Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ :...

ಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ10 July 2026 8:02 PM IST
share
ಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ : ಸಿಎಂ ಡಿ.ಕೆ.ಶಿವಕುಮಾರ್
► "ಆ.26ಕ್ಕೆ ಗಜಪೂಜೆ, ಅ.11 ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ" ► "ಏರ್ ಶೋ ನಡೆಸುವ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ"

ಬೆಂಗಳೂರು: “ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ನಾಡಹಬ್ಬ ದಸರಾ- 2026 ಆಚರಣೆ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

“ಈ ಬಾರಿಯ ದಸರಾ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 26ರಂದು ಬೆಳಗ್ಗೆ 10 ಗಂಟೆಗೆ ಗಜಪೂಜೆ ನಡೆಯಲಿದೆ. ದಸರಾ ಉದ್ಘಾಟನೆ ಅಕ್ಟೋಬರ್ 11ರಂದು ಬೆಳಗ್ಗೆ 11.50ಕ್ಕೆ ನಿಗದಿ ಮಾಡಲಾಗಿದೆ. ಜಂಬೂ ಸವಾರಿ, ನಂದಿ ಪೂಜೆ ಕಾರ್ಯಕ್ರಮವನ್ನು ಅಕ್ಟೋಬರ್ 21ರಂದು ಮಧ್ಯಾಹ್ನ 1.30ಕ್ಕೆ ನಡೆಸಲಾಗುವುದು. ಜಂಬೂ ಸವಾರಿ ಪುಷ್ಪಾರ್ಚನೆಯನ್ನು ಅಂದೇ ಸಂಜೆ 4.10ಕ್ಕೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಏರ್ ಶೋ ನಡೆಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ

“ಇಂದಿನ ಸಭೆಯಲ್ಲಿ ಅನೇಕ ಸಭೆಗಳು ಬಂದಿದೆ. ದಸರಾ ಆಯೋಜನೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಕಾರ್ಯಕಾರಿ ಸಮಿತಿ ರಚನೆ ಮಾಡಲಿದ್ದೇನೆ. ಈ ಬಾರಿ ಏರ್ ಶೋ ನಡೆಸಲು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಬೇಕು ಎಂದು ಸಲಹೆ ಬಂದಿದೆ. ಹೀಗಾಗಿ ಈ ವಿಚಾರವಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು. ದಸರಾ ಉದ್ಘಾಟನೆಯನ್ನು ಯಾರ ಕೈಯಿಂದ ಮಾಡಿಸಬೇಕು ಎಂಬ ತೀರ್ಮಾನವನ್ನು ಸಮಿತಿಯು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ. ನಾನು ಚರ್ಚೆ ಮಾಡಿ ತೀರ್ಮಾನ ಮಾಡಲಿದ್ದೇನೆ” ಎಂದು ತಿಳಿಸಿದರು.

ಬರಗಾಲ ಕಾರಣಕ್ಕೆ ದಸರಾ ನಿಲ್ಲಿಸುವ, ಸರಳವಾಗಿ ಆಚರಿಸುವ ಪ್ರಶ್ನೆ ಇಲ್ಲ

“ಐತಿಹಾಸಿಕ ಮೈಸೂರು ದಸರಾ ಪಾರಂಪರಿಕ ಉತ್ಸವವಾಗಿದ್ದು, ನಮ್ಮ ರಾಜ್ಯದ ಹೆಮ್ಮೆ. ಪ್ರತಿ ವರ್ಷ ಉತ್ಸವದ ಸ್ವರೂಪ ಬದಲಾಗುತ್ತಿದೆ. ಹೊಸ ಹೊಸ ಆಲೋಚನೆ, ಆವಿಷ್ಕಾರಗಳೊಂದಿಗೆ ಕಾರ್ಯಕ್ರಮ ಅಳವಡಿಸಲು ಬೇಡಿಕೆ ಬರುತ್ತಿದೆ. ಅಂತಾರಾಷ್ಟ್ರೀಯ ಖ್ಯಾತಿಗೆ ತಕ್ಕ ಹಾಗೆ ನಮ್ಮ ಸಂಸ್ಕೃತಿಗೆ ಅನುಗುಣವಾಗಿ ಕಾರ್ಯಕ್ರಮ ಮಾಡಲಾಗುವುದು. ಬರಗಾಲ ಎಂಬ ಕಾರಣಕ್ಕೆ ಸ್ವಲ್ಪ ಹಣ ಉಳಿಸಲು ಹೋಗಿ ನಮ್ಮ ಸಂಸ್ಕೃತಿ ಪರಂಪರೆಯ ವೈಭವವನ್ನು ಕಡಿಮೆ ಮಾಡುವುದು ಬೇಡ. ಬರಗಾಲ ಕಾರಣದಿಂದ ದಸರಾ ನಿಲ್ಲಿಸೋ, ಸರಳವಾಗಿ ಆಚರಣೆ ಮಾಡೋ ಪ್ರಶ್ನೆಯೇ ಇಲ್ಲ” ಎದು ತಿಳಿಸಿದರು.

“ಕಳೆದ ಮೂರು ವರ್ಷಗಳಿಂದ ನಮ್ಮ ಸರ್ಕಾರ ಚೆಸ್ಕಾಂ ಮೂಲಕ ಮೈಸೂರು ನಗರದಲ್ಲಿ ದೀಪಾಲಂಕಾರ ಮಾಡಿ ವೈಭವಯುತವಾಗಿ ಆಚರಣೆ ಮಾಡುತ್ತಿದ್ದೇವೆ. ಶಕ್ತಿ ಯೋಜನೆ ನಿಮಿತ್ತ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಿದೆ. ಶಕ್ತಿ ಯೋಜನೆಯಿಂದಾಗಿ ಕಳೆದ ಎರಡು ಮೂರು ವರ್ಷಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ರಾಷ್ಟ್ರಮಟ್ಟದ ಗಾಯಕರನ್ನು ಕರೆಸಿ ಕಾರ್ಯಕ್ರಮ ಮಾಡಲಾಗಿದೆ. ಈ ಬಾರಿಯ ಆಚರಣೆಗೆ ಸಂಬಂಧಿಸಿದಂತೆ ಮೈಸೂರಿನ ಶಾಸಕರಾದ ತನ್ವೀರ್ ಸೇಠ್, ಶ್ರೀವತ್ಸ, ಹರೀಶ್ ಗೌಡರು, ಜಿ.ಟಿ ದೇವೇಗೌಡರು, ಮಹದೇವಪ್ಪ ಅವರು ಸಹಕಾರ ನೀಡಿದ್ದಾರೆ. ಸಂಸತ್ ಸದಸ್ಯರು ಅನೇಕ ಸಲಹೆ ನೀಡಿದ್ದಾರೆ” ಎಂದು ತಿಳಿಸಿದರು.

ಸಮಿತಿ ಹೆಸರಿನಲ್ಲಿ ರಾಜಕಾರಣ ಬಿಡಬೇಕು

“ಸಮಿತಿ ರಚನೆ ಹೆಸರಿನಲ್ಲಿ ರಾಜಕಾರಣ ಮಾಡೋದು ಬಿಡಬೇಕು. ಇದರಲ್ಲಿ ನಾವು ರಾಜಕಾರಣ ಮಾಡುವುದಿಲ್ಲ, ಅದರ ಅವಶ್ಯಕತೆಯೂ ಇಲ್ಲ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದೇವೆ. 8 ವರ್ಷಗಳ ಕಾಲ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಈ ಹಬ್ಬವನ್ನು ಉತ್ತಮವಾಗಿ ನಡೆಸಿಕೊಂಡು ಬಂದಿದ್ರು. ನಾವು ಅದನ್ನು ಇನ್ನಷ್ಟು ಉತ್ತಮವಾಗಿ ಮುಂದುವರೆಸಿಕೊಂಡು ಹೋಗೋಣ ಎಂದು ನಮ್ಮ ಸಹೋದ್ಯೋಗಿಗಳಾದ ಪರಮೇಶ್ವರ್, ಜಾರ್ಜ್, ಯತೀಂದ್ರ ಅವರು ಸಲಹೆ ನೀಡುತ್ತಿದ್ದಾರೆ. ಈ ಬಾರಿಯೂ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ವಿಜೃಂಭಣೆ ಎಂದರೆ ಕೇವಲ ಹಣ ವೆಚ್ಚ ಮಾಡುವುದಷ್ಟೇ ಅಲ್ಲ. ಹೊಸ ಚಿಂತನೆಗಳನ್ನು ಗಮನದಲ್ಲಿಟ್ಟುಕೊಂಡು ನಮ್ಮ ಪರಂಪರೆಯನ್ನು ಉಳಿಸಿಕೊಂಡು ಹೋಗುವುದಾಗಿದೆ” ಎಂದು ತಿಳಿಸಿದರು.

ಕುಡಿಯುವ ನೀರಿಗೆ ಸಮಸ್ಯೆಯಾಗುವುದಿಲ್ಲ:

“ಈ ವರ್ಷ ಬರಗಾಲದ ಛಾಯೆ ಕಾಣುತ್ತಿದ್ದು, ಕಲಬುರ್ಗಿ, ಬೆಳಗಾವಿ ವಿಭಾಗದ ಪ್ರವಾಸ ಮಾಡಿದ್ದೇನೆ. ಬೆಳಗಾವಿ ಭಾಗದಲ್ಲಿ ಸ್ವಲ್ಪ ಮಳೆಯಾಗಿದೆ. ಕಳೆದ ಒಂದು ವಾರದಲ್ಲಿ ಚೇತರಿಕೆಯಾಗಿದ್ದು, ಕುಡಿಯುವ ನೀರಿಗೂ ಸಮಸ್ಯೆಯಾಗುವ ಆತಂಕವಿತ್ತು. ಆದರೆ ಕಳೆದ ಒಂದು ವಾರದ ಮಳೆಯಿಂದ ಆತಂಕ ತಪ್ಪಿದೆ. ಎಷ್ಟೇ ಕಷ್ಟವಾದರೂ ಕುಡಿಯುವ ನೀರು ಪೂರೈಕೆಗೆ ನೀರು ಲಭ್ಯವಿದೆ. ಈ ಬಾರಿ ನಮಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ. ರೈತರು ತಮ್ಮ ಬೇಡಿಕೆ ಇಟ್ಟಿದ್ದಾರೆ. ಪರಿಸ್ಥಿತಿ ಹಾಗೂ ಕಾನೂನು ಚೌಕಟ್ಟು ನೋಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

Tags

DasaraCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X