Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಸರಕಾರ ಕೆಟ್ಟು ದುರಸ್ತಿಯಾಗದೆ...

ರಾಜ್ಯ ಸರಕಾರ ಕೆಟ್ಟು ದುರಸ್ತಿಯಾಗದೆ ಸ್ಥಗಿತಗೊಂಡಿದೆ: ಆರ್.ಅಶೋಕ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ14 Feb 2024 9:02 PM IST
share
ರಾಜ್ಯ ಸರಕಾರ ಕೆಟ್ಟು ದುರಸ್ತಿಯಾಗದೆ ಸ್ಥಗಿತಗೊಂಡಿದೆ: ಆರ್.ಅಶೋಕ್ ಟೀಕೆ

ಬೆಂಗಳೂರು: ರಾಜ್ಯ ಸರಕಾರ ಕೆಟ್ಟು ದುರಸ್ತಿಯಾಗದೆ ಸ್ಥಗಿತಗೊಂಡಿದ್ದು, ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯುತ್ತಿದೆ. ಸಚಿವರು ಸಹ ದಾರಿ ಕಾಣದಂತಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಬುಧವಾರ ವಿಧಾನಸಭೆಯ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಡಿ ಮಾತನಾಡಿದ ಅವರು, ತುಳಿತಕ್ಕೊಳಗಾದ ದಲಿತರಿಗೆ ಮೀಸಲಿಟ್ಟ 11,400 ಕೋಟಿ ರೂ. ಬೇರೆ ಕಡೆಗೆ ಬಳಸಿದ್ದಾರೆ. ಹಿಂದುಳಿದವರ ಚಾಂಪಿಯನ್ ಎಂದು ಹೇಳಿಕೊಂಡು ಈ ರೀತಿ ಮಾಡುತ್ತಿದ್ದಾರೆ. ಇಂತಹ ಘನ ಕಾರ್ಯಕ್ಕೆ ಆ ಹಣ ಬಳಸಿದ್ದೇವೆ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು.

ಬಿಜೆಪಿ ಸರಕಾರ ರೈತರ ಮಕ್ಕಳಿಗಾಗಿ ವಿದ್ಯಾನಿಧಿ ಯೋಜನೆಯನ್ನು ರೂಪಿಸಿದ್ದು, ಅದನ್ನು ಕಾಂಗ್ರೆಸ್ ಸರಕಾರ ರದ್ದು ಮಾಡಿದೆ. ಭಾಗ್ಯಲಕ್ಷ್ಮೀ, ಕಿಸಾನ್ ಸಮ್ಮಾನ್, ಸ್ವಾಮಿ ವಿವೇಕಾನಂದ ಯುವಶಕ್ತಿ, ಭೂಸಿರಿ, ಶ್ರಮಶಕ್ತಿ, ಬಸ್ ಪಾಸ್ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ರದ್ದುಪಡಿಸಿದೆ. ಕಾರ್ಮಿಕ ಇಲಾಖೆಯಿಂದ 1-5 ತರಗತಿಯ ಮಕ್ಕಳಿಗೆ 5 ಸಾವಿರ ರೂ. ವಿದ್ಯಾರ್ಥಿವೇತನ ನೀಡುತ್ತಿದ್ದು, ಅದನ್ನು 1,100 ರೂ.ಗೆ ಇಳಿಸಲಾಗಿದೆ ಎಂದು ಅವರು ಹೇಳಿದರು.

6-7 ತರಗತಿಯ ಮಕ್ಕಳಿಗೆ 5 ಸಾವಿರ ರೂ. ನೀಡುತ್ತಿದ್ದರೆ 1,250 ರೂ.ಗೆ ಇಳಿಸಲಾಗಿದೆ. 8-9 ತರಗತಿಯ ಮಕ್ಕಳಿಗೆ 12 ಸಾವಿರ ರೂ. ನೀಡುತ್ತಿದ್ದರೆ ಈಗ 3 ಸಾವಿರ ರೂ. ನೀಡಲಾಗುತ್ತಿದೆ. ಎಂಬಿಬಿಎಸ್‍ಗೆ 25 ಸಾವಿರ ರೂ. ನೀಡುತ್ತಿದ್ದರೆ ಈಗ 11 ಸಾವಿರ ರೂ.ಗೆ ಇಳಿಸಲಾಗಿದೆ. ಎಂಟೆಕ್‍ಗೆ 60 ಸಾವಿರ ರೂ. ನೀಡುತ್ತಿದ್ದರೆ ಅದನ್ನು 11 ಸಾವಿರ ರೂ.ಗೆ ತಂದಿದ್ದಾರೆ ಎಂದು ದೂರಿದರು.

ಕೇಂದ್ರ ಸರಕಾರದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರ ಅಭಿವೃದ್ಧಿಗೆ 5,000 ಕೋಟಿ ರೂ. ದೊರೆತಿದೆ. 2009-14ರ ಅವಧಿಯಲ್ಲಿ ರೈಲ್ವೆ ಯೋಜನೆಗೆ 835 ಕೋಟಿ ರೂ. ಸಿಕ್ಕರೆ, ಮೋದಿ ಅವಧಿಯಲ್ಲಿ 3,424 ಕೋಟಿ ರೂ. ದೊರೆತಿದೆ. ಕರಾವಳಿ ಅಭಿವೃದ್ಧಿಗೆ ಸಾಗರಮಾಲಾ ಯೋಜನೆಯಡಿ 1,441 ಕೋಟಿ ರೂ. ದೊರೆತಿದೆ. ಆದ್ದರಿಂದ ಕಾಂಗ್ರೆಸ್ ಹೇಳುವಂತೆ ಕೇಂದ್ರ ಸರ್ಕಾರದಿಂದ ಅನ್ಯಾಯ ಎನ್ನುವುದು ತಪ್ಪು. ಮನಮೋಹನ್ ಸಿಂಗ್ ಸರ್ಕಾರಕ್ಕಿಂತ 3-4 ಪಟ್ಟು ಅಧಿಕ ಅನುದಾನ ದೊರೆತಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X