. ಇದರಲ್ಲಿ ಭಾರತ ಮತ್ತು ಸ್ವಿಸ್‍ಗಳ ತಲಾ 25 ಪರಿಣಿತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಕರ್ನಾಟಕದಲ್ಲಿ ಸ್ವಿಟ್ಜರ್ಲೆಂಡ್‍ನ 49 ಕಂಪೆನಿಗಳು ಸಕ್ರಿಯವಾಗಿದ್ದು, 17,800 ಉದ್ಯೋಗಾವಕಾಶ ಸೃಷ್ಟಿಸಿವೆ. ಇದರ ಪೈಕಿ ಸರಿಸುಮಾರು 40 ಕಂಪೆನಿಗಳು ರಾಜ್ಯದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿವೆ. ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳಲಿರುವ ಸಮಾವೇಶದಲ್ಲಿ ಆಂಟಿಮೈಕ್ರೋಬಯಲ್ ರೆಸಿಸ್ಟೆನ್ಸ್ (ಎಎಂಆರ್) ಕುರಿತು ಹೆಚ್ಚಿನ ಗಮನ ಹರಿಸುವುದು ಮುಖ್ಯ ಉದ್ದೇಶವಾಗಿದೆ. ಇದು ಅಂತಿಮವಾಗಿ ಶಿಕ್ಷಣ ಕ್ಷೇತ್ರ ಮತ್ತು ಉದ್ಯಮದ ನಡುವಿನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಲು ನೆರವಾಗಲಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ 30 ವರ್ಷಗಳಿಂದ ಹಲವು ಸ್ವಿಸ್ ಉದ್ದಿಮೆಗಳಿವೆ. ಒಟ್ಟಾರೆಯಾಗಿ ತಮ್ಮ ದೇಶದ ಕಂಪೆನಿಗಳು ಭಾರತದಲ್ಲಿ ಹೂಡುತ್ತಿರುವ ಬಂಡವಾಳ ಪ್ರಮಾಣವು 2015ರಿಂದ 2022ರ ನಡುವೆ ಶೇ.53ರಷ್ಟು ಏರಿಕೆ ಕಂಡಿದೆ. ಹಾಗೆಯೇ ಭಾರತದ ಕಂಪೆನಿಗಳು ಸ್ವಿಸ್‍ನಲ್ಲಿ ಹೂಡುತ್ತಿರುವ ಬಂಡವಾಳದಲ್ಲೂ ಕಳೆದ ಏಳು ವರ್ಷಗಳಲ್ಲಿ ಶೇ.9ರಷ್ಟು ಬೆಳವಣಿಗೆ ಕಂಡುಬಂದಿದೆ ಎಂದು ಅವರು ವಿವರಿಸಿದರು.

ಇದಕ್ಕೆ ಸ್ಪಂದಿಸಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಭಾರತ ಒಂದು ಬೃಹತ್ ರಾಷ್ಟ್ರವಾಗಿದ್ದು, ಇಲ್ಲೂ ರಚನಾತ್ಮಕ ಪರಿವರ್ತನೆಗಳು ಕಾಣಿಸುತ್ತಿವೆ. ಬೆಂಗಳೂರಿನಲ್ಲಿ ಭಾರತೀಯ ವಿಜ್ಞಾನ ಮಂದಿರದಂತಹ ಹತ್ತಾರು ಅತ್ಯುತ್ತಮ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಿದ್ದು, ಸ್ವಿಸ್ ಕಂಪೆನಿಗಳು ಇವುಗಳ ಜತೆಗೂಡಿ ಅಧ್ಯಯನ ಮತ್ತು ಸಹಭಾಗಿತ್ವ ನಡೆಸಬೇಕು. ಇದಕ್ಕೆ ಸರಕಾರವು ಮುಕ್ತ ಅವಕಾಶ ನೀಡಲಿದೆ ಎಂದರು.

ಡಿಕಾರ್ಬನೈಸೇಷನ್, ಪರಿಸರಸ್ನೇಹಿ ಇಂಧನ ಇವೆಲ್ಲವೂ ಇಲ್ಲಿ ನಡೆಯಬೇಕಿದೆ. ಇದಕ್ಕಾಗಿ ಎಲ್ಲೆಡೆ ಹಸಿರು ಕವಚವನ್ನು ಸೃಷ್ಟಿಸಬೇಕು. ಇಂತಹ ಆಸಕ್ತಿ ಸಾರ್ವಜನಿಕರಲ್ಲೂ ಹುಟ್ಟಬೇಕು. ಮಂಗಳೂರಿನಲ್ಲಿ ಹಸಿರು ಇಂಧನ ಉತ್ಪಾದಿಸಲು ಸರಕಾರ ಮುಂದಡಿ ಇಟ್ಟಿದ್ದು, ಅಪಾರ ಪ್ರಮಾಣದ ಹೂಡಿಕೆ ಹರಿದು ಬರುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್, ತಮ್ಮ ಸ್ವಂತ ಜಿಲ್ಲೆಯಾದ ವಿಜಯಪುರದಲ್ಲಿ ತಾವು ಸ್ವಯಂ ಆಸಕ್ತಿಯಿಂದ 1.5 ಕೋಟಿ ಸಸಿನೆಟ್ಟಿರುವ ಕೋಟಿ ವೃಕ್ಷ ಅಭಿಯಾನದ ವಿಡಿಯೋ ತುಣಕನ್ನು ಸ್ವಿಸ್ ಕಾನ್ಸುಲ್ ಜನರಲ್‍ಗೆ ತೋರಿಸಿದರು. ಮಾತುಕತೆಯ ವೇಳೆ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಉದ್ಯೋಗ ಮಿತ್ರದ ಸಿಇಒ ದೊಡ್ಡ ಬಸವರಾಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X