Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯೋತ್ಸವ ಪುರಸ್ಕೃತ ಯಕ್ಷಗಾನ ಕಲಾವಿದ...

ರಾಜ್ಯೋತ್ಸವ ಪುರಸ್ಕೃತ ಯಕ್ಷಗಾನ ಕಲಾವಿದ ಅವಹೇಳನಕಾರಿ ಮಾತನಾಡಿದ ವೀಡಿಯೊ ವೈರಲ್

ಆರ್ಗೋಡು ಮೋಹನದಾಸ್ ಶೆಣೈ ಕೋಮುವಾದಿ ಹೇಳಿಕೆಗೆ ವ್ಯಾಪಕ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ2 Nov 2023 5:29 PM IST
share
ರಾಜ್ಯೋತ್ಸವ ಪುರಸ್ಕೃತ ಯಕ್ಷಗಾನ ಕಲಾವಿದ ಅವಹೇಳನಕಾರಿ ಮಾತನಾಡಿದ ವೀಡಿಯೊ ವೈರಲ್

ಮಂಗಳೂರು: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಯಕ್ಷಗಾನ ಪ್ರಸಂಗವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ಯಕ್ಷಗಾನ ಪ್ರಸಂಗದ ವೀಡಿಯೋ ತುಣುಕಿನಲ್ಲಿ ಯಕ್ಷಗಾನ ಪಾತ್ರಧಾರಿ ಆರ್ಗೋಡು ಮೋಹನದಾಸ್ ಶೆಣೈ ಮುಸ್ಲಿಂ ವ್ಯಕ್ತಿಯಂತೆ ಕಾಣುವ ಪಾತ್ರಧಾರಿ ಜೊತೆಗಿನ ಸಂಭಾಷಣೆಯಲ್ಲಿ ಮುಸ್ಲಿಮ್ ಸಮುದಾಯವನ್ನು ಅವಹೇಳನ ಮಾಡಿ ಮಾತಾಡಿದ್ದಾರೆ.

ವಿಡಿಯೋದಲ್ಲಿ ಕಾಣುತ್ತಿರುವ ಅವಹೇಳನಕಾರಿ ಮಾತಾಡಿರುವ ಪಾತ್ರಧಾರಿ ಆರ್ಗೋಡು ಮೋಹನದಾಸ್ ಶೆಣೈ ಅವರೇ ಎಂದು ಯಕ್ಷಗಾನ ಕ್ಷೇತ್ರದಲ್ಲಿ ದಶಕಗಳಿಂದ ಇರುವ ಹೆಸರು ಬಹಿರಂಗ ಪಡಿಸಲು ಇಚ್ಛಿಸದ ನಾಲ್ವರು ವಾರ್ತಾಭಾರತಿಗೆ ಖಚಿತಪಡಿಸಿದ್ದಾರೆ. ಬಡಗುತಿಟ್ಟಿನ ಹಾಸ್ಯ ಪಾತ್ರಧಾರಿ ರಮೇಶ್ ಭಂಡಾರಿ ಮುಸ್ಲಿಂ ವ್ಯಾಪಾರಿಯ ವೇಶದಲ್ಲಿದ್ದರೆ ವಿಕ್ರಮಾದಿತ್ಯನ ವೇಷದಲ್ಲಿ ಬಡಗುತಿಟ್ಟಿನ ಪ್ರಧಾನ ವೇಷಧಾರಿ ಆರ್ಗೋಡು ಮೋಹನ್ ದಾಸ್ ಶೆಣೈ ಈ ಪಾತ್ರ ಮಾಡುತ್ತಾ, ಇದೇ ಹೇಳಿಕೆ ನೀಡುತ್ತಾ ಬಂದಿದ್ದಾರೆ ಎಂದು ದಶಕಗಳಿಂದ ಯಕ್ಷಗಾನ ವೀಕ್ಷಿಸುವ ಇನ್ನೊಬ್ಬರೂ ವಾರ್ತಾಭಾರತಿಗೆ ಮಾಹಿತಿ ನೀಡಿದ್ದಾರೆ.

"ನಿಮ್ಮ ಜಾತಿಯೇ ಹಾಗೆ, ಎಲ್ಲ ಬದಲಾವಣೆ.... ನಾವು ಎಡಗಡೆಯಿಂದ ಬರೆದರೆ, ನೀವು ಬಲಗಡೆಯಿಂದ ಬರೆಯುತ್ತೀರಿ... ನಾವು ಶಾಸ್ತ್ರ ಓದಿದಾಗ ನೀವು ಅಲ್ಲಾಹು ಅಂತ ಬೊಬ್ಬೆ ಹಾಕುತ್ತೀರಿ... ನಮಗೆ ಅದು ಏನು ಅರ್ಥ ಆಗುತ್ತದೆ? ನಾವು ಹೇಳಿದ್ದು ಅಲ್ಲ ಅಂತ ನೀವು ಹೇಳುತ್ತೀರಿ ಅಂತ. ಎಲ್ಲವನ್ನು ಬದಲಾಯಿಸುತ್ತೀರಿ ನೀವು.... ಈ ತಿನ್ನುವ ಸ್ಥಳವನ್ನು ಬದಲಾಯಿಸಿಲ್ಲ ಯಾಕೆ?" ಎಂದು ಆರ್ಗೋಡು ಮೋಹನ್ ದಾಸ್ ಶೆಣೈ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ಯಕ್ಷಗಾನ ಪ್ರಸಂಗದ ವೀಡಿಯೊ ಈಗ ವೈರಲ್ ಆಗಿದೆ.

ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಲೆಯಲ್ಲೂ ಕೋಮುವಾದಿ ವಿಷ ಬೆರೆಸುವ ಇಂಥವರಿಂದ ಯಕ್ಷಗಾನಕ್ಕೆ ಅವಮಾನ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹವರಿಗೆ ರಾಜ್ಯೋತ್ಸವ ದಂತಹ ಪ್ರತಿಷ್ಠಿತ ಪ್ರಶಸ್ತಿ ಕೊಟ್ಟಿದ್ದು ಹೇಗೆ ಎಂದೂ ಪ್ರಶ್ನಿಸುತ್ತಿದ್ದಾರೆ.

ಈ ಬಗ್ಗೆ 'ವಾರ್ತಾಭಾರತಿ' ಆರ್ಗೋಡು ಮೋಹನದಾಸ್ ಶೆಣೈಯವರನ್ನು ಸಂಪರ್ಕಿಸಿದಾಗ "ನಾನು ಆ ವಿಡಿಯೋ ನೋಡಿಲ್ಲ" ಎಂದರು. 73 ವರ್ಷದ ಮೋಹನದಾಸ್ ಶೆಣೈ 2 ವರ್ಷಗಳ ಹಿಂದೆ ವೃತ್ತಿ ತಿರುಗಾಟದಿಂದ ನಿವೃತ್ತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X